ಕೈಯಲ್ಲಿ ಮೊಟ್ಟೆ ಹಿಡಿದು ಮಕ್ಕಳ ಪ್ರತಿಭಟನೆ
Team Udayavani, Dec 23, 2021, 11:11 AM IST
ಜೇವರ್ಗಿ: ಮಠಾಧೀಶರ ಒತ್ತಡಕ್ಕೆ ಮಣಿಯದೇ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆ ಸರ್ಕಾರ ಕೈ ಬಿಡಬಾರದು ಎಂದು ಒತ್ತಾಯಿಸಿ ಮಕ್ಕಳ ಕೂಟದ ವತಿಯಿಂದ ಮಕ್ಕಳು ಮೊಟ್ಟೆ, ಬಾಳೆಹಣ್ಣು ಕೈಯಲ್ಲಿ ಹಿಡಿದು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಬಡತನ, ನಿರುದ್ಯೋಗ, ಅಪೌಷ್ಟಿಕತೆ ತಾಂಡವವಾಡುತ್ತಿದೆ. ಕಲಬುರಗಿ ಜಿಲ್ಲೆಯ ಮಕ್ಕಳಲ್ಲಿ ಶೇ.74ಕ್ಕಿಂತಲೂ ಹೆಚ್ಚು ಅಪೌಷ್ಟಿಕತೆ ಇದೆ. ಇದು ಅತ್ಯಂತ ತಲ್ಲಣದ ವಿಷಯ ಎಂಬುದು ಕೆಲವರಿಗೆ ಅರ್ಥವಾಗುತ್ತಿಲ್ಲ. ಮಠಾಧೀಶರಿಗೆ ಈ ವಿಷಯ ಗಂಭೀರವಾಗಿ ಕಾಣುತ್ತಿಲ್ಲ. ಕೆಲ ಮಠಾಧಿಧೀಶರು ಸಮಾಜದಲ್ಲಿ ಅವೈಜ್ಞಾನಿಕ ಚಿಂತನೆ ಹರಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದಲಿತ, ಹಿಂದುಳಿದ, ಬಡತನದಲ್ಲಿ ಹೆಚ್ಚಿರುವ ಮಕ್ಕಳೇ ಸರ್ಕಾರಿ ಶಾಲೆಗೆ ಹೆಚ್ಚಾಗಿ ಹೋಗುತ್ತಾರೆ. ಈ ಮಕ್ಕಳಿಂದ ಪೌಷ್ಟಿಕ ಆಹಾರ ಕಿತ್ತುಕೊಳ್ಳುವುದು ಎಂದರೆ ಎಲ್ಲ ಮಕ್ಕಳಿಗೂ ಪೌಷ್ಟಿಕ ಆಹಾರ ದೊರೆಯದಂತೆ ಮಾಡುವುದಾಗಿದೆ. ಆದ್ದರಿಂದ ಯಾರ ಮಾತಿಗೂ ಕಿವಿಗೊಡದೇ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಕೊಡುವ ಯೋಜನೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ವಿನಯಕುಮಾರ ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ರೈತ ಮುಖಂಡರಾದ ಸುಭಾಷ ಹೊಸಮನಿ, ಪರಶುರಾಮ ಬಡಿಗೇರ, ತಾಯಪ್ಪ ಹೊಸಮನಿ, ಜೈಭೀಮ ಕಟ್ಟಿಮನಿ, ಅನುಸೂಯಾ ಟಣಕೇದಾರ, ರೇವುನಾಯಕ ರೇವನೂರ, ಮಲ್ಕಪ್ಪ ಹರನೂರ, ಮಲ್ಲಪ್ಪ ಹರನೂರ, ಶಂಕರಲಿಂಗ ಹನ್ನೂರ ರೇವನೂರ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ