ಶುದ್ದ ಕುಡಿಯುವ ನೀರಿನ ಕಾಮಗಾರಿ ಕಳಪೆ: ರಂಗನೂರ
Team Udayavani, Nov 18, 2021, 11:55 AM IST
ಚಿಂಚೋಳಿ: ತಾಲೂಕಿನ ಗಡಿಕೇಶ್ವಾರ ಗ್ರಾಮದ ಜನರಿಗೆ ಶುದ್ಧ ನೀರು ಪೂರೈಕೆ ಯೋಜನೆ ಸಂಪೂರ್ಣ ಕಳಪೆಮಟ್ಟದಿಂದ ಕೂಡಿದ್ದರಿಂದ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಬೇಕಾಗಿದೆ ಎಂದು ಬಿಜೆಪಿ ಯುವ ಮುಖಂಡ ಅರುಣಕುಮಾರ ರಂಗನೂರ ದೂರಿದ್ದಾರೆ.
ಗಡಿಕೇಶ್ವಾರ ಗ್ರಾಮದ ಜನತೆಗೆ ಶುದ್ಧ ನೀರು ಪೂರೈಸಲು ಸರ್ಕಾರದಿಂದ ಬಹುಗ್ರಾಮ ಯೋಜನೆ ಅಡಿಯಲ್ಲಿ 2017-18ನೇ ಸಾಲಿನಲ್ಲಿ 5 ಕೋಟಿ ರೂ. ಗಳನ್ನು ಕೆ.ಕೆ.ಆರ್.ಡಿ ಮೂಲಕ ಮಂಜೂರಿ ಮಾಡಲಾಗಿದೆ. ಸೇಡಂ ತಾಲೂಕಿನ ಕಾಗಿಣಾ ನದಿಯಿಂದ ಚಿಂತಪಳ್ಳಿ, ಭೂತಪೂರ, ರಾಯಕೋಡ, ರುದನೂರ, ಗಡಿಕೇಶ್ವಾರ ಗ್ರಾಮಗಳಿಗೆ ನೀರು ಪೊರೈಸಲು ಯೋಜನೆಯನ್ನು ಆಗಿನ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಂಜೂರಿ ಮಾಡಿದ್ದರು ಎಂದು ವಿವರಿಸಿದ್ದಾರೆ.
ಗಡಿಕೇಶ್ವಾರ ಗ್ರಾಮದ ನಿವಾಸಿಗಳಿಗೋಸ್ಕರ ಒಂದು ಕಿ.ಮೀ ದೂರದಲ್ಲಿ ಅಡವಿಯಲ್ಲಿ ಕುಡಿಯುವ ನೀರಿನ ಸಲುವಾಗಿ ಕೆರೋಳಿ ರಸ್ತೆ ಮಾರ್ಗದಲ್ಲಿ ಆರ್.ಒ ಪ್ಲಾಂಟ್ ಮಾಡಲಾಗಿದೆ. ಆದರೆ ಗ್ರಾಮದ ಜನರು ಮಾತ್ರ ನೀರು ಬಳಕೆ ಮಾಡದೇ ಇರುವುದರಿಂದ ಹಾಳಾಗಿ ಹೋಗಿದೆ. ಆದರೆ ಕಾಮಗಾರಿ ಗುತ್ತಿಗೆ ಪಡೆದುಕೊಂಡ ಗುತ್ತಿಗೆದಾರ ಕಾಮಗಾರಿಯನ್ನು ಪೂರ್ಣಗೊಳಿಸದೇ ಶುದ್ಧ ನೀರು ಪೋರೈಕೆ ಯೋಜನೆ ಸ್ಥಗಿತಗೊಳಿಸಿದ್ದರಿಂದ ಕಾಮಗಾರಿಯಲ್ಲಿ ಕೈಗೊಂಡಿರುವ ಸಾಮಗ್ರಿಗಳು ಸಂಪೂರ್ಣ ಹಾಳಾಗಿವೆ.
ಇದರ ಬಗ್ಗೆ ತಾಪಂ ಅಧಿಕಾರಿಗಳಿಗೆ ಮತ್ತು ಪಿಡಿಒ, ಕಾರ್ಯದರ್ಶಿಗಳಿಗೆ ತಿಳಿಸಿದ್ದರೂ ಪ್ರಯೋಜನ ಆಗಿಲ್ಲವೆಂದು ದೂರಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಗಮನಹರಿಸಿ ಶುದ್ಧ ನೀರು ಪೂರೈಕೆ ಯೋಜನೆ ಪೂರ್ಣಗೊಳಿಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗೊಳಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು