ಶಹಾಬಾದದಲ್ಲಿ ಸ್ಮಶಾನ ಸ್ವಚ್ಛತೆ
Team Udayavani, Jan 18, 2022, 12:58 PM IST
ಶಹಾಬಾದ: ಸ್ಮಶಾನದಲ್ಲಿ ತುಂಬಿಕೊಂಡಿರುವ ಹೊಲಸು, ಎಲ್ಲೆಂದರಲ್ಲಿ ಬೆಳೆದಿರುವ ಗಿಡ-ಗಂಟಿ ಸ್ವಚ್ಛಗೊಳಿಸುವ ಮೂಲಕ ಇಲ್ಲಿನ ಸ್ಥಳೀಯ ಮುಖಂಡರು ಇನ್ನೊಬ್ಬರಿಗೆ ಮಾದರಿಯಾಗಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದ ಪರಿಣಾಮ ಸ್ಮಶಾನದಲ್ಲಿ ಗಿಡ-ಗಂಟಿಗಳು ಬೆಳೆದು ಶವಸಂಸ್ಕಾರ ಮಾಡಲು ತೊಂದರೆಯಾಗುತ್ತಿತ್ತು. ಅಲ್ಲದೇ ಸ್ಮಶಾನದಲ್ಲಿ ಸ್ವತ್ಛತೆಯಿಲ್ಲದ ಕಾರಣ ಬಹಳ ಕೆಟ್ಟ ವಾತಾವರಣ ಮೂಡಿತ್ತು. ಅದನ್ನು ಮನಗಂಡು ಸ್ಥಳೀಯ ಎಲ್ಲ ಸಮಾಜದ ಮುಖಂಡರು ಒಟ್ಟಾಗಿ ಶ್ರಮದಾನ ಮಾಡುವ ಮೂಲಕ ನಗರದ ಸಾರ್ವಜನಿಕ ಸ್ಮಶಾನ ಸ್ವಚ್ಛಗೊಳಿಸಿದ್ದಾರೆ. ಇದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ನಗರದ ಸಾರ್ವಜನಿಕ ಸ್ಮಶಾನ ಭೂಮಿ ಹಳ್ಳಕ್ಕೆ ಹತ್ತಿಕೊಂಡಿರುವುದರಿಂದ ಮಳೆ ಬಂದಾಗಲೊಮ್ಮೆ ನೀರು ಸ್ಮಶಾನದೊಳಗೆ ಹರಿದು ನೀರಿನಲ್ಲಿರುವ ಎಲ್ಲ ಕಸ-ಕಡ್ಡಿ, ಬಟ್ಟೆ, ಪ್ಲಾಸ್ಟಿಕ್ ತ್ಯಾಜ್ಯಗಳು ಹರಡುತ್ತದೆ. ಅಲ್ಲದೇ ಗಿಡಗಂಟಿಗಳು ಎಲ್ಲೆಂದರಲ್ಲಿ ಬೆಳೆದು ಸ್ಮಶಾನದೊಳಗೆ ಪ್ರವೇಶಿಸಲು ಭಯ ಪಡಬೇಕಾದ ಪರಿಸ್ಥಿತಿ ಇಲ್ಲಿ ಕಾಣುತ್ತಿತ್ತು. ಹಂದಿಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿತ್ತು. ಆದ್ದರಿಂದ ಇದನ್ನು ಸ್ವಚ್ಛಗೊಳಿಸಲು ನಗರಸಭೆಯ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೇ ಎನ್ನದ ಕಾರಣ ನಾವೇ ಖುದ್ದಾಗಿ ಮಾಡಿದರೇ ಹೇಗೆ ಎಂಬ ಪರಿಕಲ್ಪನೆ ನಮ್ಮಲ್ಲಿ ಮೂಡಿ, ಎಲ್ಲ ಸ್ಥಳೀಯ ಸಮಾನ ಮನಸ್ಕರು ಸೇರಿಕೊಂಡು ಸ್ಮಶಾನ ಸ್ವತ್ಛಗೊಳಿಸಲು ಮುಂದಾದೆವು ಎಂದು ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷ ಕಾಶಿನಾಥ ಜೋಗಿ ತಿಳಿಸಿದರು.
ಸಭೆ ನಡೆಸಿ, ಎಲ್ಲರೂ ಸೇರಿ ಬೆಳಿಗ್ಗೆ ವ್ಯಾಯಾಮ, ವಾಯು ವಿಹಾರ ಬದಲು ಶ್ರಮದಾನ ಮಾಡುವ ಮೂಲಕ ಇಡೀ ಸಾರ್ವಜನಿಕ ಸ್ಮಶಾನವನ್ನು ಸ್ವಚ್ಛಗೊಳಿಸಿ, ನೋಡುಗರ ಕಣ್ಮನ ಸೆಳೆಯುವಂತೆ ಮಾಡಿದ್ದಾರೆ. ಇನ್ನುಮುಂದೆ ಇದೇ ರೀತಿ ಶ್ರಮದಾನ ಮಾಡುವ ಮೂಲಕ ಸ್ಮಶಾನವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅವರ ಉದ್ದೇಶವಾಗಿದೆ. ಗಿಡ-ಮರಗಳನ್ನು ಬೆಳೆಸುವ ಉದ್ದೇಶವೂ ಹೊಂದಿದ್ದು, ಅದಕ್ಕಾಗಿಯೂ ಯೋಜನೆ ರೂಪಿಸುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸುನೀಲ ಭಗತ್, ಶಿವಾಜಿ ಪವಾರ, ಶಿವಾಜಿ ಪವಾರ, ಅನಿಲ ಹಿಬಾರೆ, ನನ್ನಾವರೆ ನರಸಿಂಗ, ಮಹಾವೀರ ಸುಗಂ, ನರಸಿಂಗ ಕೊಂಗಳೆ, ದತ್ತಾ ಫಂಡ್, ಶಶಿಕಾಂತ ಸಿಂಧೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು