ಪುರಸಭೆಯಿಂದ ಅಂಗಡಿಗಳ ಆಂಗ್ಲ ನಾಮಫಲಕ ತೆರವು
Team Udayavani, Jun 18, 2022, 1:26 PM IST
ಆಳಂದ: ಪಟ್ಟಣದಲ್ಲಿ ಪುರಸಭೆ ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ ನೇತೃತ್ವದಲ್ಲಿ ಸಿಬ್ಬಂದಿ ಒಳಗೊಂಡ ತಂಡ ಹೋಟೆಲ್, ಅಂಗಡಿಗಳ ಮೇಲೆ ಶುಕ್ರವಾರ ಹಠಾತ್ ದಾಳಿ ನಡೆಸಿದರು.
ಬಸ್ ನಿಲ್ದಾಣ ಮುಂಭಾಗದ ಮುಖ್ಯರಸ್ತೆಯಲ್ಲಿನ ಅಂಗಡಿಗಳ ಮೇಲೆ ಕನ್ನಡ ಫಲಕವಿಲ್ಲದೇ ಆಂಗ್ಲಫಲಕ ಹಾಕಿರುವುದನ್ನು ತೆರವುಗೊಳಿಸಿದರು. ಅಲ್ಲದೇ, ಸ್ಥಳದಲ್ಲೇ ಹಾಜರಿದ್ದ ಪರಿಸರ ಅಭಿಯಂತರ ರವಿಕಾಂತ ಮಿಸ್ಕಿನ್ ಮೂಲಕ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿದರು.
ಪಟ್ಟಣದ ಬಸ್ ನಿಲ್ದಾಣದ ಹೋಟೆಲ್ಗೆ ಲಗ್ಗೆ ಹಾಕಿದ್ದ ಮುಖ್ಯಾಧಿಕಾರಿಗಳ ತಂಡ ಕೈ ತೊಳೆಯುವ ಜಾಗದಲ್ಲಿ ಅಸ್ವತ್ಛತೆ, ಸಾಬೂನಿಲ್ಲದೆ ಇರುವುದು, ಕುಡಿಯಲು ನೀರಿನ ಅವ್ಯವಸ್ಥೆ, ಅಡುಗೆ ಕೋಣೆಯಲ್ಲಿ ಹೊಲಸು ಇದ್ದಿದ್ದನ್ನು ಕಂಡು ಸಿಡಿಮಿಡಿಗೊಂಡು, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಮಾಲೀಕರಿಗೆ ಎಚ್ಚರಿಸಿದರು. ಈ ಹೋಟೆಲ್ಗಳಲ್ಲಿ ವಾಣಿಜ್ಯ ಗ್ಯಾಸ್ ಬಳಸುವ ಬದಲು ಗೃಹ ಬಳಕೆ ಗ್ಯಾಸ್ಯಿಟ್ಟಿರುವುದು ಏಕೆ ಎಂದು ಪ್ರಶ್ನಿಸಿದರು.
ಪಟ್ಟಣದ ಎಲ್ಲ ಅಂಗಡಿ, ಸಂಘ, ಸಂಸ್ಥೆಯ ಫಲಕಗಳನ್ನು ಕನ್ನಡಕ್ಕೆ ಆದ್ಯತೆ ನೀಡದೇ ಬರೀ ಆಂಗ್ಲದಲ್ಲೇ ಹಾಕಿದ್ದರೆ ಅಂಥ ಎಲ್ಲ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ, ಕಡ್ಡಾಯವಾಗಿ ಕನ್ನಡ ನಾಮಫಲಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು. ಅಕ್ರವಾಗಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ಗ್ಲಾಸ್, ಚೀಲಗಳನ್ನು ಜಪ್ತಿಮಾಡಿದರು. ಆನಂತರ ವಾರಗಟ್ಟಲೆ ನಿರಂತರವಾಗಿ ಈ ಕಾರ್ಯಾಚರಣೆ ನಡೆಸಬೇಕು ಎಂದು ಸಿಬ್ಬಂದಿಗಳಿಗೆ ವಿಜಯ ಮಹಾಂತೇಶ ಸೂಚಿಸಿದರು. ಪುರಸಭೆ ವ್ಯವಸ್ಥಾಪಕ ಶಂಭುಲಿಂಗ ಕನ್ನೆ, ಪರಿಸರ ಅಭಿಯಂತರ ರವಿಕಾಂತ ಮಿಸ್ಕಿನ್, ಎಸ್ಐ ರಾಘವೇಂದ್ರ, ಸಿಬ್ಬಂದಿ ಮೋಸಿನ್ ಹಾಗೂ ಇನ್ನಿತರರು ಹಾಜರಿದ್ದರು.
ಸಾರ್ವಜನಿಕರು ತಮ್ಮ ಅಂಗಡಿ ಮುಂಗಟ್ಟುಗಳ ಮೇಲೆ ಹಾಕುವ ನಾಮಫಲಕಗಳಲ್ಲಿ ಮೊದಲು ಕನ್ನಡವಿರಬೇಕು. ಆಂಗ್ಲ ಫಲಕ ಹಾಕಿದವರಿಗೆ ನೋಟಿಸ್ ಜಾರಿಗೊಳಿಸಲಾಗುತ್ತದೆ. ಇದಕ್ಕೆ ಜಗ್ಗದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ನೆರೆ, ಹೊರೆಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕು. ಸಮಸ್ಯೆಗಳಿದ್ದರೆ ಗಮನಕ್ಕೆ ತರಬೇಕು. -ವಿಜಯ ಮಹಾಂತೇಶ ಹೂಗಾರ, ಮುಖ್ಯಾಧಿಕಾರಿ, ಪುರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ