ಶೇ.10 ಮೀಸಲಾತಿ ಜಾರಿಗೆ ಬ್ರಾಹ್ಮಣರ ಆಗ್ರಹ

ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

Team Udayavani, Feb 24, 2021, 6:19 PM IST

ಶೇ.10 ಮೀಸಲಾತಿ ಜಾರಿಗೆ ಬ್ರಾಹ್ಮಣರ ಆಗ್ರಹ

ಕಲಬುರಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರ್ಥಿಕವಾಗಿ ಹಿಂದುಳಿದಿರುವ ಮೀಸಲಾತಿ ವಂಚಿತ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿಯನ್ನು ರಾಜ್ಯದಲ್ಲಿ ಕೂಡಲೇ ಅನುಷ್ಠಾನ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬ್ರಾಹ್ಮಣ ಸಂಘದ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಕಡು ಬಡವರಿಗೆ ಶೇ.10 ಮೀಸಲಾತಿ ಕಲ್ಪಿಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿ ಬಹುದಿನಗಳೇ ಕಳೆದಿವೆ. ಆದರೆ, ರಾಜ್ಯದಲ್ಲಿ ಇನ್ನೂ ಈ ಆದೇಶ ಅನುಷ್ಠಾನಗೊಂಡಿಲ್ಲ. ಕೇಂದ್ರ ಸರ್ಕಾರದ ಆದೇಶದಂತೆ ಮೀಸಲಾತಿ ಜಾರಿಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಒತ್ತಾಯಿಸಿದರು.

ರಾಜ್ಯದಲ್ಲಿ ಇತ್ತೀಚೆಗೆ ತೆರೆಕಂಡಿರುವ “ಪೊಗರು’ ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಲಾಗಿದೆ. ಆದ್ದರಿಂದ ಸಮುದಾಯಕ್ಕೆ ನೋವು ಮಾಡುವಂತೆ ಆಗಿದ್ದು, ಕೂಡಲೇ ಚಿತ್ರದ ನಿರ್ಮಾಪಕ ನಿರ್ದೇಶಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಸಿನಿಮಾದಲ್ಲಿರುವ ಅವಹೇಳನಕಾರಿ ದೃಶ್ಯ ಮತ್ತು ಸಂಭಾಷಣೆಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಕಲಬುರಗಿ ನಗರದ ನ್ಯೂ ರಾಘವೇಂದ್ರ ಕಾಲೋನಿಯಲ್ಲಿರುವ ಸ್ಮಶಾನ ಭೂಮಿಯಲ್ಲಿ ಕೆಲ ಕಿಡಿಗೇಡಿಗಳು ಶವ ಸಂಸ್ಕಾರಕ್ಕೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಬ್ರಾಹ್ಮಣ ಸಮುದಾಯುದವರು ಮಾತ್ರವಲ್ಲದೇ ಅನೇಕ ಸಮುದಾಯದವರೂ ಶವ ಸಂಸ್ಕಾರ ನೆರವೇರಿಸುತ್ತಿದ್ದಾರೆ. ಶವ ಸಂಸ್ಕಾರದ ಸಮಯದಲ್ಲಿ ಅವಾಚ್ಯ ಶಬ್ದಗಳಿಂದ ಬೈಯುವುದು ಮತ್ತು ಕಲ್ಲು ತೂರಾಟ ಮಾಡುವ ಮಾಡುತ್ತಿದ್ದಾರೆ ಎಂದು ದೂರಿದರು.

ಸ್ಮಶಾನ ಭೂಮಿಯಲ್ಲಿ ವಿದ್ಯುತ್‌ ಚಿತಾಗಾರ ಅಳವಡಿಸಲಾಗಿದ್ದು, ಈ ಚಿತಾಗಾರ ಕೆಟ್ಟು ನಿಂತಾಗ ಎಲ್ಲರೂ ಪರ್ಯಾಯವಾಗಿ ಕಟ್ಟಿಗೆಗಳಿಂದ ಶವ ದಹನ ಮಾಡುತ್ತಾರೆ. ಕಿಡಿಗೇಡಿಗಳ ಹಾವಳಿ ಬಗ್ಗೆ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಬಿಹಾರದ ಬೆಗುಸರಾಯ್‌ನಲ್ಲಿ ಪಂಡಿತ ಬ್ರಾಹ್ಮಣ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ನಡೆದಿದ್ದು , ಈ ಪ್ರಕರಣದ ಆರೋಪಿಗಳ ವಿರುದ್ದ ಕಠಿಣ
ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಪ್ರತಿಭಟನಾಕಾರರು ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಮುಖಂಡರಾದ ಶ್ರೀಪಾದ ಜೋಶಿ, ಶಾಮರಾವ ಕುಲಕರ್ಣಿ, ಪ್ರಸಾದ್‌ ಎಚ್‌., ಜಯತೀರ್ಥ, ಕೃಷ್ಣಾಜಿ ಕುಲಕರ್ಣಿ, ನವಲಿ ಕೃಷ್ಣಾಚಾರ್ಯ, ಉದಯ ಪಾಟೀಲ, ರಾಘವೇಂದ್ರ ಕುಲಕರ್ಣಿ, ಪ್ರಹ್ಲಾದ ಬಿ.ಕೆ., ಮದನ ಕುಲಕರ್ಣಿ, ಚಂದ್ರಿಕಾ, ಸರೋಜಿನಿ, ಸುಲೋಚನಾ, ರಾಧಾ ಕುಲಕರ್ಣಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.