ರಾಷ್ಟ್ರೀಯ ಹೆದ್ದಾರಿಗೆ ಚರಂಡಿ ಸಮಸ್ಯೆ

ಶೀಘ್ರವೇ ಕಾಮಗಾರಿ ಮುಗಿಯಲಿ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

Team Udayavani, Aug 2, 2021, 6:13 PM IST

Nationa;

ಅಫಜಲಪುರ: ಯಾವುದೇ ರಸ್ತೆ, ಹೆದ್ದಾರಿಗಳನ್ನು ನಿರ್ಮಿಸುವಾಗ ಅವುಗಳ ಪಕ್ಕ ಚರಂಡಿಗಳನ್ನು ನಿರ್ಮಿಸಲಾಗುತ್ತದೆ. ಆದರೆ ಇಲ್ಲೊಂದು ಹೆದ್ದಾರಿಗೆ ಚರಂಡಿ ಸಮಸ್ಯೆ  ಕಾಡುತ್ತಿದೆ. ಹೀಗಾಗಿ ಪ್ರಯಾಣಿಕರು ಮತ್ತು ವಾಹನ ಸವಾರರು, ಸಾರ್ವಜನಿಕರು ಪರದಾಡುವಂತಾಗಿದೆ.

ತಾಲೂಕಿನ ಚವಡಾಪುರ ಗ್ರಾಮದಲ್ಲಿನ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಸೇರಿಕೊಳ್ಳುತ್ತವೆ. ಈ ಹೆದ್ದಾರಿಗೆ ಚರಂಡಿಗಳೇ ಇಲ್ಲ. ಹೀಗಾಗಿ ಮಳೆ ನೀರು ಮತ್ತು ಚವಡಾಪುರ ಗ್ರಾಮದ ನೀರು ಹೆದ್ದಾರಿ ಮೇಲೆ ನಿಲ್ಲುತ್ತಿದೆ. ಹೀಗೆ ನಿಲ್ಲುವ ನೀರು ಹರಿದು ಹೋಗಲು ದಾರಿ ಇಲ್ಲದೇ, ಅದರಲ್ಲಿ ವಾಹನಗಳು ಓಡಾಡಿ, ಹಂದಿಗಳು ಒದ್ದಾಡಿ ಸಾಂಕ್ರಾಮಿಕ ರೋಗದ ತಾಣವಾಗುತ್ತಿದೆ. ಅಲ್ಲದೇ ಸುತ್ತಲೂ ದುರ್ನಾತ ಬೀರುತ್ತಿದೆ.

ಹೆದ್ದಾರಿ ಮೇಲೆ ಚರಂಡಿ ನೀರು:
ಚವಡಾಪುರ ಗ್ರಾಮದಿಂದ ಸುಕ್ಷೇತ್ರ ದೇವಲ ಗಾಣಗಾಪುರಕ್ಕೆ ಹೋಗುವ ಮಾರ್ಗದಲ್ಲಿ ದತ್ತಾತ್ರೇಯ ಮಹಾರಾಜರ ಕಮಾನ್‌ ಕಟ್ಟಲಾಗಿದೆ. ಈ ಸ್ಥಳದಲ್ಲೇ ಚರಂಡಿ ನೀರು ಮತ್ತು ಮಳೆ ನೀರು ನಿಲ್ಲುತ್ತಿದೆ. ಈ ಜಾಗದಲ್ಲಿ ಹೆದ್ದಾರಿಗಿಂತ ಎತ್ತರದಲ್ಲಿ ಚರಂಡಿ ಕಟ್ಟಲಾಗಿದೆ. ಇದರಿಂದ ನೀರು ಹರಿದು ಹೋಗಲು ಸಾದ್ಯವಾಗುತ್ತಿಲ್ಲ. ಹೀಗಾಗಿ ಮಳೆ, ಚರಂಡಿ ನೀರು ಹೆದ್ದಾರಿ ಮೇಲೆ ಸಂಗ್ರಹವಾಗಿ ಸಮಸ್ಯೆಯಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು, ಪ್ರಯಾಣಿಕರು, ವಾಹನ
ಸವಾರರು ಸಂಕಷ್ಟ ಎದುರಿಸುವಂತೆ ಆಗಿದೆ.

ಮಳೆ ನೀರು ಹರಿದು ಹೋಗುವ
ವ್ಯವಸ್ಥೆ ಮಾಡಬೇಕಾದವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ಥಳೀಯ ಚವಡಾಪುರ ಗ್ರಾ.ಪಂನವರು ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡುತ್ತಿಲ್ಲ. ಬದಲಾಗಿ ಹೆದ್ದಾರಿ ಅಕ್ಕಪಕ್ಕದಲ್ಲೇ ಕಸ ಚೆಲ್ಲಲಾಗುತ್ತಿದೆ. ಇದರಿಂದ ಇನ್ನಷ್ಟು ದುರ್ನಾತ ಬೀರಿ ಸಾಂಕ್ರಾಮಿಕ ರೋಗದ ತಾಣವಾಗಿ ಮಾರ್ಪಟ್ಟಿದೆ.

ಮುಗಿಯದ ಕಾಮಗಾರಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಳೆ ಮತ್ತು ಚರಂಡಿ ನೀರು ಹೋಗಲು ಕಳೆದ ಮೂರು ತಿಂಗಳಿಂದ ದೊಡ್ಡದಾದ ಚರಂಡಿ ನಿರ್ಮಿಸಲಾಗುತ್ತಿದೆ. ಆಮೆಗತಿಯಲ್ಲಿ ಕಾಮಗಾರಿ ಸಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೇ ಬಸವೇಶ್ವರ ವೃತ್ತ ಮತ್ತು ಸುತ್ತಮುತ್ತಲಿನ ಬಡಾವಣೆ ಜನರಿಗೆ ಧೂಳು, ವಾಹನ ದಟ್ಟಣೆ ಸದ್ದು ಕೇಳಿ ಸಾಕಾಗಿದೆ. ಹೀಗಾಗಿ ಶೀಘ್ರವೇ ಕಾಮಗಾರಿ ಮುಗಿಯಲಿ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಹೆದ್ದಾರಿಗೂ ಬೇಕಿದೆ ಕಾಯಕಲ್ಪ: ಇನ್ನೂ ರಾಷ್ಟ್ರೀಯ ಹೆದ್ದಾರಿ ಅನೇಕ ಕಡೆ ಕಿತ್ತುಕೊಂಡು ಹೋಗಿದೆ. ಹೀಗಾಗಿ ಹೆದ್ದಾರಿಗೆ ಮತ್ತೆ ಡಾಂಬರ್‌ ಹಾಕಿಸಬೇಕಾದ ಅನಿವಾರ್ಯತೆ ಇದೆ. ಇಲ್ಲದಿದ್ದರೆ ನಿತ್ಯ ಒಂದೊಂದು ಅಪಘಾತಗಳಾಗುತ್ತಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಳವಾಗಿ ಸಾವು-ನೋವುಗಳಿಗೆ ಕಾರಣವಾಗಲಿದೆ. ಒಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳು ಸರಮಾಲೆಯಂತೆ ಬೆಳೆ ಯುತ್ತಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸ ಮಾಡಲಿ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸಮಸ್ಯೆಗಳಿಗೆ ಸ್ಪಂದಿಸಿ ಕೂಡಲೇ ಸರಿಪಡಿಸುವ ಕೆಲಸ ಮಾಡಬೇಕು. ಸ್ಥಳೀಯ ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯ ಕೆಲಸಗಳನ್ನು ತಡ ಮಾಡದೇ ಮಾಡಿಸಬೇಕು. ಇವರೆಲ್ಲರ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ.
ರಾಜೆಂದ್ರ ಪಾಟೀಲ ರೇವೂರ
(ಬಿ), ಕಾಂಗ್ರೆಸ್‌ ಮುಖಂಡ

*ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.