ತೊಗರಿ 200-ಬೇಳೆ 900 ರೂ. ದರ ಹೆಚ್ಚಳ: ರೈತರಿಗೆ ನಷ್ಟ


Team Udayavani, Apr 5, 2020, 4:00 PM IST

ತೊಗರಿ 200-ಬೇಳೆ 900 ರೂ. ದರ ಹೆಚ್ಚಳ: ರೈತರಿಗೆ ನಷ್ಟ

ಕಲಬುರಗಿ: ಕೋವಿಡ್ 19 ಸೋಂಕು ಭೀತಿ ಹಿನ್ನೆಲೆಯಲ್ಲಿ ಎರಡು ವಾರ ಕಾಲ ಸ್ಥಗಿತಗೊಂಡ ಎಪಿಎಂಸಿ ವಹಿವಾಟು ಈಗ ಶುರುವಾಗಿರುವುದು ದಾಲ್‌ ಮಿಲ್‌ದಾರರಿಗೆ ಲಾಭವಾದರೆ, ರೈತರಿಗೆ ನಷ್ಟ ಎದುರಾಗಿದೆ.

ತೊಗರಿ ಕ್ವಿಂಟಲ್‌ಗಿಂತ ಈಗ ಕೇವಲ 200 ರೂ. ಹೆಚ್ಚಳವಾದರೆ ತೊಗರಿ ಬೇಳೆ ದರ ಮಾತ್ರ 900 ರೂ. ಹೆಚ್ಚಳವಾಗಿದೆ. ಇದನ್ನು ನೋಡಿದರೆ ರೈತರಿಗೆ ಕಹಿ-ವ್ಯಾಪಾರಿಗಳಿಗೆ ಸಿಹಿ ಎನ್ನುವಂತಾಗಿದೆ.

ಕೋವಿಡ್ 19  ಹರಡುವ ಮುಂಚೆ ತೊಗರಿ ಕ್ವಿಂಟಲ್‌ಗೆ 5,100 ರೂ. ಮಾರಾಟವಾದರೆ, ತೊಗರಿ ಬೇಳೆ ಬೆಲೆ ಕ್ವಿಂಟಲ್‌ಗೆ 7,400 ರೂ. ದರವಿತ್ತು. ಈಗ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಕ್ವಿಂಟಲ್‌ಗೆ 5,300 ರೂ. ಇದ್ದರೆ ಬೇಳೆ ಬೆಲೆ 8,900 ರೂ. ಇಲ್ಲವೇ 9,000 ರೂ. ಆಗಿದೆ. ವಿಪರ್ಯಾಸದ ಸಂಗತಿವೆನಂದರೆ ಸೂಪರ್‌ ಶಾಪ್‌, ಕಿರಾಣಿ ಜನರಲ್‌ ಸ್ಟೋರ್ಸ್‌ , ಡಿಪಾರ್ಟ್ ಮೆಂಟ್‌ ಸ್ಟೋರ್ಸ್‌ಗಳಲ್ಲಿ ಕ್ವಿಂಟಲ್‌ಗೆ 11,000 ಕ್ವಿಂಟಲ್‌ಗೆ ಮಾರಾಟ ಮಾಡಲಾಗುತ್ತಿದೆ. ಕೋವಿಡ್ 19  ಲಾಕ್‌ಡೌನ್‌ದ ಸಮಯದ ದುರುಪಯೋಗ ಎನ್ನುವಂತೆ ವ್ಯಾಪಕ ನಡೆಯುತ್ತಿದೆ.

ಎಪಿಎಂಸಿ ವಹಿವಾಟು ಪಕ್ಕದ ಮಹಾರಾಷ್ಟ್ರ, ರಾಜ್ಯದ ಬೀದರ್‌, ವಿಜಯಪುರ ಈಗ ಬಂದಿದೆ. ಕಳೆದ ವಾರದ ಅವಧಿಯಲ್ಲೇ 36,000 ಕ್ವಿಂಟಲ್‌ ತೊಗರಿ ವಹಿವಾಟು (ಮಾರಾಟ)ವಾಗಿದೆ. ತೊಗರಿ ಬೇಳೆ 8,900-9,000 ರೂ. ದರವಾದರೆ ತೊಗರಿ ಕನಿಷ್ಟ 6,000 ರೂ. ದರವಾದರೂ ಮಾರಾಟವಾಗಬೇಕು. ಈಗ ಇಷ್ಟೊಂದು ಪ್ರಮಾಣದಲ್ಲಿ ತೊಗರಿ ರೈತರಿಗೆ ನಷ್ಟವಾದರೂ ಯಾರು ಚಕಾರವೆತ್ತುತ್ತಿಲ್ಲ. ಒಟ್ಟಾರೆ ಕಲಬುರಗಿ ಎಪಿಎಂಸಿಯಲ್ಲಿ ತೊಗರಿ ವಹಿವಾಟು ಶುರುವಾಗಿರುವುದು ದಾಲ್‌ ಮಿಲ್‌ (ಬೇಳೆ ಕಾರ್ಖಾನೆಗಳಿಗೆ) ಮಾತ್ರ ಲಾಭವಾಗುತ್ತಿದೆ. ಇದನ್ನೆಲ್ಲ ಅವಲೋಕಿಸಿದರೆ ಅತ್ತ ರೈತರಿಗೆ ಲಾಭವಿಲ್ಲ, ಇತ್ತ ಗ್ರಾಹಕರಿಗೂ ಲಾಭ ಇಲ್ಲ. ಕೇವಲ ಮದ್ಯವರ್ತಿಗಳಿಗೆ (ದಾಲ್‌ ಮಿಲ್‌ದಾರರು ) ಲಾಭ ಎನ್ನುವಂತಾಗಿದೆ.

ಎರಡು ದಿನ ರಜೆ :  ಏ. 5ರಂದು ರವಿವಾರ ರಜೆ ಜತೆಗೆ ಸೋಮವಾರ ಏ. 6ರಂದು ಮಹಾವೀರ ಜಯಂತಿಯಿದ್ದು, ರಾಷ್ಟ್ರೀಯ ರಜೆಯಿದೆ. ಇಷ್ಟಿದ್ದರೂ ಎಪಿಎಂಸಿ ವಹಿವಾಟಿಗೆ ಬಂದ್‌ ಇಲ್ಲ. ಈ ದಿನಗಳೂ ಸಹ ತೊಗರಿ ವಹಿವಾಟಿನ ಮಾರಾಟ ಪ್ರಕ್ರಿಯೆ ನಡೆಯಲಿದೆ. ಇದನ್ನು ನೋಡಿದರೆ ದಾಲ್‌ ಮಿಲ್‌ ಉದ್ಯಮದ ವ್ಯವಹಾರ ಎಷ್ಟು ಪ್ರಭಾವಶಾಲಿ ಎಂಬುದು ನಿರೂಪಿಸುತ್ತದೆ.

ರೈತರ ಅನ್ಯಾಯಕ್ಕೆ ಕೊನೆ ಇಲ್ಲವೇ? : ಕೋವಿಡ್ 19 ದಿಂದ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ಕಲ್ಲಂಗಡಿ, ಹೂವು ಇತರ ಬೆಳೆಗಳ ಖರೀದಿಗೆ ಮುಂದೆ ಬರುತ್ತಿಲ್ಲ. ಈ ಕಡೆ ಬೆಂಬಲ ಬೆಲೆಯಲ್ಲಿ 20 ಕ್ವಿಂಟಲ್‌ ತೊಗರಿ ಖರೀದಿ ಮಾಡುವುದಾಗಿ ಹೇಳಿದ ಸರ್ಕಾರ ಮಾತಿಗೆ ತಪ್ಪಿ ಕೇವಲ 10 ಕ್ವಿಂಟಲ್‌ ಖರೀದಿ ಮಾಡಿ ಅನ್ಯಾಯ ಮಾಡಿದೆ. ಈ ಕಡೆ ಮಾರುಕಟ್ಟೆಯಲ್ಲೂ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

 

-ಹಣಮಂತರಾವ್‌ ಭೈರಾಮಡಗಿ

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.