ಇಡಿ ದುರ್ಬಳಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ


Team Udayavani, Jun 18, 2022, 12:09 PM IST

6ED

ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರ ದೇಶದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜಕೀಯ ಹಿತಾಸಕ್ತಿಗಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ವಿನಾಕಾರಣ ವಿಚಾರಣೆ ಮಾಡುತ್ತಿದೆ. ಆದ್ದರಿಂದ ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ನಗರದ ಸರದಾರ್‌ ವಲ್ಲಭಬಾಯಿ ಪಟೇಲ್‌ ವೃತ್ತದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮಾಜಿ ಶಾಸಕ ಬಿ.ಆರ್‌. ಪಾಟೀಲ ಮಾತನಾಡಿ, ರಾಹುಲ್‌ ಗಾಂಧಿ ಅವರನ್ನು ಸತತವಾಗಿ ವಿಚಾರಣೆ ಮಾಡುವ ಮೂಲಕ ಕೇಂದ್ರ ಸರಕಾರ ದೇಶದ ಜನತೆ ಎದುರು ತಪ್ಪು ಅಭಿಪ್ರಾಯ ಬಿಂಬಿಸುವ ಮೂಲಕ ಮುಂದಿನ ರಾಜಕೀಯ ಅಪಾಯವನ್ನು ತಪ್ಪಿಸಿಕೊಳ್ಳಲು ಹವಣಿಸುತ್ತಿದೆ ಎಂದು ದೂರಿದ ಅವರು, ಕೇಂದ್ರದ ಕೈಗೊಂಬೆಯಾಗಿರುವ ಜಾರಿ ನಿರ್ದೇಶನಾಲಯ ಸೇಡಿನ ರಾಜಕಾರಣ ಮಾಡುತ್ತಿದೆ. ಕಾನೂನು ಪ್ರಕಾರ ತನಿಖೆ ಮಾಡಲು ತಕರಾರು ಇಲ್ಲ, ಮೊದಲು ಎಫ್‌ಐಆರ್‌ ಹಾಕಿ ತನ್ನ ನೈತಿಕತೆ ತೋರಿಸಬೇಕು ಎಂದು ಆಗ್ರಹಿಸಿದರು.

ದೆಹಲಿ ಪೊಲೀಸರಂತೂ ತೀರಾ ಭಿನ್ನವಾಗಿ ವರ್ತಿಸಿ ತಮ್ಮ ಮರ್ಯಾದೆ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ಕಚೇರಿಗೆ ತೆರಳಿ ಗಲಾಟೆ ಮಾಡಿದ್ದಾರೆ. ಸಂಸದ ಡಿ.ಕೆ. ಸುರೇಶ ಅವರನ್ನು ತಳ್ಳಿ ಅವಮಾನಿಸಿದ್ದಾರೆ. ಕಾಂಗ್ರೆಸ್‌ ಎಲ್ಲ ತನಿಖೆಗೆ ಸಿದ್ಧವಿದೆ. ನೀವು ಮುಖಾಮುಖೀಯಾಗಿರಿ? ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.

ಪ್ರತಿಭಟನೆಯಲ್ಲಿ ಶಾಸಕಿ ಕನೀಜ್‌ ಫಾತಿಮಾ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ, ಮಜರ್‌ ಖಾನ್‌, ಸುಭಾಷ ರಾಠೊಡ, ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ, ಲಿಂಗರಾಜ ತಾರಫೈಲ್‌, ರೇಣುಕಾ ಸಿಂಗೆ ಹಾಗೂ ಇನ್ನಿತರರು ಇದ್ದರು.

ರಾಹುಲ್‌ ವಿರುದ್ಧ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಇಡಿ, ಸಿಬಿಐ ಮತ್ತು ಇತರೆ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ಹಲವು ನಾಯಕರನ್ನು ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್‌ ನಾಯಕರನ್ನು ಗುರಿ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ. ಇದರಿಂದ ದೇಶದ ಜನತೆಗೂ ಬಿಜೆಪಿ ಒಳಮುಖ ಗೊತ್ತಾಗುತ್ತದೆ. ಈಗಾಗಲೇ ಜನರು ಎಂಟು ವರ್ಷಗಳಿಂದ ದಾರಿ ತಪ್ಪಿದ್ದಾರೆ. ಇನ್ನು ಹಾಗಾಗದೇ ಇರಲು ಹೋರಾಟ ಮಾಡಲಾಗುತ್ತಿದೆ. -ಚೇತನ ಗೋನಾಯಕ, ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಕೇಂದ್ರ ಸರಕಾರ ಡಾ| ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಯಿಸಿ ವಿಚಾರಣೆ ಮಾಡುವ ನಾಟಕವಾಡಿ ಮಾನಸಿಕವಾಗಿ ಕುಗ್ಗಿಸಲು ಯತ್ನಿಸಿದೆ. ಇದು ಯಾರಿಂದಲೂ ಸಾಧ್ಯವಿಲ್ಲ. ಖರ್ಗೆ ತುಂಬಾ ಗಟ್ಟಿಗರು. ಕಾಂಗ್ರೆಸ್‌ ಸಂವಿಧಾನವನ್ನು ಗೌರವಿಸಿತ್ತು. ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ತೊಲಗಬೇಕು. -ತಿಪ್ಪಣ್ಣಪ್ಪ ಕಮಕನೂರು, ವಿಧಾನ ಪರಿಷತ್‌ ಮಾಜಿ ಸದಸ್ಯ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.