ಬೆಳೆನಷ್ಟ; ಪರಿಹಾರಕ್ಕೆ ಭಂಕಲಗಿ ಆಗ್ರಹ
Team Udayavani, Aug 10, 2022, 6:38 PM IST
ಚಿತ್ತಾಪುರ: ತಾಲೂಕಿನ ಕರದಾಳ ರಸ್ತೆಯಲ್ಲಿ ನಿರ್ಮಾಣವಾದ ಶ್ರೀ ಸಿಮೆಂಟ್ ಸೂಲಹಳ್ಳಿ ರೈಲ್ವೆ ಪ್ಲಾಂಟ್ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಹೊಲಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಹೀಗಾಗಿ ಕೂಡಲೇ ರೈತರಿಗೆ ಬೆಳೆ ಪರಿಹಾರ ನೀಡಬೇಕೆಂದು ಪುರಸಭೆ ವಿಪಕ್ಷ ನಾಯಕ ನಾಗರಾಜ ಭಂಕಲಗಿ ಆಗ್ರಹಿಸಿದರು.
ಕರದಾಳ ರಸ್ತೆಯಲ್ಲಿ ಕಾಮಗಾರಿ ನಡೆಯುವ ಸ್ಥಳಕ್ಕೆ ರೈತರೊಂದಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಸಿಮೆಂಟ್ ಕಂಪನಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಸಿಸಿ ರಸ್ತೆ ನಿರ್ಮಿಸಿದ್ದಾರೆ. ಇಲ್ಲಿ ರೈತರ ಹಿತವನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಹೀಗಾಗಿ ಮೊದಲು ಬೆಳೆ ನಷ್ಟ ಪರಿಹಾರ ನೀಡಬೇಕು. ನಂತರವೇ ಸಿಸಿ ರಸ್ತೆ, ಚರಂಡಿ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿ ಮುಂದುವರಿಸಬೇಕೆಂದು ಒತ್ತಾಯಿಸಿದರು.
ರೈಲ್ವೆ ಪ್ಲಾಂಟ್ ನಡೆಯುವ ಸ್ಥಳದಲ್ಲಿದ್ದ ಮೂರು ಹಣದಿಗಳು(ಬಂಡಿ ದಾರಿ) ಈಗ ಅವೈಜ್ಞಾನಿಕ ರಸ್ತೆ ಮತ್ತು ರೈಲ್ವೆ ಪ್ಲಾಂಟ್ ನಿರ್ಮಾಣದಿಂದ ಬಂದ್ ಆಗಿದೆ. ಇದರಿಂದ ಹೊಲಗಳಿಗೆ ಅರ್ಧ ಕಿ.ಮೀ ಇದ್ದ ಅಂತರ 12 ಕಿ.ಮೀ. ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕಪಡಿಸಿದರು.
ಕಂದಾಯ ಅಧಿಕಾರಿಗಳು ಸಮಗ್ರ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ, ಸರಕಾರದ ಪರಿಹಾರ ಜತೆಗೆ ಸಿಮೆಂಟ್ ಕಂಪನಿ ವತಿಯಿಂದಲೂ ಪರಿಹಾರ ಕೊಡಿಸಬೇಕೆಂದು ಒತ್ತಾಯಿಸಿದರು.
ಒಂದು ವಾರದಲ್ಲಿ ಕಂಪನಿ ಅಧಿ ಕಾರಿಗಳು ಲಿಖೀತ ರೂಪದಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ರೈತರನ್ನು ಸಂಘಟಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಂದಾಯ ಅಧಿಕಾರಿಗಳಾದ ಮೈನೋದ್ದಿನ್, ಮದುಸೂಧನ ಘಾಳೆ, ಕೃಷಿ ಅಧಿಕಾರಿ ಬಸವರಾಜ ಬಂಗರಗಿ, ಪುರಸಭೆ ಸದಸ್ಯರಾದ ರಮೇಶ ಬೊಮ್ಮನಳ್ಳಿ, ಪ್ರಭು ಗಂಗಾಣಿ, ಶ್ರೀನಿವಾಸರೆಡ್ಡಿ ಪಾಲಪ್, ರೈತ ಮುಖಂಡರಾದ ರಾಜೇಶ ತುರೆ, ಸುವನರೆಡ್ಡಿ, ಸಿದ್ಧಣ್ಣ ಹೊತಿನಮಡಿ, ನಾಗರಾಜ ರೇಷ್ಮಿ, ಅನಿಲ ವಡ್ಡಡಗಿ, ಮಂಜುನಾಥಗೌಡ ಪಾಟೀಲ, ಮಲ್ಲಿಕಾರ್ಜುನ ಪೂಜಾರಿ, ಮೋಹನ ಮುಸ್ತಾಜಾರ್, ಬಸಣ್ಣ ತಳವಾರ, ಭೀಮರಾಯ ಹೊತಿನಮಡಿ, ಸತ್ತಾರಸೇಟ್ ಗೋಲಾ, ನರಸಪ್ಪ ಭೋವಿ, ಶರಣರೆಡ್ಡಿ ಪಾಲಪ್, ಮಲ್ಲಿಕಾರ್ಜುನ ಗಡೆಸೂರ, ವಿಕ್ರಮರೆಡ್ಡಿ ಗಡೆಸೂರ, ವಿಶ್ವರೆಡ್ಡಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ