ದೇಗಲಮಡಿ ಸೇತುವೆ ರಕ್ಷಣಾಗೋಡೆ ನಿರ್ಮಿಸಿ
Team Udayavani, Dec 4, 2021, 12:18 PM IST
ಚಿಂಚೋಳಿ: ತಾಲೂಕಿನ ದೇಗಲಮಡಿ ಗ್ರಾಮದ ಹತ್ತಿರ ಹರಿಯುವ ಸಣ್ಣ ನದಿಗೆ ನಿರ್ಮಿಸಿದ ಸೇತುವೆಗೆ ರಕ್ಷಣಾಗೋಡೆ ಕಟ್ಟಲು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಸ್ತಾನ್ ಪಟೇಲ ಕೋಡ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಗಲಮಡಿ ಗ್ರಾಮದ ಕೂಡು ರಸ್ತೆಗೆ ಅನೇಕ ವರ್ಷಗಳ ಹಿಂದೆ ಕೆಳಮಟ್ಟದ ಸೇತುವೆ ನಿರ್ಮಿಸಲಾಗಿದೆ. ಆದರೆ ಎರಡು ಬದಿಗಳಲ್ಲಿ ರಕ್ಷಣಾಗೋಡೆ ನಿರ್ಮಿಸದೇ ಇರುವುದರಿಂದ ಮಳೆಗಾಲದಲ್ಲಿ ತುಂಬಿ ಹರಿಯುವ ನಾಲೆ ದಾಟಲು ಜನತೆ ಭಯಪಡುವಂತೆ ಆಗಿದೆ ಎಂದು ಹೇಳಿದರು.
ರಾತ್ರಿ ಸಮಯದಲ್ಲಿ ಸೇತುವೆ ಕಾಣದೇ ಇರುವುದರಿಂದ ದನಕರುಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಅಲ್ಲದೇ ದ್ವಿಚಕ್ರ ವಾಹನ ಸವಾರರು ಸೇತುವೆ ಮೇಲೆ ಸಂಚರಿಸುವಾಗ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಆದ್ದರಿಂದ ಈ ಸೇತುವೆಗೆ ರಕ್ಷಣಾಗೋಡೆ ನಿರ್ಮಿಸಿಕೊಡಿ ಎಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಶಾಸಕ ಡಾ| ಅವಿನಾಶ ಜಾಧವ ಅವರಿಗೆ ಗ್ರಾಮಸ್ಥರು ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದೇಗಲಮಡಿ ಗ್ರಾಮದೊಳಗೆ ಸರಕು ತುಂಬಿದ ಭಾರವಾದ ಲಾರಿ, ಆಟೋ, ಜೀಪು, ಬಸ್ ಗಳು ಆಗಮಿಸಲು ತೊಂದರೆ ಪಡುವಂತೆ ಆಗಿದೆ. ಆದ್ದರಿಂದ ಶಾಸಕರು ಕೂಡಲೇ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!