ದೇವಲಗಾಣಗಾಪುರ; ಅದ್ಧೂರಿ ಮಾಘ ಉತ್ಸವ
ಹೊರ ರಾಜ್ಯದವರು ಪಾಲ್ಗೊಳ್ಳದಿರಲು ಡಿಸಿ ಆದೇಶಿಸಿದ್ದರು.
Team Udayavani, Mar 5, 2021, 5:36 PM IST
ಅಫಜಲಪುರ: ತಾಲೂಕಿನ ಸುಕ್ಷೇತ್ರ ದೇವಲಗಾಣಗಾಪುರದಲ್ಲಿ ಮಾಘ ಉತ್ಸವ ನಿಮಿತ್ತ ಸಾವಿರಾರು ಭಕ್ತರ ಮಧ್ಯೆ ಮೊಸರು ಗಡಿಗೆ (ಗೋಪಾಳ ಕಾವಲಿ) ಒಡೆಯಲಾಯಿತು. ನಂತರ ರಾಜ್ಯ ಹಾಗೂ ಹೊರ ರಾಜ್ಯಗಳ ಭಕ್ತರು ದತ್ತ ಮಹಾರಾಜರ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡು ಭಕ್ತಿ ಮೆರೆದರು. ತದನಂತರ ದತ್ತ ಮಹಾರಾಜರು ನಿರ್ಗುಣ ಪಾದುಕೆ ಇಟ್ಟು ಶ್ರೀಶೈಲಕ್ಕೆ ಹೋದ ದಿನದ ಸವಿ ನೆನಪಿಗಾಗಿ ಸನ್ಯಾಸಿಗಳ ಪಾದ ಪೂಜೆ ಮಾಡಲಾಯಿತು.
ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು ಸೂಚಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ, ಮಾಸ್ಕ್ ಧರಿಸುವಂತೆ, ಸ್ಯಾನಿಟೈಸರ್ ಬಳಸುವಂತೆ ಮುನ್ನೆಚ್ಚರಿಕೆ ಸೂಚನಾ ಫಲಕ ಹಾಕಿಸಿದ್ದೇವು. ಅಲ್ಲದೇ ಎಲ್ಲೆಡೆ ಸ್ಯಾನಿಟೈಸರ್ ವ್ಯವಸ್ಥೆ ಕೂಡಾ ಮಾಡಲಾಗಿತ್ತು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಾಮದೇವ ರಾಠೊಡ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ:
ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದ ಸುಕ್ಷೇತ್ರದಲ್ಲಿ ದೇವರ ಉತ್ಸವಗಳನ್ನು ಸರಳವಾಗಿ
ಆಚರಿಸಲು ಹಾಗೂ ಹೊರ ರಾಜ್ಯದವರು ಪಾಲ್ಗೊಳ್ಳದಿರಲು ಡಿಸಿ ಆದೇಶಿಸಿದ್ದರು. ಆದರೆ ದೇವಲ ಗಾಣಗಾಪುರದಲ್ಲಿ ನಡೆದ ಮಾಘ ಉತ್ಸವದಲ್ಲಿ ಮಹಾರಾಷ್ಟ್ರದ ಅಪಾರ ಭಕ್ತರು ಆಗಮಿಸಿದ್ದರು. ಅಲ್ಲದೇ ಅಂತರ ಕೂಡ ಕಾಪಾಡಿಕೊಂಡಿದ್ದು ಕಂಡುಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ