ಜಾನುವಾರುಗಳಿಗೆ ವಿಮೆ ಮಾಡಿಸಿ
Team Udayavani, Jul 25, 2022, 3:05 PM IST
ಕಾಳಗಿ: ರೈತರು ತಮ್ಮಲಿರುವ ಹಸು, ಎಮ್ಮೆಗಳಿಗೆ ವಿಮೆ ಮಾಡಿಸುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ತಾಲೂಕು ಪಶು ಆಸ್ಪತ್ರೆ ಹಿರಿಯ ಪಶುವೈದ್ಯಾಧಿಕಾರಿ ಡಾ| ಅಣ್ಣರಾವ್ ಪಾಟೀಲ ಹೇಳಿದರು.
ತಾಲೂಕಿನ ಗೋಟೂರ ತಾಂಡಾದಲ್ಲಿ ಹಸು ಮತ್ತು ಎಮ್ಮೆಗಳ ವಿಮೆ ಮಾಡಿಸುವಂತೆ ರೈತರಿಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಪಶುಪಾಲನೆ ಇಲಾಖೆ ಎನ್.ಎಲ್. ಎಂ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಬಿಪಿಎಲ್ ರೈತರಿಗೆ ವಿಮೆ ಕಂತಿನ ಶೇ. 70 ಹಾಗೂ ಸಾಮಾನ್ಯ ರೈತರಿಗೆ ಶೇ.50ರಷ್ಟು ಮೊತ್ತವನ್ನು ಸರ್ಕಾರವೇ ಭರಿಸುತ್ತದೆ. ಆದ್ದರಿಂದ ರೈತರು ತಡ ಮಾಡದೇ ತಮ್ಮ ಹಸು ಹಾಗೂ ಎಮ್ಮೆಗಳ ವಿಮೆ ಮಾಡಿಸಿಕೊಳ್ಳಬೇಕು ಎಂದರು.
ವಿಮೆ ಅವಧಿಯು ಒಂದರಿಂದ ಮೂರು ವರ್ಷ ವರೆಗೆ ಇರುತ್ತದೆ. ಈಗಾಗಲೇ ಹಲವಾರು ಜಾನುವಾರುಗಳನ್ನು ವಿಮೆಗೆ ಒಳಪಡಿಸಿದ್ದು, ಹಂತ ಹಂತವಾಗಿ ಉಳಿದ ಜಾನುವಾರುಗಳಿಗೂ ವಿಮೆ ಮಾಡಲಾಗುವುದು ಎಂದು ಹೇಳಿದರು.
ತಾಲೂಕಿನ 14 ಪಶು ಆಸ್ಪತ್ರೆಯಲ್ಲಿ ಹಸು, ಎಮ್ಮೆಗಳ ವಿಮೆ ಮಾಡಲಾಗುತ್ತಿದ್ದು ಜುಲೈ 31ಕ್ಕೆ ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ಆಸ್ಪತ್ರೆಗೆ ಸಂಪರ್ಕಿಸುವಂತೆ ಪಶುವೈದ್ಯ ಅಣ್ಣರಾವ್ ಪಾಟೀಲ ತಿಳಿಸಿದ್ದಾರೆ. ಈ ಸಮಯದಲ್ಲಿ ತಾಂಡಾದ ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ಚಿಕಿತ್ಸೆ ನೀಡಿ, ಮಳೆಗಾಲದಲ್ಲಿ ಜಾನುವಾರು ಸಂರಕ್ಷಣೆ ಬಗ್ಗೆ ರೈತರಿಗೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ