ದೋಟಿಕೊಳ ಬಸ್ ಸಂಚಾರಕ್ಕೆ ಚಾಲನೆ
Team Udayavani, Jan 14, 2022, 12:10 PM IST
ಚಿಂಚೋಳಿ: ತಾಲೂಕಿನ ದೋಟಿಕೊಳ, ತಾಜಲಾಪುರ ಗ್ರಾಮಗಳ ವಿದ್ಯಾರ್ಥಿ ಗಳಿಗೆ, ಗ್ರಾಮಸ್ಥರಿಗೆ ಬಸ್ ಅನುಕೂಲ ಮಾಡುವಂತೆ ನಡೆಸಿದ ಹೋರಾಟಕ್ಕೆ ಜಯ ತಂದಿದೆ ಎಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ ಹೇಳಿದರು.
ತಾಲೂಕಿನ ದೋಟಿಕೊಳ ಗ್ರಾಮಕ್ಕೆ ಆಗಮಿಸಿದ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೋಟಿಕೊಳ, ತಾಜಲಾಪುರ ಗ್ರಾಮಗಳ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಬಾಣಂತಿಯರಿಗೆ, ಅಂಗವಿಕಲರಿಗೆ ಸರಿಯಾಗಿ ಬಸ್ ಸಂಚಾರ ಇಲ್ಲದ ಕಾರಣ ತೊಂದರೆ ಆಗುತ್ತಿತ್ತು. ಈ ಕುರಿತು ಚಿಂಚೋಳಿ ಘಟಕದ ಎದುರು ಪ್ರತಿಭಟನೆ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಅಧಿಕಾರಿಗಳು ಬೇಡಿಕೆಗೆ ಸ್ಪಂದಿಸಿದ್ದಕ್ಕೆ ಗ್ರಾಮಸ್ಥರಲ್ಲಿ ಹರ್ಷ ಉಂಟಾಗಿದೆ ಎಂದರು.
ಗ್ರಾಮಸ್ಥರು ಬಸ್ ಚಾಲಕರು, ನಿರ್ವಾಹಕರನ್ನು ಸನ್ಮಾನಿಸಿದರು. ತಾಲೂಕು ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ನಿಯಾಜ ಅಲಿ,ನಾಗರೆಡ್ಡಿ ದೊರನಳ್ಳಿ, ಹಣಮಂತರೆಡ್ಡಿ, ಶೇಖರ ರೆಡ್ಡಿ, ಅಣ್ಣಾರಾವ್ ವಾಡೇದ, ನಾಗರೆಡ್ಡಿ ಬಕ್ಕಾ, ಮಹೇಶ ಪಾಟೀಲ, ಅನಿಲಕುಮಾರ, ತಯಾಬ ಅಲಿ, ಶಾಮಸುಂದರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ