28 ಜನರಿಗೆ ಪರಿಹಾರ ಧನ ಚೆಕ್ ವಿತರಣೆ
Team Udayavani, Dec 20, 2021, 11:52 AM IST
ಜೇವರ್ಗಿ: ಕೋವಿಡ್-19ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಡಾ| ಅಜಯಸಿಂಗ್ ಚಾಲನೆ ನೀಡಿದರು.
ತಾಲೂಕಿನಲ್ಲಿ ಒಟ್ಟು 28 ಜನ ಕೋವಿಡ್ನಿಂದ ಮೃತಪಟ್ಟ ಅರ್ಹ ಫಲಾನುಭವಿಗಳ ಕುಟುಂಬಕ್ಕೆ ಪರಿಹಾರ ಧನದ ಚೆಕ್ ವಿತರಿಸಲಾಯಿತು. ಶನಿವಾರ ಏಳು ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದ ಶಾಸಕ ಡಾ| ಅಜಯಸಿಂಗ್, ಕೊರೊನಾ ಮಹಾಮಾರಿಯಿಂದ ಜಗತ್ತು ತಲ್ಲಣಗೊಂಡು ಲಕ್ಷಾಂತರ ಜನ ಮೃತಪಟ್ಟಿದ್ದಾರೆ.
ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ಈಗ ಓಮಿಕ್ರಾನ್ ಭೀತಿಯಿಂದ ಜನ ಹೆದರುವಂತಾಗಿದೆ. ಆದ್ದರಿಂದ ಜನತೆ ನಿರ್ಲಕ್ಷ್ಯ ವಹಿಸದೇ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದರು.
ತಾಲೂಕಿನಲ್ಲಿ ಒಟ್ಟು 28 ಅರ್ಹ ಫಲಾನುಭವಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಪರಿಹಾರ ಮಂಜೂರಾಗಿದೆ. 13 ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ, 15 ಎಪಿಎಲ್ ಕುಟುಂಬಗಳಿಗೆ 50 ಸಾವಿರ ರೂ. ಪರಿಹಾರ ಧನದ ಚೆಕ್ ವಿತರಿಸಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ವಿನಯಕುಮಾರ ಪಾಟೀಲ, ಮುಖಂಡರಾದ ಬೈಲಪ್ಪ ನೆಲೋಗಿ, ಚಂದ್ರಶೇಖರ ಹರನಾಳ, ತಿಪ್ಪಣ್ಣ ಬಳಬಟ್ಟಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ