ಕಾಗಿಣಾ ನೀರು ತಡೆ ಹಿಡಿದಿದ್ದೇ ಕಾಲರಾಕ್ಕೆ ಕಾರಣ
Team Udayavani, May 14, 2022, 1:07 PM IST
ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಾಲರಾ ರೋಗ ಉಲ್ಬಣಗೊಳ್ಳಲು ಗ್ರಾಮದ ಬಳಿ ಕಾಗಿಣಾ ನದಿ ನೀರನ್ನು ಮೂರ್ನಾಲ್ಕು ತಿಂಗಳಿಂದ ತಡೆಹಿಡಿದಿದ್ದೇ ಕಾರಣವಾಗಿದೆ ಎಂದು ಸಮಾಜ ಸೇವಕ ಮಣಿಕಂಠ ರಾಠೊಡ ಅಸಮಾಧಾನ ವ್ಯಕ್ತಪಡಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಈ ಕುರಿತಂತೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದಂಡೋತಿ ಗ್ರಾಮದಲ್ಲಿ ವಾಂತಿ ಭೇದಿಗೆ 74ಕ್ಕೂ ಹೆಚ್ಚು ಜನರು ತುತ್ತಾಗಿ ನರಳುತ್ತಿದ್ದಾರೆ. ತಡೆ ಹಿಡಿದ ನದಿ ನೀರು ದಂಡೋತಿ ಗ್ರಾಮಕ್ಕೆ ಪೂರೈಕೆಯಾಗುತ್ತಿದೆ. ಈ ಅಶುದ್ಧ ನೀರು ಉಪಯೋಗಿಸಿದ್ದರಿಂದ ಗ್ರಾಮಸ್ಥರಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳಲು ಕಾರಣವಾಗಿದೆ. ಆದ್ದರಿಂದ ಶುದ್ಧ ನೀರು ಸರಬರಾಜು ಮಾಡಬೇಕು ಒತ್ತಾಯಿಸಿದರು.
ಪುರಸಭೆ ಸದಸ್ಯ ರಮೇಶ ಬೊಮ್ಮನಳ್ಳಿ, ಮುಖಂಡರಾದ ಅಶ್ವತ್ಥ್ ರಾಠೊಡ, ಮಹ್ಮದ್ ಯುನೂಸ್, ಶ್ರೀಕಾಂತ ಸುಲೇಗಾಂವ, ಮಲ್ಲಿಕಾರ್ಜುನ ಹೂಗಾರ, ಸಂಗಮೇಶ ರೋಣದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ