500 ಬೆಡ್ ಕೋವಿಡ್ ಕೇರ್ ಸೆಂಟರ್ ಆರಂಭ
ಜಿಲ್ಲಾಡಳಿತದಿಂದಲೇ ರೋಗಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ.
Team Udayavani, May 22, 2021, 6:58 PM IST
ಕಲಬುರಗಿ: ಸೌಮ್ಯ ಸ್ವಭಾವ ಮತ್ತು ತೀವ್ರತರವಲ್ಲದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಗರದ ಸೇಡಂ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ 500 ಹಾಸಿಗೆ ಸಾಮರ್ಥ್ಯದ ವಸತಿ ನಿಲಯವನ್ನು ಜಿಮ್ಸ್ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಶುಕ್ರವಾರದಿಂದಲೇ ಕಾರ್ಯಾರಂಭ ಮಾಡಿದೆ.
500 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ನಲ್ಲಿ ಸದ್ಯ 50 ಬೆಡ್ಗಳು ಲಭ್ಯವಿವೆ. ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಲ್ಲಿ ಅದಕ್ಕನುಗುಣವಾಗಿ ಹಾಸಿಗೆಯನ್ನು ಹೆಚ್ಚಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್ ತಿಳಿಸಿದ್ದಾರೆ.
ಈ ಕೋವಿಡ್ ಕೇರ್ ಸೆಂಟರ್ನಲ್ಲಿ 36 ಆಕ್ಸಿಜನ್ ಕಾನ್ಸ್ಂಟ್ರೇಟರ್ ಗಳಿದ್ದು, ಉಸಿರಾಟ ಸಮಸ್ಯೆ ಇರುವ ರೋಗಿಗಳಿಗೆ ನೆರವಾಗಲಿದೆ. ಓರ್ವ ಫಾರ್ಮಾಸಿಸ್ಟ್ನ್ನು ನಿಯೋಜಿಸಲಾಗಿದೆ. ಅಗತ್ಯ ಔಷಧಿಗಳು ಸ್ಥಳದಲ್ಲಿಯೇ ಲಭ್ಯವಿರಲಿವೆ ಎಂದರು.
ಕೋವಿಡ್ ಸೋಂಕಿತರಿಗೆ ದಿನದ 24 ಗಂಟೆ ಚಿಕಿತ್ಸೆ ನೀಡಲು ಮೂರು ಪಾಳಿಯಲ್ಲಿ ಒಟ್ಟು ಮೂವರು ಎಂಬಿಬಿಎಸ್ ವೈದ್ಯರು, ಆರು ಜನ ಸ್ಟಾಫ್ ನರ್ಸ್ಗಳು, ಆರು ಗ್ರೂಪ್ ಡಿ ನೌಕರರನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತದಿಂದಲೇ ರೋಗಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ತುರ್ತು ಸಂದರ್ಭದಲ್ಲಿ ಉಪಯೋಗಕ್ಕೆ ಆಂಬ್ಯುಲೆನ್ಸ್ ಸಹ ಲಭ್ಯವಿರಲಿದೆ ಎಂದು ಡಿಎಚ್ಒ ವಿವರಿಸಿದರು.
ಕೇರ್ ಸೆಂಟರ್ನಲ್ಲಿ ಇದೇ ವೇಳೆ ಆಕ್ಸಿಜನ್ ಕಾನ್ಸ್ಂಟ್ರೇಟರ್ ಗಳು ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಡಿಹೆಚ್ಒ ಡಾ| ಶರಣಬಸಪ್ಪ ಗಣಜಲಖೇಡ್ ಪ್ರಾಯೋಗಿಕವಾಗಿ ತೋರಿಸಿ ಕೊಟ್ಟರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿಗಳಾದ ಡಾ| ಶರಣ ಬಸಪ್ಪ ಕ್ಯಾತನಾಳ, ಡಾ| ಮಾರುತಿ ಕಾಂಬಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ