ಪಹಣಿ-ಪಿಂಚಣಿ ಪತ್ರಕ್ಕಾಗಿ ಪರದಾಟ ಬೇಡ: ಹಳ್ಳೆ
Team Udayavani, Mar 13, 2022, 11:54 AM IST
ವಾಡಿ: ತಿಂಗಳುಗಟ್ಟಲೆ ಅಲೆದರೂ ಮುಖಾಮುಖೀ ಭೇಟಿಗೆ ಸಿಗಲಾರದ ತಹಶೀಲ್ದಾರ್ ಕಚೇರಿ ಅಧಿಕಾರಿಗಳು, ಶನಿವಾರ ಮನೆ ಬಾಗಿಲಲ್ಲೇ ಪ್ರತ್ಯಕ್ಷವಾಗಿದ್ದನ್ನು ಕಂಡು ರೈತರು ಆಶ್ಚರ್ಯ ಚಕಿತರಾದರು.
ಪಹಣಿ, ಪಿಂಚಣಿ, ಜಾತಿ ಪತ್ರಗಳಿಗಾಗಿ ಅರ್ಜಿ ಸಲ್ಲಿಸಿ ಕೇಳಿದಷ್ಟು ಹಣ ಕೊಟ್ಟು ಅಂಗಲಾಚಿದರೂ ಕೈಸೇರದಂತಹ ದಾಖಲೆಗಳು, ಉಚಿತವಾಗಿ ಮನೆಯಂಗಳಕ್ಕೆ ತಲುಪಿದ್ದ ಪ್ರಸಂಗ ಕಂಡು ಫಲಾನುಭವಿಗಳು ಮನದಲ್ಲೇ ಹರ್ಷ ವ್ಯಕ್ತಪಡಿಸಿದರು.
ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ಓಣಿಗಳಲ್ಲಿ ಶನಿವಾರ ತಲಾಟಿ ಹಾಗೂ ಗ್ರಾಪಂ ಅಧಿ ಕಾರಿಗಳೊಂದಿಗೆ ಪಾದಯಾತ್ರೆ ನಡೆಸಿದ ತಹಶೀಲ್ದಾರ್ ಉಮಾಕಾಂತ ಹಳ್ಳೆ, ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ರೈತರ ಮನೆಗಳಿಗೆ ತೆರಳಿ ಪಹಣಿ, ಅಟ್ಲಾಸ್, ಪಿಂಚಣಿ, ಜಾತಿ ಪ್ರಮಾಣಪತ್ರ, ಆದಾಯ ಪತ್ರಗಳನ್ನು ಉಚಿತವಾಗಿ ವಿತರಿಸಿ ಗಮನ ಸೆಳೆದರು.
ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ “ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್ ಉಮಾಕಾಂತ ಹಳ್ಳೆ, ತಹಶೀಲ್ದಾರ್ ಕಚೇರಿಗೆ ಮತ್ತು ಹೋಬಳಿ ನಾಡಕಚೇರಿಗಳಿಗೆ ಅಲೆಯುವ ಮೂಲಕ ಕಂದಾಯ ದಾಖಲೆಗಳನ್ನು ಪಡೆಯಲು ಗ್ರಾಮೀಣ ಜನರು ಪರದಾಡುತ್ತಿದ್ದರು. 60 ವರ್ಷ ಮೇಲ್ಪಟ್ಟವರು ಪಿಂಚಣಿಗಾಗಿ, ರೈತರು ಪಹಣಿಗಾಗಿ, ಸಾರ್ವಜನಿಕರು ಜಾತಿ ಮತ್ತು ಆದಾಯ ಪತ್ರ ಸೇರಿದಂತೆ ಇನ್ನಿತರ ಭೂ ದಾಖಲೆ ಪಡೆಯಲು ಪೀಕಲಾಟ ನಡೆಸಬೇಕಿತ್ತು. ಪರಿಣಾಮ ಫಲಾನುಭವಿಗಳ ಈ ಸಂಕಷ್ಟ ತಪ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ರೂಪಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಗತ್ಯ ದಾಖಲೆಗಳ ವಿತರಣೆಗೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಇಂಗಳಗಿ ಗ್ರಾಪಂ ಅಧ್ಯಕ್ಷ ಸುಭಾಷಚಂದ್ರ ಯಾಮೇರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇಷ್ಮಾ ಕೋತ್ವಾಲ್, ಕಾರ್ಯದರ್ಶಿ ರುದ್ರಪ್ಪ ಅಳ್ಳೊಳ್ಳಿ, ಗ್ರಾಮ ಲೇಖಾಧಿಕಾರಿ ಶಶಿಕಲಾ ಹಿರಾಪುರ, ಗ್ರಾಪಂ ಸದಸ್ಯ ಶರಣು ರಾವೂರ, ಅಂಗನವಾಡಿ ಕಾರ್ಯಕರ್ತೆ ಶೇಕಮ್ಮಾ ಕುರಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ