ಪಡಿತರ ವಿತರಣೆಯಲ್ಲಿ ಗೋಲ್‌ಮಾಲ್‌

ಫಲಾನುಭವಿಗಳಿಂದ ಹಣ ವಸೂಲಿ, ತೂಕದಲ್ಲಿ ವ್ಯತ್ಯಾಸ-ಆರೋಪ ದಾನಿಗಳಿಂದ ತಾಲೂಕಾಡಳಿತಕ್ಕೆ ಆಹಾರ ಪದಾರ್ಥ

Team Udayavani, Apr 9, 2020, 12:51 PM IST

09-April-10

ದೇವದುರ್ಗ: ದಾನಿಗಳು ನೀಡಿದ ಆಹಾರ ಪದಾರ್ಥಗಳನ್ನು ತಹಶೀಲ್ದಾರ್‌ ಕಚೇರಿಯಲ್ಲಿ ಸಂಗ್ರಹಿಸಲಾಗಿದೆ.

ದೇವದುರ್ಗ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡವರಿಗೆ ಪಡಿತರ ತಲುಪಿಸಲು ಏ.10ರ ವರೆಗೆ ಗಡುವು ನೀಡಲಾಗಿದ್ದು, ಆಹಾರಧಾನ್ಯ ವಿತರಣೆಯಲ್ಲಿ ಫಲಾನುಭವಿಗಳಿಂದ ಹಣ ವಸೂಲಿ, ತೂಕದಲ್ಲಿ ವ್ಯತ್ಯಾಸ ನಡೆದಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಗಾಣದಾಳ, ಕರ್ಕಹಳ್ಳಿ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮಕ್ಕೆ ಸಿದ್ಧತೆ ನಡೆದಿದೆ.

ಬಿಪಿಎಲ್‌, ಅಂತ್ಯೋದಯ ಸೇರಿ 50 ಸಾವಿರಕ್ಕೂ ಹೆಚ್ಚು ಕಾರ್ಡ್‌ ಹೊಂದಿವೆ. 2500 ಹೊಸ ಕಾರ್ಡ್‌ಗಳು ಬಾಕಿ ಇದ್ದು, ಅಂತಹ ಫಲಾನುಭವಿಗಳು ಪಡಿತರದಿಂದ ವಂಚಿತರಾಗಿದ್ದಾರೆ. ಉಚಿತ ಆಹಾರ ವಿತರಣೆಯಲ್ಲಿ ಹಣ ವಸೂಲಿ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಗೋಲ್‌ಮಾಲ್‌: ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಏ.14ರ ವರೆಗೆ ಲಾಕ್‌ ಡೌನ್‌ ಘೋಷಣೆ ಹಿನ್ನೆಲೆ ರಾಜ್ಯ ಸರ್ಕಾರ ಪಡಿತರದಾರರಿಗೆ ಎರಡು ತಿಂಗಳ ಅಕ್ಕಿ, ಗೋ ದಿ ಪೂರೈಸಲು ಆದೇಶಿಸಿದೆ. ಆದರೆ ಇಲ್ಲಿನ ಕೆಲ ನ್ಯಾಯಬೆಲೆ ಅಂಗಡಿಗಳಿಂದ ಆಹಾರ ಧಾನ್ಯ ವಿತರಿಸುವಾಗ ತೂಕದಲ್ಲಿ ವ್ಯತ್ಯಾಸವಾಗುತ್ತದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ತಹಶೀಲ್ದಾರ್‌ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಣ ವಸೂಲಿ, ತೂಕದಲ್ಲಿ ಗೋಲ್‌ಮಾಲ್‌ ನಡೆದ ಹಿನ್ನೆಲೆ ಗಾಣಧಾಳ, ಕರ್ಕಹಳ್ಳಿ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ಪಡಿತರ ಕಾರ್ಡ್‌ ಸೌಲಭ್ಯ ಇಲ್ಲದವರಿಗೂ ಉಚಿತ ಅಕ್ಕಿ, ಗೋದಿ ನೀಡಲಾಗುತ್ತಿದೆ ಎಂದು ಆದೇಶಿಸಿದ ಹಿನ್ನೆಲೆಯಲ್ಲಿ ಬಹುತೇಕರು ನ್ಯಾಯಬೆಲೆ ಅಂಗಡಿಗಳಿಗೆ ಅಲೆದು ಪಡಿತರ ಸಿಗದೇ ವಾಪಸ್‌ ಆಗುತ್ತಿದ್ದಾರೆ. ಹಂಚಿಕೆ ಮಾಡಲು ಸರ್ಕಾರದಿಂದ ಇನ್ನೂ ಆಹಾರ ಪೂರೈಕೆಯಾಗಿಲ್ಲ ಎನ್ನುವ ಉತ್ತರ ಅಂಗಡಿ ಮಾಲೀಕರಿಂದ ಕೇಳಿಬರುತ್ತಿದ್ದು, ನೂರಾರು ಬಡವರು ನ್ಯಾಯಬೆಲೆ ಅಂಗಡಿಗಳಿಗೆ ಅಲೆಯುವಂತಾಗಿದೆ.

ದಾನಿಗಳಿಂದ ಆಹಾರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡವರು-ನಿರ್ಗತಿಕರಿಗೆ ಆಹಾರ ವಿತರಣೆಗಾಗಿ ದಾನಿಗಳ ಮೂಲಕ ಅಕ್ಕಿ, ಬೇಳೆ, ಖಾರ, ಉಪ್ಪು, ಎಣ್ಣೆ, ಅರಿಶಿಣ, ಮಸಾಲೆ ಪ್ಯಾಕೇಟ್‌ ಸೇರಿ ಇತರೆ ಆಹಾರ ಪದಾರ್ಥಗಳನ್ನು ದಾನಿಗಳು ತಾಲೂಕಾಡಳಿತಕ್ಕೆ ನೀಡುತ್ತಿದ್ದಾರೆ.

ತೂಕದಲ್ಲಿ ವ್ಯತ್ಯಾಸ, ಹಣ ವಸೂಲಿ ದೂರು ಬಂದ ಹಿನ್ನೆಲೆ ಎರಡು ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮಕ್ಕೆ ಸಿದ್ಧತೆ ನಡೆದಿದೆ. ದಾನಿಗಳ ಮೂಲಕ ಆಹಾರ ಪದಾರ್ಥಗಳು ಬರುತ್ತಿದ್ದು, ಬಡವರು- ನಿರ್ಗತಿಕರನ್ನು ಗುರುತಿಸಿ ಹಂಚಿಕೆ ಮಾಡಲಾಗುತ್ತಿದೆ.
ಮಧುರಾಜ್‌ ಯಾಳಗಿ,
ತಹಶೀಲ್ದಾರ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.