ರಾಷ್ಟ್ರಧ್ವಜಕ್ಕೆ ಅವಮಾನ-ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
Team Udayavani, Feb 15, 2022, 2:24 PM IST
ಕಲಬುರಗಿ: ರಾಷ್ಟ್ರಧ್ವಜ ಕುರಿತಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ 1971ರ ಕಾಯ್ದೆಯ ಸೆಕ್ಸನ್ 2ರ ಸ್ಪಷ್ಟ ಉಲ್ಲಂಘನೆಯಾಗಿರುವುದರಿಂದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.
ದೇಶದ ಕೆಂಪುಕೋಟೆ ಸೇರಿದಂತೆ ಎಲ್ಲೆಡೆಯೂ ರಾಷ್ಟ್ರಧ್ವಜದ ಬದಲು ಕೇಸರಿ ಧ್ವಜವನ್ನು ಹಾರಿಸುವ ಕುರಿತಾಗಿ ಹೇಳಿರುವುದು ಪ್ರಚೋದನಕಾರಿ ಆಗಿದೆ. ಭಾರತದ ರಾಷ್ಟ್ರಧ್ವಜವನ್ನು 135 ಕೋ.ರೂ. ಜನರು ಗೌರವಿಸುವುದಾಗಿದೆ. ಆದರೆ ಸಚಿವರ ಹೇಳಿಕೆ ಭಾರತದ ಪ್ರಜೆಗಳ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಸಚಿವರ ಸಮಾಜದಲ್ಲಿ ಹೇಳಿಕೆಯು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುತ್ತದೆ. ಈಗಾಗಲೇ ರಾಜ್ಯದಲ್ಲಿ ವಿವಿಧ ಸಮುದಾಯಗಳ ನಡುವಿನ ಸಂಬಂಧ ಅತ್ಯಂತ ಸೂಕ್ಷ್ಮವಾಗಿದ್ದು, ಇಂತಹ ಸಂದರ್ಭದಲ್ಲಿ ಸಚಿವರ ಹೇಳಿಕೆ ಅಶಾಂತಿ ಹಾಗೂ ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಲಿದೆ. ಇದನ್ನೆಲ್ಲ ಗಮನಿಸಿ ರಾಜ್ಯದ ಶಾಂತಿ, ಸುವ್ಯವಸ್ಥೆ ಗಮನದಲ್ಲಿ ಇಟ್ಟುಕೊಂಡು ಸಂಬಂಧಪಟ್ಟ ಕಾನೂನಿನಡಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾನೂನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮಾಜಿ ಶಾಸಕ ಬಿ.ಆರ್. ಪಾಟೀಲ್, ಮುಖಂಡರಾದ ಡಾ| ಕಿರಣ ದೇಶಮುಖ, ಈರಣ್ಣ ಝಳಕಿ, ರಾಜೀವ್ ಜಾನೆ, ಮಜರ್ ಅಲ್ಲಂಖಾನ್ ಸೇರಿದಂತೆ ಮುಂತಾದವರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ