ವೈಯಕ್ತಿಕ ಲಾಭಕ್ಕೆ ಟೀಕೆ ಸರಿಯಲ್ಲ: ಕೊರಬು
Team Udayavani, Dec 19, 2021, 11:09 AM IST
ಅಫಜಲಪುರ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ಮುಖಂಡ ಮಕ್ಬೂಲ್ ಪಟೇಲ್ ಅವರು ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಕೊರತೆಯಿಂದ ಈ ಸಲ ಹಿನ್ನಡೆಯಾಗಿದೆ ಎಂದು ಹೇಳಿರುವ ಹೇಳಿಕೆಗೆ ಶಾಸಕರ ಅಭಿಮಾನಿಗಳು ವೈಯಕ್ತಿಕ ಲಾಭಕ್ಕೆ ಟೀಕಿಸಿರುವುದು ಸರಿಯಲ್ಲ ಎಂದು ಜೆ.ಎಂ.ಕೊರಬು ಪೌಂಡೇಶನ್ ಸಂಸ್ಥಾಪಕ ಹಾಗೂ ಸಮಾಜ ಸೇವಕ ಜೆ.ಎಂ.ಕೊರಬು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಪಂ ಮಾಜಿ ಸದಸ್ಯ ಪ್ರಕಾಶ ಜಮಾದಾರ, ಮತೀನ್ ಪಟೇಲ್, ಸಿದ್ಧಾರ್ಥ ಬಸರಿಗಿಡ ವಿನಾಕಾರಣ ಪಟೇಲರನ್ನು ಪಕ್ಷ ವಿರೋಧಿ ಎಂದು ಹೇಳಿದ್ದು ನೋವುಂಟಾಗಿದೆ. ಕೂಡಲೇ ಈ ಮುಖಂಡರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಎಂ.ವೈ. ಪಾಟೀಲ ವಿಧಾನ ಪರಿಷತ್ ಚುನಾವಣೆಯಲ್ಲಿ ತಾಲೂಕಿನ ಕೆಲ ಗ್ರಾಪಂ ಸದಸ್ಯರನ್ನು ಮನವೊಲಿಸಿ ಮತ ಕೇಳಿದ್ದರೆ ಕಾಂಗ್ರೆಸ್ಗೆ ಹೆಚ್ಚಿನ ಮತಗಳು ಬರುತ್ತಿದ್ದವು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಕ್ಬೂಲ್ ಪಟೇಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೇ ಶಾಸಕರ ಅಭಿಮಾನಿಗಳು ಪಕ್ಷ ವಿರೋಧಿ ಚಟುವಟಿಕೆ ಎಂಬುದಾಗಿ ಹೇಳಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೇರೆ ಪಕ್ಷದಿಂದ ಬಂದವರಾದ ಇವರು ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಸಹಿಸುತ್ತಿಲ್ಲ. ಶಾಸಕರು ಇವರಿಗೆ ತಿಳಿ ಹೇಳಬೇಕು ಎಂದರು.
ಪೌಂಡೇಶನ್ ಅಧ್ಯಕ್ಷ ಶಿವಪುತ್ರ ಜಿಡ್ಡಗಿ ಮಾತನಾಡಿ ಮಕ್ಬೂಲ್ ಪಟೇಲರನ್ನು ವಿನಾಕಾರಣ ಟೀಕೆ ಮಾಡಿರುವ ಶಾಸಕರ ಬೆಂಬಲಿಗರು ಕೂಡಲೇ ಕ್ಷಮೆ ಯಾಚಿಸಬೇಕು. ಅನಾವಶ್ಯಕ ಗೊಂದಲಕ್ಕೆ ಎಡೆಮಾಡಿಕೊಡುವುದನ್ನು ಬಿಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದರು.
ಮುಖಂಡರಾದ ಮಹಾಂತೇಶ ಬಳೂಂಡಗಿ, ಮಕ್ಬೂಲ್ ಶೇಖ್ ಮಾಶಾಳ, ರವಿ ಗೌರ, ಭೀರಣ್ಣ ಕನಕಟೇಲರ್, ರಾಜು ಆರೇಕರ್, ಖಾಜಪ್ಪ ಬಂಜತ್ರಿ, ಭೀಮಾಶಂಕರ ಬಿರಾದಾರ, ಸಂತೋಷ ಗಂಜಿ, ಗಡ್ಡೆಪ್ಪ ಮೇತ್ರಿ, ಕರೆಪ್ಪ ಪೂಜಾರಿ, ಇಸಾಕ್ ಮಕಾಂದಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!