ತೊಗರಿ ಬೆಳೆಗಾರರಿಗೆ ಕಹಿಯಾದ ಸಂಕ್ರಮಣ ಹಬ್ಬ

ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಎರಡು ತಿಂಗಳ ಹಿಂದೆ 7000 ರೂ. ದರವಿತ್ತು. ಈಗ 5800 ರೂ.ಗೆ ಇಳಿದಿದೆ.

Team Udayavani, Jan 16, 2021, 3:16 PM IST

ತೊಗರಿ ಬೆಳೆಗಾರರಿಗೆ ಕಹಿಯಾದ ಸಂಕ್ರಮಣ ಹಬ್ಬ

ವಿಶೇಷ ವರದಿ-ಕಲಬುರಗಿ: ಶತಮಾನದ ಭೀಕರ ಮೇಘ ಸ್ಫೋಟದ ಅತಿವೃಷ್ಟಿ ನಡುವೆ ಅಳಿದುಳಿದ ತೊಗರಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ಪ್ರಕಟಿಸದೇ ಇರುವುದು ತೊಗರಿ ರೈತನಿಗೆ ಸಂಕ್ರಮಣ ಮತ್ತಷ್ಟು ಕಹಿ ಮಾಡಿದೆ. ಹಿಂದಿನ ವರ್ಷಗಳಿಗಿಂತ ಈ ಸಲ ಸರ್ಕಾರ ಬೇಗನೇ ಖರೀದಿ ಕೇಂದ್ರಗಳನ್ನು ಆರಂಭ ಮಾಡಲಾಗಿದೆ ಎಂದು ರೈತ ಸ್ವಲ್ಪ ಖುಷಿಯಾಗಿದ್ದ. ಆದರೆ ರಾಜ್ಯ ಸರ್ಕಾರ ಕೇಂದ್ರದ 6000 ರೂ. ಬೆಂಬಲ ಬೆಲೆಗೆ ನಯಾಪೈಸೆಯೂ ಪ್ರೋತ್ಸಾಹ ಧನ
ನೀಡದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆಯಲ್ಲದೇ ಸಂಭ್ರಮದ ಸಂಕ್ರಾಂತಿ ಮಂಕು ಕವಿದಿದೆ.

ಕೇಂದ್ರದ ಬೆಂಬಲ ಬೆಲೆ ಕ್ವಿಂಟಲ್‌ಗೆ 6000 ರೂ. ದರದಲ್ಲಿ ಖರೀದಿ ಮಾಡಲು ಜಿಲ್ಲಾದ್ಯಂತ 173 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಮೂರು ವಾರಗಳಿಂದ ಬರೀ ನೋಂದಣಿ ಪ್ರಕ್ರಿಯೆಯನ್ನೇ ಮುನ್ನೆಡೆಸಿಕೊಂಡು ಬರಲಾಗುತ್ತಿದೆ. ಇನ್ನೂ ಖರೀದಿ ಪ್ರಕ್ರಿಯೆ ಆರಂಭವಾಗಿಲ್ಲ. ಕಳೆದ ವರ್ಷ 2019-2020ನೇ ಸಾಲಿಗೆ ಇದೇ ಬಿಜೆಪಿ ಸರ್ಕಾರ 300 ರೂ. ಮಾತ್ರ ಪ್ರೋತ್ಸಾಹ ಧನ ನೀಡಿತ್ತು.

ಆವಾಗ ಕೇಂದ್ರದ 5800 ರೂ. ಬೆಂಬಲ ಬೆಲೆಗೆ ರಾಜ್ಯ ಸರ್ಕಾರದ 300 ಸೇರಿ ರೈತರಿಂದ 6100 ರೂ. ದರದಲ್ಲಿ ಖರೀದಿ ಮಾಡಲಾಗಿತ್ತು. ಆದರೆ ಈಗ ಉಲ್ಟಾ 100 ರೂ. ಕಡಿಮೆಯಾಗಿ ಕೇಂದ್ರದ 6000 ರೂ. ದರದಲ್ಲೇ ಖರೀದಿಗೆ ಮುಂದಾಗಲಾಗಿದೆ.

2018-19ರ ಸಾಲಿನಲ್ಲಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ನೇತೃತ್ವದ ಸರ್ಕಾರ ಕೇಂದ್ರದ ಬೆಂಬಲ ಬೆಲೆಗೆ 425 ರೂ. ಪ್ರೋತ್ಸಾಹ ಧನ ನೀಡಿತ್ತು. ಆಗ ಕೇಂದ್ರ ಸರ್ಕಾರದ ಕ್ವಿಂಟಲ್‌ಗೆ 5675 ರೂ. ಇದ್ದ ಬೆಂಬಲ ಬೆಲೆಗೆ ರಾಜ್ಯ ಸರ್ಕಾರದ 425 ರೂ. ಸೇರಿಸಿ 6100 ರೂ. ದರದಲ್ಲಿ ತೊಗರಿ ಖರೀದಿ ಮಾಡಲಾಗಿತ್ತು. ಆ ವರ್ಷ ತೊಗರಿ ಬಂಪರ್‌ ಬೆಳೆ ಬಂದಿತ್ತು. ಈ ವರ್ಷ ಶೇ. ಅರ್ಧಕ್ಕಿಂತ ಹೆಚ್ಚಿನ ಪ್ರಮಾಣದ ತೊಗರಿ ಹಾನಿಯಾಗಿದ್ದರಿಂದ ರಾಜ್ಯ ಸರ್ಕಾರ ಕನಿಷ್ಠ 500 ರೂ. ಪ್ರೋತ್ಸಾಹ ಧನ ಪ್ರಕಟಿಸಬೇಕಿತ್ತು.

ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಎರಡು ತಿಂಗಳ ಹಿಂದೆ 7000 ರೂ. ದರವಿತ್ತು. ಈಗ 5800 ರೂ. ಇಳಿದಿದೆ. ಒಂದು ವೇಳೆ ರಾಜ್ಯ ಸರ್ಕಾರ 500 ರೂ. ನೀಡಿದಲ್ಲಿ  ಮಾರುಕಟ್ಟೆಯಲ್ಲೂ ದರ ಹೆಚ್ಚಳವಾಗಿ ಎಲ್ಲ ರೈತರಿಗೆ ಸಹಾಯವಾಗುತ್ತದೆ. ಪ್ರೋತ್ಸಾಹ ಧನ ನೀಡದ ಹಿನ್ನೆಲೆ ರೈತರು ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಲು ಹಿಂದೇಟು ಹಾಕುತ್ತಿದ್ದಾರೆ. ಹಿಂದಿನ ವರ್ಷಗಳಲ್ಲಿ 1.50 ಲಕ್ಷ ರೈತು ಹೆಸರು ನೋಂದಾಯಿಸಿದ್ದರೆ ಈ ವರ್ಷ 40 ಸಾವಿರ ದಾಟಿಲ್ಲ. ರೈತರು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಸರ್ಕಾರ ಮತ್ತೆ ನೋಂದಣಿ ದಿನಾಂಕ ವಿಸ್ತರಿಸಿದೆ.

ಬಿಜೆಪಿ ಶಾಸಕರು ರಾಮಮಂದಿರ ನಿಧಿ ಸಂಗ್ರಹದಲ್ಲಿ ಬಿಜಿ

ಕಲ್ಯಾಣ ಕರ್ನಾಟಕ ತೊಗರಿ ರೈತರು ರಾಜ್ಯ ಸರ್ಕಾರದಿಂದ ನಯಾಪೈಸೆ ಪ್ರೋತ್ಸಾಹ ಧನ ನೀಡದಿರುವ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ ಆಡಳಿತಾರೂಢ ಬಿಜೆಪಿ ಶಾಸಕರು ಹಾಗೂ ಮುಖಂಡರು ರಾಮಮಂದಿರ ನಿರ್ಮಾಣದ ನಿಧಿ ಸಂಗ್ರಹದಲ್ಲಿ ಬ್ಯುಜಿಯಾಗಿದ್ದಾರೆ. ಬಿಜೆಪಿಗರಿಗೆ ರೈತರ ಬಗ್ಗೆ ಎಳ್ಳು ಕಾಳಷ್ಟು ಕಾಳಜಿ ಇಲ್ಲ ಎಂಬುದು ಈ ಮೂಲಕ ನಿರೂಪಿಸುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೇಳಿಕೆಗೆ ಸಿಮೀತ ಕಾಂಗ್ರೆಸ್‌ ಹೋರಾಟ
ಕೇಂದ್ರದ ಬೆಂಬಲ ಬೆಲೆಗೆ ರಾಜ್ಯ ಸರ್ಕಾರ ತನ್ನ ಪ್ರೋತ್ಸಾಹ ಧನ ನೀಡದಿದ್ದರೆ ಹೋರಾಟ ಮಾಡುವುದಾಗಿ ಕಾಂಗ್ರೆಸ್‌ ಮೂರು ವಾರಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಆದರೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ| ಅಜಯಸಿಂಗ್‌ ಹಾಗೂ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್‌ ಖರ್ಗೆ ಪತ್ರಿಕಾ ಹೇಳಿಕೆಗಳನ್ನು ಮಾತ್ರ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷವೂ ವಿಪಕ್ಷವಾಗಿ ಹೋರಾಟ ಮಾಡುವಲ್ಲಿ ವಿಫ‌ಲವಾಗಿದೆ ಎಂಬುದಾಗಿ ರೈತರು ಆರೋಪಿಸುತ್ತಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.