ಚಿಂಚೋಳಿಯಲ್ಲಿ ಉತ್ತಮ ಮಳೆ
Team Udayavani, Jun 19, 2020, 10:38 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಂಚೋಳಿ: ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಬಿರುಗಾಳಿ ಸಮೇತ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ.
ತೊಗರಿ, ಉದ್ದು, ಹೆಸರು, ಹೈಬ್ರಿಡ್ ಜೋಳ, ಸಜ್ಜೆ ಬಿತ್ತನೆ ಕಾರ್ಯ ನಡೆಯುತ್ತಿದ್ದು, ರೈತರಿಗೆ ಬಿಡುವು ಇಲ್ಲದಂತಾಗಿದೆ. ರೈತರ ನಿರೀಕ್ಷೆಯಂತೆ ಮುಂಗಾರು ಮಳೆಯೂ ಜೂನ್ ಮೊದಲ ವಾರದಲ್ಲಿ ಬರುತ್ತಿರುವುದರಿಂದ ಕೋಡ್ಲಿ ವಲಯದಲ್ಲಿ ಒಂದೇ ದಿನ 41.2 ಮಿಮೀ ಮಳೆ ಸುರಿದಿದ್ದು, ಎರಡು ದಿನಗಳಲ್ಲಿ 68.6 ಮಿಮೀ ಮಳೆ ಆಗಿದೆ. ಐನಾಪುರದಲ್ಲಿ ಮಳೆ ಆಗುತ್ತಿರುವುದರಿಂದ ಹಿಂದುಳಿದ ಪ್ರದೇಶ ತಾಂಡಾ ಮತ್ತು ಗ್ರಾಮಗಳಲ್ಲಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿದೆ ಎಂದು ತಾಪಂ ಸದಸ್ಯ ಪ್ರೇಮಸಿಂಗ ಜಾಧವ್ ಮತ್ತು ರೈತ ಮುಖಂಡ ರಮೇಶ ಪಡಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
ತಾಲೂಕಿನಲ್ಲಿ ಗುರುವಾರ ಸಂಜೆ ವ್ಯಾಪಕವಾಗಿ ಮಳೆ ಆಗಿರುವುದರಿಂದ ಬಿತ್ತನೆ ಕಾರ್ಯಕ್ಕೆ ಅಡ್ಡಿಯುಂಟಾಗಿ ಬಿತ್ತನೆ ಕಾರ್ಯವನ್ನು ರೈತರು ಅರ್ಧಕ್ಕೆ ನಿಲ್ಲಿಸಿದರು. ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಗುರುವಾರ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ವೇಳೆಯಲ್ಲಿ ವೆಂಕಟಾಪುರ, ಧರ್ಮಸಾಗರ, ಪೆದ್ದಾತಾಂಡಾ, ಶಾದೀಪುರ, ಸಂಗಾಪುರ, ಸೇರಿಭಿಕನಳ್ಳಿ, ಮೋಟಿಮೋಕ ತಾಂಡಾಗಳಲ್ಲಿ ವ್ಯಾಪಕ ಮಳೆ ಆಗಿದೆ. ಜೂನ್ ಮೊದಲ ವಾರದಿಂದಲೇ ಅಲ್ಪ ಸ್ವಲ್ಪ ಮಳೆ ಆಗುತ್ತಿರುವುದರಿಂದ ಕುಂಚಾವರಂ ವನ್ಯಧಾಮ ಇದೀಗ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಎಂದು ವನ್ಯಜೀವಿಧಾಮ ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ ತಿಳಿಸಿದ್ದಾರೆ.
ಮಳೆ ವಿವರ: ಚಿಂಚೋಳಿ 37.2 ಮಿಮೀ, ಕೋಡ್ಲಿ 68.6 ಮಿಮೀ, ಐನಾಪುರ 33.5 ಮಿಮೀ, ಕುಂಚಾವರಂ 26.4 ಮಿಮೀ, ಸುಲೇಪೇಟ 39.8 ಮಿಮೀ, ನಿಡಗುಂದಾ 61.5 ಮಿಮೀ, ಚಿಮ್ಮನಚೋಡ 22.2 ಮಿಮೀ ಮಳೆ ಆಗಿದೆ. ಶುಕ್ರವಾರವು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯ ಶ್ರೀಮಂತ ಕನಕಪುರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ