ಬದುಕಿನಾಸರೆ ನರೇಗಾ ನಿಲ್ಲದಿರಲಿ


Team Udayavani, May 27, 2021, 7:48 PM IST

dfgbnbvfdsq

ವಾಡಿ: ಗ್ರಾಮೀಣ ಭಾಗದ ಬಡ ಕುಟುಂಬಗಳ ಬದುಕಿನ ಆಸರೆಯಾಗಿರುವ ನರೇಗಾ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್‌. ಈಶ್ವರಪ್ಪ ರಾಜ್ಯದ ಪಿಡಿಒಗಳಿಗೆ ಆದೇಶ ನೀಡಿದರು.

ಬುಧವಾರ ಕಮರವಾಡಿ ಗ್ರಾಪಂ ಕಚೇರಿ ಸಭಾಂಗಣದಲ್ಲಿ ಮೂಡಿಬಂದ ರಾಜ್ಯದ ಪಿಡಿಒಗಳ ಏಕಕಾಲದ ಆನ್‌ ಲೈನ್‌ ವಿಡಿಯೋ ಸಂವಾದ ಉದ್ದೇಶಿಸಿ ಅವರು ಮಾತನಾಡಿದರು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜತೆಗೆ ಮಾಸ್ಕ್ ಧರಿಸಿಕೊಂಡು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ನಮ್ಮ ಹೋರಾಟ ಮುಂದುವರಿಸಬೇಕಿದೆ. ಅಲ್ಲದೇ ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸ ಹಳ್ಳಿ ಜನರ ಬದುಕಿಗೆ ಆಶ್ರಯವಾಗಿದೆ.

ಕೊರೊನಾ ನೆಪದಲ್ಲಿ ಇದು ಸ್ಥಗಿತಗೊಂಡರೆ ಬಡ ಜನರ ಬದುಕು ದುಸ್ತರಗೊಳ್ಳುತ್ತದೆ. ಪರಿಣಾಮ ಗ್ರಾಪಂ ವ್ಯಾಪ್ತಿಯಲ್ಲಿ 40 ಜನರ ಎರಡು ತಂಡ ರಚಿಸಿ, ಬೆಳಗ್ಗೆ ಹಾಗೂ ಮಧ್ಯಾಹ್ನ ಅವಧಿಯಲ್ಲಿ ಕಾರ್ಮಿಕರಿಗೆ ಕೆಲಸ ನೀಡಿ ಎಂದು ಸೂಚಿಸಿದರು. 15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿಗೆ ಮತ್ತು ನೈರ್ಮಲ್ಯ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡಬೇಕು.

ಗ್ರಾಪಂ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿ ಕಾರಿಗಳು ಹಣವನ್ನು ಸಮರ್ಥವಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಗ್ರಾಪಂ ಆಡಳಿತಕ್ಕೆ ಹಣಕಾಸಿನ ತೊಂದರೆ ಇದ್ದರೆ ಕ್ರಿಯಾ ಯೋಜನೆ ರೂಪಿಸಿ ಜಿಪಂ ಕಾರ್ಯನಿರ್ವಾಹಕ ಅಧಿ ಕಾರಿಗಳಿಗೆ ಸಲ್ಲಿಸಿ ಅನುಮೋದನೆ ಪಡೆದರೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗುವುದು. ಶೇ. 50 ಹಣವನ್ನು ಕುಡಿಯುವ ನೀರಿಗಾಗಿ ಮತ್ತು ಸ್ವತ್ಛತೆಗಾಗಿ ಖರ್ಚು ಮಾಡಬೇಕು. ಅನಗತ್ಯವಾಗಿ ಅನುದಾನ ದುರ್ಬಳಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು. ಸಚಿವರೊಂದಿಗೆ ಸಂವಾದ ನಡೆಸಿದ ಕಮರವಾಡಿ ಪಿಡಿಒ ಶೇಖಪ್ಪ ಶಂಕು, ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿ ದ್ದೇವೆ.

ಸೋಂಕಿತರ ಸುರಕ್ಷತೆ ಜತೆಗೆ ಗ್ರಾಮೀಣ ಜನರ ಕೂಲಿಗಾಗಿ ಉದ್ಯೋಗ ಖಾತ್ರಿಯಡಿ ಕೆಲಸ ಆರಂಭಿಸಿದ್ದೇವೆ ಎಂದರು. ಗ್ರಾಪಂ ಅಭಿವೃದ್ಧಿ ಅ ಧಿಕಾರಿಗಳಾದ ಭಾರತಿ ಮಣ್ಣೂರೆ, ರಮೇಶ ಬೆಳ್ಳಿಹಾಳ, ಕಮರವಾಡಿ ಗ್ರಾಪಂ ಅಧ್ಯಕ್ಷೆ ಸರೋಜಿನಿ ದೇಶಮುಖ, ಉಪಾಧ್ಯಕ್ಷ ಢಾಕೂ ರಾಠೊಡ, ಕಾರ್ಯದರ್ಶಿ ಬಸವರಾಜ ಗಂಜಿ, ಹಳಕರ್ಟಿ ಗ್ರಾಪಂ ಅಧ್ಯಕ್ಷ ಸೋಮು ಚವ್ಹಾಣ ಹಾಗೂ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.