ನಿರ್ಗತಿಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ
Team Udayavani, Jan 29, 2022, 12:48 PM IST
ಜೇವರ್ಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ್ಮದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹು ಗೋಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಬಡ, ನಿರ್ಗತಿಕ ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಶುಕ್ರವಾರ ಚಾಲನೆ ನೀಡಿದರು.
ತಾಲೂಕಿನ ಹರವಾಳ ಕ್ರಾಸ್ ಹತ್ತಿರದ ಶ್ರೀ ಮೂಕಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಿಟ್ ವಿತರಿಸುವ ಸಮಾರಂಭದಲ್ಲಿ ಬಡವರಿಗೆ, ನಿರ್ಗತಿಕ ಕುಟುಂಬಗಳಿಗೆ ಜೋಳ, ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ವಿವಿಧ ಪದಾರ್ಥಗಳ ಆಹಾರ ಧಾನ್ಯದ ಕಿಟ್ಗಳನ್ನು ಮಾಲೀಕಯ್ಯ ಗುತ್ತೇದಾರ ವಿತರಿಸಿ, ಅಶೋಕ ಗೋಗಿ ಕಾರ್ಯವನ್ನು ಶ್ಲಾಘಿಸಿದರು.
ನಂತರ ತಾಲೂಕಿನ ರದ್ದೇವಾಡಗಿ, ಕೋಳಕೂರ, ಕೂಡಿ, ರಾಸಣಗಿ, ಬಣಮಿ, ಕೋಬಾಳ, ಹಂದನೂರ ಸೇರಿದಂತೆ 20 ಹಳ್ಳಿಗಳಿಗೆ ತೆರಳಿ ನೂರಾರು ಬಡವರಿಗೆ ಕಿಟ್ ವಿತರಿಸಲಾಯಿತು.
ಸಮಾಜ ಸೇವಕ ಅಶೋಕ ಸಾಹು ಗೋಗಿ, ಶಿವಾನಂದ ಸಾಹು ಮಾಕಾ, ರೇವಣಸಿದ್ಧ ಅಕ್ಕಿ, ಶರಣು ಮುತ್ತಕೋಡ ಕಲ್ಲಹಂಗರಗಾ, ದೇವಿಂದ್ರ ಜನಿವಾರ, ಶಂಕರಲಿಂಗ ಕರಕಿಹಳ್ಳಿ, ಹಣಮಂತ್ರಾವ ಹೂಗಾರ, ಅಶೋಕ ಸಾಹು ಗಣಜಲಖೇಡ, ಪ್ರಭಾಕರ ರಬಶೆಟ್ಟಿ, ವಿಶ್ವನಾಥ ಪಾಟೀಲ ಗವನಳ್ಳಿ, ಬಸವರಾಜ ಮಾಲಿಪಾಟೀಲ ಗವನಳ್ಳಿ, ನಾಗರಾಜ ಕಲ್ಲಹಂಗರಗಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ