ಬಸವೇಶ್ವರ ಭಾವಚಿತ್ರಕ್ಕೆ ಅಪಮಾನಕ್ಕೆ ಖಂಡನೆ
Team Udayavani, Dec 23, 2021, 12:32 PM IST
ಚಿಂಚೋಳಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ವೃತ್ತದಲ್ಲಿನ ಮಹಾತ್ಮ ಬಸವೇಶ್ವರ ಭಾವಚಿತ್ರಕ್ಕೆ ಸಗಣಿ ಬಳಿದು ಅಪಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಾಲೂಕು ವೀರಶೈವ ಲಿಂಗಾಯಿತ ಸಮಾಜದವರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಚಿತ್ರಶೇಖರ ಪಾಟೀಲ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಎಂಇಎಸ್, ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ದೇಶದ್ರೋಹಿಗಳ ಅಟ್ಟಹಾಸ ಮಿತಿ ಮೀರಿದೆ. ಆದ್ದರಿಂದ ರಾಜ್ಯದಲ್ಲಿ ಎಂಇಎಸ್, ಶಿವಸೇನೆ ಸಂಘಟನೆಗಳನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿದರು.
ಯುವ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಹಲಸಿ ಗ್ರಾಮದ ಘಟನೆ ಖಂಡನೀಯವಾಗಿದೆ ಎಂದರು. ಮುಖಂಡರಾದ ಶರಣು ಮೋತಕಪಳ್ಳಿ, ನಾಗರಾಜ ಸೀಳಿನ, ನಾಗರಾಜ ಮಲಕೂಡ, ಸಂಪತ್ ಕುಮಾರ ಮುಸ್ತಾರಿ, ಜಗ್ಗು ಗಿರಣಿ, ಕಾಶಿನಾಥ ಪಾಟೀಲ ಎಂಪಳ್ಳಿ, ವಿರೂಪಾಕ್ಷ ಎಂಪಳ್ಳಿ, ಎಪಿಎಂಸಿ ಅಧ್ಯಕ್ಷ ಅಶೋಕ ಪಡಶೆಟ್ಟಿ, ಸುರೇಶ ದೇಶಪಾಂಡೆ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ