ಜಿಲ್ಲಾಧಿಕಾರಿ ಬಗೆಹರಿಸುವರೇ ಭಂಕೂರ ಸಮಸ್ಯೆ


Team Udayavani, Jun 18, 2022, 1:12 PM IST

10DC

ಶಹಾಬಾದ: ತಾಲೂಕಿನ ಭಂಕೂರ ಗ್ರಾಪಂ ಕೇಂದ್ರದಲ್ಲಿಯೇ ಅಶುದ್ಧ ನೀರು, ಗ್ರಾಮದ ಒಳಗೆ ಬರುವ ಹದಗೆಟ್ಟ ಇಕ್ಕಟ್ಟಾದ ರಸ್ತೆ, ಸಾರ್ವಜನಿಕರಿಗೆ ಹೂಳಲು ಸ್ಮಶಾನವಿಲ್ಲ. ಬಹುತೇಕ ಬಡಾವಣೆಯಲ್ಲಿ ಚರಂಡಿ ಸಮಸ್ಯೆ ತಲೆದೋರಿದ್ದು, ಶನಿವಾರ ಗ್ರಾಮಕ್ಕೆ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಮೂಲಕ ಜಿಲ್ಲಾಧಿಕಾರಿಗಳು ಭಂಕೂರ ಗ್ರಾಮಕ್ಕೆ ಆಗಮಿಸಲಿದ್ದು ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವರೆಂದು ಇಲ್ಲಿನ ಗ್ರಾಮಸ್ಥರು ಅಪಾರ ನಿರೀಕ್ಷೆ ಹೊಂದಿದ್ದಾರೆ.

ಸ್ಮಶಾನದ ಸಮಸ್ಯೆ: ಕಳೆದು ಎರಡು ದಶಕಗಳಿಂದ ಇಲ್ಲಿನ ದೊಡ್ಡದಾದ ಸಮಸ್ಯೆಯೆಂದರೆ ಹೂಳಲು ಸ್ಮಶಾನವಿಲ್ಲ. ಗ್ರಾಮದಲ್ಲಿ ಸುಮಾರು ಹದಿನೈದು ಸಾವಿರ ಜನಸಂಖ್ಯೆ ಹೊಂದಿದೆ. ಈ ಗ್ರಾಮದಲ್ಲಿ ಶವ ಹೂಳಲು ಕೇವಲ 40×60 ಜಾಗವಿದೆ. ಹೀಗಾಗಿ ಯಾರಾದರೂ ಶವ ಹೂಳಬೇಕೆಂದರೆ ಬೇರೆಯವರ ಶವ ತೆಗೆದು ಹೂಳುವ ಪರಿಸ್ಥಿತಿ ಇಲ್ಲಿದೆ.

ಸುಮಾರು 75 ವರ್ಷಗಳಿಗಿಂತಲೂ ಗ್ರಾಮದ ಎಲ್ಲ ಜನರು ಇಲ್ಲಿಯೇ ಶವ ಸಂಸ್ಕಾರ ಮಾಡುತ್ತಾ ಬಂದಿದ್ದಾರೆ. ಈಗ ಹೂಳಲು ಹೋದರೆ ಶವದ ಮೂಳೆಗಳೇ ತೇಲುತ್ತವೆ. ಜಮೀನು ಇದ್ದವರು ತಮ್ಮ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಿದರೆ, ಜಮೀನು ಇಲ್ಲದವರು ಈಗಾಗಲೇ ದೇಹದಾನ ಮಾಡಲು ಸುಮಾರು 40ಜನ ಮುಂದಾಗಿದ್ದಾರೆ. ಈಗಾಗಲೇ ಸ್ಮಶಾನ ಭೂಮಿಗಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಹತ್ತಿರ ಅನೇಕ ಬಾರಿ ಗ್ರಾಮಸ್ಥರು ಹೋಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಆದರೂ ಯಾರು ಗಮನಹರಿಸಿಲ್ಲ.

ರಸ್ತೆ ಸಮಸ್ಯೆ: ಗ್ರಾಮಕ್ಕೆ ಪ್ರವೇಶ ಮಾಡುವ ಕಮಾನಿನಿಂದ ಗ್ರಾಮದ ಅಂಬೇಡ್ಕರ್‌ ವೃತ್ತದವರೆಗಿನ ರಸ್ತೆ ಹಾಳಾಗಿದೆ. ಅಲ್ಲದೇ ಇಕ್ಕಟ್ಟಾದ ರಸ್ತೆಯಿಂದ ಸಾರ್ವಜನಿಕರು ಬೇಸತ್ತು ಹೋಗಿದ್ದಾರೆ.

ಚರಂಡಿ ಸಮಸ್ಯೆ: ಗ್ರಾಮದ ಮುಖ್ಯ ರಸ್ತೆ ಮತ್ತು ಶಾಂತನಗರದ ಹೌಸಿಂಗ್‌ ಸೊಸೈಟಿ ಬಡಾವಣೆಯಲ್ಲಿ ಒಳಚರಂಡಿ ಕೆಟ್ಟು ಹೋಗಿ ಬಡಾವಣೆಯಲ್ಲಿ ಎಲ್ಲೆಂದರಲ್ಲಿ ಹೊಲಸು ನೀರು ಹರಿದಾಡುತ್ತಿದೆ. ಇದರಿಂದ ಸೊಳ್ಳೆಗಳು ಹೆಚ್ಚಾಗಿ ನಿದ್ರೆ ಬಾರದಂತಾಗಿದೆ. ಅಲ್ಲದೇ ಸಾಂಕ್ರಾಮಿಕ ರೋಗಗಳು ಉಂಟಾಗುತ್ತಿವೆ.

ಕುಡಿಯುವ ನೀರಿನ ಸಮಸ್ಯೆ: ಗ್ರಾಮದಲ್ಲಿ ಜೀವ ನದಿ ಕಾಗಿಣಾ ನದಿಯಿಂದ ಇಲ್ಲಿನ ಜನರಿಗೆ ನೀರು ಪೂರೈಕೆಯಾಗುತ್ತಿದೆ. ಆದರೆ ಅದು ಕಲುಷಿತವಾಗಿದ್ದು, ಅನೇಕ ರೋಗಗಳು ಉದ್ಭವಿಸುತ್ತಿವೆ. ಆದ್ದರಿಂದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಬೇಕು. ಇಲ್ಲಿನ ಜನರಿಗೆ ಶುದ್ಧ ನೀರು ಒದಗಿಸಬೇಕೆಂದು ಹಲವಾರು ಬಾರಿ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ಈಗಲಾದರೂ ಇಲ್ಲಿನ ಬಹು ಬೇಡಿಕೆ ಇರುವ ಸೌಲಭ್ಯಗಳನ್ನು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಬಗೆಹರಿಯುವುದೇ ಎಂದು ಜನತೆ ಕಾತುರದಿಂದ ಕಾಯ್ದು ನೋಡುತ್ತಿದ್ದಾರೆ.

ಮಲ್ಲಿನಾಥ ಪಾಟೀಲ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.