ದೇಗುಲ ಸರ್ಕಾರಿ ವಶಕ್ಕೆ ಪಡೆಯಲು ಆಗ್ರಹ
Team Udayavani, Mar 16, 2022, 1:30 PM IST
ಚಿತ್ತಾಪುರ: ತಾಲೂಕಿನ ದಂಡಗುಂಡ ಗ್ರಾಮದ ಐತಿಹಾಸಿಕ ಶ್ರೀ ಬಸವಣ್ಣ ದೇವಸ್ಥಾನವು ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಈಗಿರುವ ಆಡಳಿತ ಮಂಡಳಿ ರದ್ದುಪಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಈ ವೇಳೆ ದೇವಸ್ಥಾನದ ಪೂಜಾರಿ ವಿದ್ಯಾನಂದ ಹಿರೇಮಠ ಸುದ್ದಿಗಾರರೊಂದಿಗೆ ಮಾತನಾಡಿ, ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಎಂದು ಕಳೆದ 2003ರಲ್ಲಿ ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಆದರೆ ಸಂಬಂಧಟಪ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲ್ಲಿಯ ವರೆಗೆ ಈ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಿಲ್ಲ ಎಂದು ಆರೋಪಿಸಿದರು.
ದೇವಸ್ಥಾನದ ಟ್ರಸ್ಟ್ ಆಡಳಿತ ಮಂಡಳಿ ಅನಧಿಕೃತವಾಗಿ ಮುಂದುವರಿದಿದೆ. ಅಲ್ಲದೇ ದೇವಸ್ಥಾನದ ಲೆಕ್ಕಪತ್ರವನ್ನು ಟ್ರಸ್ಟ್ ಸದಸ್ಯರೇ ನೋಡಿಕೊಳ್ಳುತ್ತಿದ್ದಾರೆ. ದೇಗುಲಕ್ಕೆ ಸಂಬಂದಿಸಿದಂತೆ ಬ್ಯಾಂಕ್ ಖಾತೆಯಲ್ಲಿ ಕೋಟ್ಯಂತರ ರೂ., ಅಪಾರವಾದ ಬಂಗಾರದ ಒಡವೆಗಳು, ಬೆಳ್ಳಿ, ಕಂಚಿನ ಗಂಟೆಗಳು ಇವೆ. ಆದ್ದರಿಂದ ದೇವಸ್ಥಾನದ ಈಗಿನ ಆಡಳಿತ ಮಂಡಳಿ ಸದಸ್ಯರನ್ನು ವಜಾಗೊಳಿಸಿ ಮುಜರಾಯಿ ಇಲಾಖೆಗೆ ವಶಪಡಿಸಿಕೊಳ್ಳಬೇಕು. ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಿ ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಗುರುರಾಜ ಪೂಜಾರಿ, ಶರಣಗೌಡ ಪೊಲೀಸ್ ಪಾಟೀಲ, ಮಲ್ಲಣ್ಣ ಕೋರೆ, ಶಿವಲಿಂಗರೆಡ್ಡಿ, ಬಸ್ಸಪ್ಪ ಆಡಕಾಯಿ, ವಿಶಾಲ ಸೌಕಾರ, ಶಿವಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್