ಮಹಾನಗರ ಪಾಲಿಕೆಯಿಂದ ಕರ ಸಂಗ್ರಹ ಕ್ಯಾಂಪ್ ಆರಂಭ
ಪಿ ಆ್ಯಂಡ್ ಟಿ ನೀರಿನ ಟ್ಯಾಂಕ್ ಹತ್ತಿರದ ಕ್ಯಾಂಪ್ನಲ್ಲಿ ನೇರವಾಗಿ ಸಾರ್ವಜನಿಕರು ತೆರಿಗೆ ಪಾವತಿಸಬಹುದಾಗಿದೆ.
Team Udayavani, Jan 22, 2021, 3:26 PM IST
ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿಗಳ ಬಾಕಿ ತೆರಿಗೆ ಪಾವತಿಸುವಂತೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಇದಕ್ಕಾಗಿ ಗುರುವಾರದಿಂದ ಮೂರು ದಿನಗಳ ಕ್ಯಾಂಪ್ ಆರಂಭಿಸಲಾಗಿದೆ. ಗುರುವಾರ ಮೊದಲ ದಿನ ಕೌಂಟರ್ ಹಂತದಲ್ಲೇ ನೀರಿನ ತೆರಿಗೆ 21,651ರೂ. ಮತ್ತು ಒಳಚರಂಡಿ ತೆರಿಗೆ 11,145ರೂ. ಸಂಗ್ರಹಿಸಲಾಗಿದೆ. ಇದೇ ವೇಳೆ ಐದು ಅನಧಿಕೃತ ಒಳ ಚರಂಡಿ ಅ ಧಿಕೃತ
ಮಾಡಲಾಗಿದೆ. ಒಂದು ಹೊಸ ನಳದ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಇಲ್ಲಿನ ಹಳೆ ಜೇವರ್ಗಿ ರಸ್ತೆಯಲ್ಲಿರುವ ಪಿ ಆ್ಯಂಡ್ ಟಿ ನೀರಿನ ಟ್ಯಾಂಕ್ ಹತ್ತಿರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ವತಿಯಿಂದ ಕರ ಸಂಗ್ರಹ ಕ್ಯಾಂಪ್ನಲ್ಲಿ ಮಾತನಾಡಿದ ಅವರು, ನಗರದಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.
ತಿಂಗಳಿಗೆ 15ರೂ. ನೀರಿನ ತೆರಿಗೆ ಇದೆ. ಆದರೂ ಸಾರ್ವಜನಿಕರು ಪಾವತಿ ಮಾಡುತ್ತಿಲ್ಲ. ಹೀಗಾಗಿ ಜನರಲ್ಲಿ ನೀರಿನ ಹಾಗೂ ಒಳಚರಂಡಿ ತೆರಿಗೆ ಬಗ್ಗೆ
ಅರಿವು ಮೂಡಿಸುವುದಕ್ಕಾಗಿಯೇ ಈ ಕ್ಯಾಂಪ್ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜ.23ರವರೆಗೆ ಈ ಕ್ಯಾಂಪ್ ನಡೆಯಲಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3ರ ವರೆಗೆ ತೆರಿಗೆ ಪಾವತಿ ಮಾಡಬಹುದು. ಪಿ ಆ್ಯಂಡ್ ಟಿ ನೀರಿನ ಟ್ಯಾಂಕ್
ಹತ್ತಿರದ ಕ್ಯಾಂಪ್ನಲ್ಲಿ ನೇರವಾಗಿ ಸಾರ್ವಜನಿಕರು ತೆರಿಗೆ ಪಾವತಿಸಬಹುದಾಗಿದೆ. ಅಲ್ಲದೇ, ಪಿ ಆ್ಯಂಡ್ ಟಿ ಕಾಲೋನಿ, ರೆಹಮತ್ ನಗರ, ಅಂಬಿಕಾ ನಗರ,
ತಾರಫೈಲ್, ಎಸ್ಬಿಐ ಕಾಲೋನಿ, ಬಿದ್ದಾಪುರ ಕಾಲೋನಿ, ಸಾಯಿನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪಾಲಿಕೆ ಸಿಬ್ಬಂದಿ ಮನೆ-ಮನೆ ಬಂದು ತೆರಿಗೆ ಸಂಗ್ರಹಣೆ ಮಾಡಲಿದ್ದಾರೆ ಎಂದು ವಿವರಿಸಿದರು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ನರಸಿಂಹ ರೆಡ್ಡಿ, ಮಹಾನಗರ ಪಾಲಿಕೆ ಕಾರ್ಯಪಾಲಕ
ಅಭಿಯಂತರ ಚಂದ್ರರೆಡ್ಡಿ, ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಎನ್.ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ