22ರಂದು ಡಾ| ಚನ್ನಬಸವ ಪಟ್ಟದ್ದೇವರ ಜಯಂತ್ಯುತ್ಸವ


Team Udayavani, Dec 11, 2021, 11:30 AM IST

6balki

ಭಾಲ್ಕಿ: ಕಲ್ಯಾಣ ಕರ್ನಾಟಕ ಭಾಗದ ನಡೆದಾಡುವ ದೇವರಾಗಿದ್ದ ಲಿಂ| ಡಾ| ಚನ್ನಬಸವ ಪಟ್ಟದ್ದೇವರ 132ನೆಯ ಜಯಂತ್ಯುತ್ಸವ ನಿಮಿತ್ತ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯ ನೇತೃತ್ವ ವಹಿಸಿದ್ದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಡಾ| ಚನ್ನಬಸವ ಪಟ್ಟದ್ದೇವರು 109 ವರ್ಷ ಕಾಲ ಗಂಧದಂತೆ ಬದುಕು ಸವಿಸಿ ಈ ಭಾಗಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ. ಬಸವಣ್ಣನವರ ತತ್ವಗಳನ್ನು ಜೀವನದುದ್ದಕ್ಕೂ ಪಾಲಿಸಿ ಈ ಭಾಗದ ಕಲ್ಯಾಣಕ್ಕಾಗಿ ಪಟ್ಟದ್ದೇವರು ಶ್ರಮಿಸಿದ್ದಾರೆ. ಅಂತಹ ಮಹಾ ಪುರುಷರ ಜಯಂತ್ಯುತ್ಸವವನ್ನು ಪ್ರತಿವರ್ಷದಂತೆ ಈ ವರ್ಷವೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಡಿ.22ರಂದು ಚನ್ನಬಸವಾಶ್ರಮದ ಹರ್ಡೇಕರ್‌ ಮಂಜಪ್ಪನವರ ವೇದಿಕೆಯಲ್ಲಿ ಜಯಂತ್ಯುತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಜಯಂತ್ಯುತ್ಸವ ಅಂಗವಾಗಿ ಅಂದು ದಿನವಿಡಿ ಡಾ| ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಹಲವು ಕಾರ್ಯಕ್ರಮ ಜರುಗಲಿವೆ.

ಇದಕ್ಕೂ ಮುನ್ನ ಪಟ್ಟದ್ದೇವರ ಜನ್ಮಸ್ಥಳವಾದ ಕಮಲನಗರದಿಂದ ಡಿ.12ರಂದು ಬಸವಜ್ಯೋತಿ ಪಾದಯಾತ್ರೆ ನಡೆಯಲಿದೆ. ಡಿ.21ರಿಂದ 22ರ ವರೆಗೆ ಪ್ರತಿದಿನ ಸಂಜೆ 6ಕ್ಕೆ ಸಾಣೆಹಳ್ಳಿ ಶಿವಕುಮಾರ ಕಲಾ ತಂಡದಿಂದ ನಾಟಕ ಪ್ರದರ್ಶನ ನಡೆಯಲಿದೆ. 22ರಂದು ಬೆಳಗ್ಗೆ 5:30ಕ್ಕೆ ಹಿರೇಮಠ ಸಂಸ್ಥಾನದಿಂದ ಚನ್ನಬಸವಾಶ್ರಮದ ವರೆಗೂ ಪಥ ಸಂಚಲನ ನಡೆಯಲಿದೆ. ಅಂದು ಬೆಳಗ್ಗೆ 6ಕ್ಕೆ ಧ್ವಜಾರೋಹಣ ನೆರವೇರಿಸಲಾಗುತ್ತದೆ. 9ಕ್ಕೆ ತೊಟ್ಟಿಲು ಕಾರ್ಯಕ್ರಮ, 10ಕ್ಕೆ ಉದ್ಘಾಟನೆ, ಕಾಯಕ ಪ್ರಶಸ್ತಿ ಪ್ರದಾನ, ಅಕ್ಕಮಹಾದೇವಿ ಮೂರ್ತಿ ಅನಾವರಣ ಸೇರಿ ಹೀಗೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಪ್ರಸಾದ ವ್ಯವಸ್ಥೆ ಇರಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶ್ರೀಗಳು ಮನವಿ ಮಾಡಿದರು.

ಶಶಿಧರ ಕೋಸಂಬೆ ಮಾತನಾಡಿ, ಪಟ್ಟದ್ದೇವರ ಜಯಂತ್ಯುತ್ಸವ ನಿಮಿತ್ತ ಡಿ.12ರಂದು ಕಮಲನಗರದಿಂದ ಬಸವ ಜ್ಯೋತಿ ಪಾದಯಾತ್ರೆ ಹೊರಟು 13ರಂದು ಭಾಲ್ಕಿಗೆ ತಲುಪಲಿದೆ. ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಸದಸ್ಯ ವಿಜಯಕುಮಾರ ರಾಜಭವನ, ಪ್ರಮುಖರಾದ ವಿಶ್ವನಾಥಪ್ಪ ಬಿರಾದಾರ, ಸೋಮನಾಥ ಅಷ್ಟೊರೆ, ಚಂದ್ರಕಾಂತ ಬಿರಾದಾರ್‌, ಸಿದ್ದಯ್ಯ ಕವಡಿಮಠ, ಶಶಿಧರ ಕೋಸಂಬೆ, ಸಂಗಮೇಶ ಮದಕಟ್ಟಿ, ಶಿವಪುತ್ರ ದಾಬಶೆಟ್ಟಿ, ಸಂಗಮೇಶ ಗುಮ್ಮೆ, ಬಸವರಾಜ ಮರೆ, ಶಂಭುಲಿಂಗ ಕಾಮಣ್ಣ, ಶಿವಾನಂದ ಗುಂದಗಿ, ರಾಜಕುಮಾರ ಬಿರಾದಾರ್‌ ಇದ್ದರು.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.