ಪ್ರಕೃತಿಗೆ ಪ್ರಿಯವಲ್ಲದ ವಿಕಾಸದಿಂದ ವಿನಾಶ: ಗೋವಿಂದಾಚಾರ್ಯ


Team Udayavani, Dec 19, 2021, 10:35 AM IST

4sangama

ಕಲಬುರಗಿ: ಜಗತ್ತಿನಲ್ಲಿ ಅಭಿವೃದ್ಧಿ ಹೆಸರಲ್ಲಿ ಪ್ರಕೃತಿಗೆ ಮಾರಕವಾದ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ. ಪ್ರಕೃತಿಗೆ ಪ್ರಿಯವಲ್ಲದ ವಿಕಾಸ ವಿನಾಶಕ್ಕೆ ದಾರಿ ಮಾಡಿಕೊಡಲಿದೆ. ಪ್ರಕೃತಿಗೆ ವಿರುದ್ಧ ನಡೆದುಕೊಂಡರೆ ಅಪಾಯ ತಪ್ಪಿದ್ದಲ್ಲ ಎಂದು ಭಾರತ ವಿಕಾಸ ಸಂಗಮ ಸಂಸ್ಥಾಪಕ ಚಿಂತಕ ಕೆ.ಎನ್‌. ಗೋವಿಂದಾಚಾರ್ಯ ಎಚ್ಚರಿಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ವಿದ್ಯಾ ಸಂಸ್ಥೆ ಮತ್ತು ಭಾರತ ವಿಕಾಸ ಸಂಗಮ ಸಹಯೋಗದಲ್ಲಿ ಶನಿವಾರ ಆರಂಭವಾದ ಎರಡು ದಿನಗಳ “ಸೃಜನ ಶಕ್ತಿ ಸಂಗಮ-8′ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಳೆದ 500 ವರ್ಷಗಳಲ್ಲಿ ಕಂಡ ಪ್ರಗತಿ ಇತ್ತೀಚೆಯ ಕೇವಲ 50 ವರ್ಷಗಳಲ್ಲೇ ಕಂಡಿರಬಹುದು. 300 ವರ್ಷ ಕಾಲ ನಡೆದ ಪ್ರಗತಿ ವೇಗ ಈಗಿನ 30 ವರ್ಷಗಳಲ್ಲಿ ಆಗಿರಬಹುದು. ಆದರೆ, ಇದ್ಯಾವುದು ಸಕಾರಾತ್ಮಕ ಪ್ರಗತಿಯಲ್ಲ. ಬದಲಿಗೆ ಅಸಮತೋಲನ ಬೆಳವಣಿಗೆಯಾಗಿದ್ದು, ಮಾನವನ ಅಭಿವೃದ್ಧಿಗೆ ಪ್ರಕೃತಿ ಬಲಿಕೊಡುವುದು ಸರಿಯಲ್ಲ ಎಂದರು.

ಅಭಿವೃದ್ಧಿಗಾಗಿ ಭೂಮಿ ಹಾಳು ಮಾಡಿದರೆ ಅದು ವಿನಾಶ, ಭೂಮಿ ಅಭಿವೃದ್ಧಿಗಾಗಿ ನಾವು ಕಷ್ಟ ಪಟ್ಟರೆ ಅದೇ ವಿಕಾಸ ಎಂದರು. ಪ್ರಕೃತಿಗೆ ವಿರುದ್ಧವಾಗಿ ಜೀವಿಸುವ ಮತ್ತು ತನ್ನ ಸ್ವಾರ್ಥಕ್ಕಾಗಿ ಭೂಮಿ, ಪರಿಸರ ಹಾಳುವ ಮಾಡುವ ಏಕೈಕ ಜೀವಿ ಮನುಷ್ಯ. ಭೂಮಿ ಮೇಲೆ ನಿರಂತರವಾಗಿ ದಬ್ಟಾಳಿಕೆ ಮಾಡಿಕೊಂಡು ಬರುತ್ತಿರುತ್ತೇವೆ. ಭೂಮಿ ತಾಯಿ ಹಲವು ಸಲ ವಿಕೋಪಗಳ ಮೂಲಕ ಸುಧಾರಿಸಿಕೊಳ್ಳುವಂತೆ ಎಚ್ಚರಿಕೆ ನೀಡುತ್ತಿದ್ದರೂ, ಮನುಷ್ಯ ಎಚ್ಚೆತ್ತುಕೊಳ್ಳುವ ಮನಸು ಮಾಡುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಆಧುನಿಕ ಯುಗದಲ್ಲಿ ಡಾಟಾ ಸೆಕ್ಯೂರಿಟಿಗೆ ಮಹತ್ವ ನೀಡುತ್ತಿದ್ದೇವೆ. ಇದಕ್ಕೆ ನೀಡುವಷ್ಟು ಮಹತ್ವ ಮನುಷ್ಯನ ಹಿತರಕ್ಷಣೆಗೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೀದರ್‌ನ ಚಿದಂಬರ ಆಶ್ರಮದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಬಡವರಾಗಿದ್ದರೆ ಉಣ್ಣಲು, ಉಡಲು ಮಾತ್ರ ಕಷ್ಟ. ಆದರೆ, ಶ್ರೀಮಂತರಾಗಿದ್ದರೂ ಉಣ್ಣಲು ಆಗದ, ಉಡಲು ಆಗದ ಸ್ಥಿತಿ ತಲುಪುವುದೇ ನಿಜವಾದ ದರಿದ್ರತನ ಎಂದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್‌ ಡಾ| ಮಾತೋಶ್ರೀ ದಾಕ್ಷಾಯಿಣಿ ಅಪ್ಪ ಉದ್ಘಾಟಿಸಿದರು. ಸೇಡಂ ಕೊತ್ತಲಬಸವೇಶ್ವರ ಸಂಸ್ಥಾನದ ಪೂಜ್ಯ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಪ್ರಾಸ್ತಾವಿಕ ಮಾತನಾಡಿದರು. ಪೂಣಾದ ವನರಿ ಫೌಂಡೇಷನ್‌ ಅಧ್ಯಕ್ಷ ರವೀಂದ್ರ ಧಾರಿಯಾ, ಹೈದರಾಬಾದನ ಶಿಕ್ಷಣ ತಜ್ಞ ಮಾಧವ ರೆಡ್ಡಿ ವಿಶೇಷ ಉಪನ್ಯಾಸ ನೀಡಿದರು.

ಸಂಗಮದ ಸಂಯೋಜಕ ಮಾಧವರೆಡ್ಡಿ, ಸಂಘಟನಾ ಕಾರ್ಯದರ್ಶಿ ಸುರೇಶಚಂದ್ರ ಅಗ್ನಿ ಹೋತ್ರಿ, ದಕ್ಷಿಣ ಭಾರತ ಸಹ ಸಂಚಾಲಕ ಕೆ.ಜಿ.ಮುರುಳಿಧರನ್‌ ಹಾಗೂ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.