ಪಿಂಚಣಿ ಪಡೆಯಲು “ನಾಳೆ ಬನ್ನಿ”
Team Udayavani, Jan 28, 2022, 10:39 AM IST
ಚಿಂಚೋಳಿ: ತಾಲೂಕಿನ ಗಡಿಪ್ರದೇಶದ ವೃದ್ಧರು, ಅಂಗವಿಕಲರು, ವಿಧವೆಯರಿಗೆ ಸರ್ಕಾರದಿಂದ ಮಂಜೂರಿಯಾಗಿರುವ ಪಿಂಚಣಿ ಹಣವನ್ನು ಸ್ಥಳೀಯ ಅಂಚೆ ಕಚೇರಿಯಲ್ಲಿ ಪಡೆಯಲು ತೊಂದರೆಪಡುವಂತೆ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸುರೇಂದ್ರ ಸೂರಿ ತಿಳಿಸಿದ್ದಾರೆ.
ಕುಂಚಾವರಂ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ರಾಜ್ಯದ ಗಡಿಪ್ರದೇಶ ಶಿವರಾಮಪುರ, ಶಿವರೆಡ್ಡಿಪಳ್ಳಿ, ಮಗದಂಪುರ, ಪೋಚಾ ವರಂ, ಕುಂಚಾವರಂ, ಲಚಮಸಾಗರ ಗ್ರಾಮಗಳ ವೃದ್ಧರು, ವಿಧವೆಯರು, ಅಂಗವಿಕಲರು ಕಂದಾಯ ಇಲಾಖೆಯಿಂದ ಕೊಡುವ ಪಿಂಚಣಿ ಪಡೆಯಲು ಪ್ರತಿ ತಿಂಗಳು 40ರಿಂದ 50ರೂ. ಖರ್ಚು ಮಾಡಿ ಸುಮಾರು 200 ಜನರು ಕುಂಚಾವರಂ ಅಂಚೆ ಕಚೇರಿಗೆ ಬರುತ್ತಾರೆ. ಆದರೆ ಅಂಚೆ ಸಿಬ್ಬಂದಿಯಿಂದ “ನಾಳೆ ಬನ್ನಿ’ ಎನ್ನುವ ಸಿದ್ಧ ಉತ್ತರ ಮಾತ್ರ ದೊರಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎರಡ್ಮೂರು ತಿಂಗಳ ಪಿಂಚಣಿ ಬಂದಿದ್ದರೂ ಸಿಬ್ಬಂದಿ ಒಂದೇ ತಿಂಗಳ ಪಿಂಚಣಿ ಬಂದಿದೆ ಎಂದು ಹೇಳಿ ಕಳಿಸುತ್ತಿದ್ದಾರೆ. ತಹಶೀಲ್ದಾರರು ಕೂಡಲೇ ಕುಂಚಾವರಂ ಅಂಚೆ ಕಚೇರಿಗೆ ಭೇಟಿ ನೀಡಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ