ರೈತರಿಗೆ ಹೊಸ ಸಾಲಕ್ಕೆ ಸಿಎಂ ಚಾಲನೆ
Team Udayavani, Jan 6, 2022, 10:08 AM IST
ಕಲಬುರಗಿ: ಮಂಗಳವಾರ ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಲ ಮನ್ನಾ ರೈತರಿಗೆ ಹೊಸದಾಗಿ ಬೆಳೆ ಸಾಲ ವಿತರಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
20 ಕೋ.ರೂ ವೆಚ್ಚದ ಡಿಸಿಸಿ ಬ್ಯಾಂಕ್ನ ನೂತನ ಕಟ್ಟಡಕ್ಕೆ ಅಡಿಗಲ್ಲು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಎಟಿಎಂ ವಿತರಣಾ ಕಾರ್ಯಕ್ರಮದಲ್ಲೇ ಅಫಜಲಪುರ ತಾಲೂಕಿನ ಭೈರಾಮಡಗಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಂಕೇತಿಕವಾಗಿ ಚೆಕ್ ವಿತರಿಸುವ ಮುಖಾಂತರ ಚಾಲನೆ ನೀಡಿದ ಅವರು, ಸಮರ್ಪಕವಾಗಿ ಎಲ್ಲ ರೈತರಿಗೆ ಬಡ್ಡಿ ರಹಿತ ಸಾಲ ತಲುಪಬೇಕೆಂದರು.
ಕೇಂದ್ರದ ಸಚಿವ ಭಗವಂತ ಖೂಬಾ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಬ್ಯಾಂಕ್ನ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ, ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಸಂಸದ ಡಾ| ಉಮೇಶ ಜಾಧವ್, ಶಾಸಕರಾದ ಸುಭಾಷ ಆರ್. ಗುತ್ತೇದಾರ್, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಡಾ. ಅವಿನಾಶ ಜಾಧವ್, ಶಶೀಲ್ ನಮೋಶಿ, ಬ್ಯಾಂಕ್ನ ಎಂಡಿ ಚಿದಾನಂದ ನಿಂಬಾಳ, ಉಪಾಧ್ಯಕ್ಷ ಸುರೇಶ ಸಜ್ಜನ್ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್