ಕಾರ್ಮಿಕರ ಕಲ್ಯಾಣ ಯೋಜನೆಗಳ ಐಕೋನಿಕ್ ವೀಕ್ ಪ್ರಚಾರಕ್ಕೆ ಚಾಲನೆ
Team Udayavani, Mar 15, 2022, 12:16 PM IST
ಕಲಬುರಗಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳ ಕುರಿತು ಕಾರ್ಮಿಕ ವರ್ಗದಲ್ಲಿ ಜನಜಾಗೃತಿ ಮೂಡಿಸುವ ಐಕೋನಿಕ್ ವೀಕ್ ಪ್ರಚಾರ ಅಭಿಯಾನಕ್ಕೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸೋಮವಾರ ಚಾಲನೆ ನೀಡಿದರು.
ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ, ಕಾರ್ಮಿಕ ವರ್ಗ ಹೆಚ್ಚಾಗಿರುವ ಕಾರ್ಖಾನೆಗೆ ಹೋಗಿ ಕ್ಯಾಂಪ್ ಆಯೋಜಿಸುವ ಮೂಲಕ ಹೆಚ್ಚಿನ ಜನಜಾಗೃತಿ ಮೂಡಿಸಬೇಕೆಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ್ ಮಾತನಾಡಿ, ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡಲಾಗುವ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ವೈದ್ಯಕೀಯ ಸಹಾಯಧನ, ವಸತಿ ಸೌಲಭ್ಯ, ಮದುವೆ ಸಹಾಯಧನ, ಹೆರಿಗೆ ಸೌಲಭ್ಯ, ತಾಯಿ ಮಗು ಸಹಾಯಹಸ್ತ, ಶೈಕ್ಷಣಿಕ ಸಹಾಯಧನ, ಶಿಶುಪಾಲನಾ ಭತ್ಯೆ, ಕಾರ್ಮಿಕ ಸಂಜೀವಿನಿ ಹಾಗೂ ಶಿಕ್ಷಣ ತರಬೇತಿ ಕುರಿತು ಈ ವಾಹನ ಇಂದಿನಿಂದ ಒಂದು ವಾರಗಳ ಕಾಲ ಜಿಲ್ಲಾದ್ಯಂತ ಸಂಚರಿಸಿ ಅರಿವು ಮೂಡಿಸಲಿದೆ ಎಂದರು.
ಡಿ.ಜಿ. ನಾಗೇಶ, ಅವಿನಾಶ ನಾಯಕ್, ಸಂತೋಷ ಕುಲಕರ್ಣಿ ಇದ್ದರು. ಇದೇ ಸಂದರ್ಭದಲ್ಲಿ ಪ್ರಚಾರ ಸಾಮಗ್ರಿಗಳಾದ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ