ಪುರಸಭೆ ಚುನಾವಣೆಗೂ ಮುನ್ನ ಲೆಕ್ಕಾಚಾರ


Team Udayavani, Apr 4, 2022, 9:50 AM IST

2wwadi

ವಾಡಿ: ಪಟ್ಟಣದ ಪುರಸಭೆಯ ಐದು ವರ್ಷ ಆಡಳಿತಾವಧಿ ಯಾವಾಗ ಕೊನೆಗೊಳ್ಳುತ್ತದೋ? ಚುನಾವಣೆ ಯಾವಾಗ ಘೋಷಣೆಯಾಗುತ್ತದೆಯೋ? ಎನ್ನುವ ಕಾತುರದಲ್ಲಿರುವ ಆಡಳಿತಾ ರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿಯ ಕಾರ್ಯಕರ್ತರಲ್ಲಿ ತಳಮಳ ಶುರುವಾಗಿದೆ.

ಚುನಾವಣೆ ಘೋಷಣೆಗೂ ಮುನ್ನವೇ ಗೆಲುವಿನ ರಣತಂತ್ರ ಹೆಣೆಯಲು ಎರಡೂ ಪಕ್ಷಗಳ ನಾಯಕರು ಗುಪ್ತ ಸಭೆಗಳನ್ನು ಸಂಘಟಿಸಿ ಪೂರ್ವ ಸಿದ್ಧತೆಗೆ ಮುಂದಾಗಿದ್ದಾರೆ. ಕಾಂಗ್ರೆಸ್‌ ಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ, ಪ್ರತಿಯೊಂದು ವಾರ್ಡ್‌ಗಳ ಮತದಾರರ ಪಟ್ಟಿಗಳನ್ನು ಪಡೆದು ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆ ಆರಂಭಿಸಿದೆ.

ಪುರಸಭೆಯ ಸಾರ್ವತ್ರಿಕ ಚುನಾವಣೆ 2017 ಏ.9ರಂದು ನಡೆದಿದ್ದು, 2017ರ ನವೆಂಬರ್‌ 10ರಂದು ಮೊದಲ ಅವಧಿ ಅಧ್ಯಕ್ಷರಾಗಿ ಕಾಂಗ್ರೆಸ್‌ ನ ಮೈನಾಬಾಯಿ ಗೋಪಾಲ ರಾಠೊಡ, ಉಪಾಧ್ಯಕ್ಷರಾಗಿ ಮಲ್ಲಯ್ಯ ಗುತ್ತೇದಾರ ಪದಗ್ರಹಣ ಮಾಡಿದ್ದರು. ಮೊದಲ 30 ತಿಂಗಳ ಆಡಳಿತ ಅಧಿಕಾರವ 2020ರ ಮೇ 10ರಂದು ಕೊನೆಗೊಂಡಿತು. ಎರಡನೇ ಅವಧಿಯ ಅಧ್ಯಕ್ಷರಾಗಿ ಝರೀನಾಬೇಗಂ, ಉಪಾಧ್ಯಕ್ಷರಾಗಿ ತಿಮ್ಮಯ್ಯ ಪವಾರ 2020ರ ಸೆ.3ರಂದು ಪದಗ್ರಹಣ ಮಾಡಿದ್ದಾರೆ. 2017ರ ಸಾರ್ವತ್ರಿಕ ಚುನಾವಣೆ ನಡೆದ ದಿನಾಂಕದ ಪ್ರಕಾರ 2022 ಏ.9ಕ್ಕೆ ಪುರಸಭೆಯ ಆಡಳಿತದ ಐದು ವರ್ಷ ಅವಧಿ ಪೂರ್ಣಗೊಳ್ಳಲಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣದ ದಿನಾಂಕದ ಪ್ರಕಾರ ಅಡಳಿತಾವಧಿ ಲೆಕ್ಕ ಮಾಡಿದ್ದಾದರೆ ಪ್ರಸಕ್ತ ಸಾಲಿನ ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಲ್ಲಿ ಎರಡು ತಿಂಗಳು ಮುಂಚಿತವಾಗಿಯೇ ಎರಡನೇ ಅವಧಿಯ 28 ತಿಂಗಳು ಪೂರ್ಣವಾಗಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ. ಹಿಂದಿನ ಚುನಾವಣೆಗಳಲ್ಲಿ ಬಹುಮತ ಪಡೆದು ನೇರವಾಗಿ ಪುರಸಭೆ ಗದ್ದುಗೆ ಹಿಡಿಯಲು ಸಾಧ್ಯವಾಗದ ಬಿಜೆಪಿಗೆ ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೇರಬೇಕು ಎನ್ನುವ ಆಶಯವಿದ್ದು, ಬಿಜೆಪಿ ನಾಯಕರು ಸದ್ಯ ಎರಡು ಸುತ್ತಿನ ಸಭೆ ನಡೆಸಿದ್ದಾರೆ.

ಕಳೆದ 15 ವರ್ಷಗಳಿಂದ ಪುರಸಭೆ ಅಧಿಕಾರದಲ್ಲಿರುವ ಕಾಂಗ್ರೆಸ್‌ ತನ್ನ ಪ್ರತಿಷ್ಠೆ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದೆ. ವಿಧಾನಸಭೆ ಚುನಾವಣೆಗೂ ಮುಂಚೆಯೇ ನಡೆಯಲಿರುವ ಚಿತ್ತಾಪುರ ಮತಕ್ಷೇತ್ರದ ವಾಡಿ ಪುರಸಭೆ ಚುನಾವಣೆ ಗೆಲ್ಲುವುದು ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೂ ಸವಾಲಾಗಿದೆ. ಎರಡನೇ ಅವಧಿಯ ಆಡಳಿತದ ಮೂವತ್ತು ತಿಂಗಳು ಪೂರ್ಣಗೊಳ್ಳುತ್ತದೋ ಅಥವಾ ಅದಕ್ಕೂ ಮೊದಲೇ ಸರ್ಕಾರ ಚುನಾವಣೆ ಘೋಷಣೆ ಮಾಡುತ್ತದೋ ಎನ್ನುವ ಗೊಂದಲ ಕಾಂಗ್ರೆಸ್‌-ಬಿಜೆಪಿ ನಾಯಕರನ್ನು ಕಾಡುತ್ತಿದೆ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತಾವಧಿ ಚುನಾವಣೆ ದಿನಾಂಕದಿಂದ ಶುರುವಾಗಿವುದಿಲ್ಲ. ಚುನಾವಣಾಧಿಕಾರಿಗಳು ನಡೆಸುವ ಚುನಾಯಿತ ಸದಸ್ಯರ ಮೊದಲ ಸಭೆಯಿಂದ ಐದು ವರ್ಷ ಅವಧಿಯ ಗಣತಿಯಾಗುತ್ತದೆ. ಎರಡನೇ ಅವಧಿಗೆ ಮೀಸಲಾತಿ ಪ್ರಕಟವಾಗಲು ತಡವಾಗಿದ್ದನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದಿಲ್ಲ. ವಾಡಿ ಪುರಸಭೆಯ ಜನಪ್ರತಿನಿಧಿಗಳ ಐದು ವರ್ಷದ ಆಡಳಿತಾವಧಿ 2017ರ ನ.10ರಂದು ಆರಂಭಗೊಂಡಿದ್ದು, 2022ರ ನ.10ರಂದು ಕೊನೆಗೊಳ್ಳಲಿದೆ. -ಉಮಾಕಾಂತ ಹಳ್ಳೆ ತಹಶೀಲ್ದಾರ್‌, ಚಿತ್ತಾಪುರ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.