ಕೃಷಿ ಸಮಗ್ರ ಮಾಹಿತಿ ಒದಗಿಸುವ ವಾಹನಕ್ಕೆ ಚಾಲನೆ


Team Udayavani, Jun 2, 2022, 2:57 PM IST

12information

ಸೇಡಂ: ಮುಂಗಾರು ಆರಂಭವಾಗುತ್ತಿದ್ದು, ಕೃಷಿಕರಿಗೆ ಸಹಾಯವಾಗಲು ಮತ್ತು ರೈತರಿಗೆ ಬೇಕಾಗುವ ಸಮಗ್ರ ಮಾಹಿತಿ ಒದಗಿಸಲು ಕೃಷಿ ಸಂಜೀವಿನಿ ವಾಹನದ ಮೂಲಕ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ವೈ.ಎಲ್‌. ಹಂಪಣ್ಣ ಹೇಳಿದರು.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ ಕೃಷಿ ಸಂಜೀವಿನಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದಿಂದ ರೈತರಿಗೆ ಸಿಗುವ ಯೋಜನೆಗಳು, ಮಣ್ಣಿನ ಪರೀಕ್ಷೆ, ಕೀಟ ನಾಶಕ ಬಳಕೆ, ಬೆಳೆ ನೆಟೆ ಹೋಗುವುದು ಸೇರಿದಂತೆ ಎಲ್ಲದರ ಬಗ್ಗೆ ವಾಹನ ಮೂಲಕ ಅರಿವು ಮೂಡಿಸಲಾಗುತ್ತಿದೆ. ವಾಹನದಲ್ಲಿ ಒಬ್ಬ ಕೃಷಿ ತಂತ್ರಜ್ಞ ಇರಲಿದ್ದು, ವಾಹನ ತಮ್ಮ ಗ್ರಾಮಕ್ಕೆ ಬಂದಾಗ ಗ್ರಾಮದ ರೈತರು ಅವರ ಬಳಿ ಮಾಹಿತಿ ಪಡೆದುಕೊಳ್ಳಬಹುದು. ಭಿತ್ತಿ ಪತ್ರವನ್ನು ರೈತರಿಗೆ ನೀಡಲಾಗುವುದು ಎಂದು ತಿಳಿಸಿದರು.

ವಾಹನವು ಜೂನ್‌ 1 ಮತ್ತು 2ರಂದು ಆಡಕಿ ಭಾಗದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ 3ರಂದು ಸೇಡಂನಲ್ಲಿ ಈ ಕುರಿತು ಕಾರ್ಯಕ್ರಮ ನಡೆಸಲಾಗುತ್ತದೆ. ಜೂ. 4 ಮತ್ತು 5ರಂದು ಕೋಡ್ಲಾ ಭಾಗದ ಗ್ರಾಮಗಳಲ್ಲಿ ಕೃಷಿ ಸಂಜೀವಿನಿ ವಾಹನ ಸಂಚರಿಸಿ 6ರಂದು ಕೋಡ್ಲಾ ಗ್ರಾಮದಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಯೋಜನೆಯ ಲಾಭವನ್ನು ತಾಲೂಕಿನ ರೈತರು ಪಡೆದುಕೊಳ್ಳಬೇಕು ಎಂದು ಹೇಳಿದರು.

ತಾಲೂಕು ರೈತ ಸಮಾಜದ ಕಾರ್ಯದರ್ಶಿ ಗಣಪತರಾವ್‌ ಚಿಮ್ಮನಚೋಡಕರ್‌ ಮಾತನಾಡಿ, ಒಂದು ಇಲಾಖೆ ಸುಸೂತ್ರವಾಗಿ ಮುನ್ನಡೆಯಬೇಕಾದರೆ ಒಬ್ಬ ಉತ್ತಮ ಅಧಿ ಕಾರಿ ಬೇಕು. ಅದರಂತೆ ಕೃಷಿ ಅಧಿಕಾರಿ ಹಂಪಣ್ಣ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಮೊದಲೆಲ್ಲ ಬಹಳಷ್ಟು ಹೋರಾಟಗಳು ನಡೆಯುತ್ತಿದ್ದವು ಆದರೆ ಇದೀಗ ಬಿತ್ತನೆ ಬೀಜ, ಗೊಬ್ಬರ ಯಾವ ಕೊರತೆ ಇಲ್ಲದಂತೆ ಅವರು ನೋಡಿಕೊಳ್ಳುತ್ತಿದ್ದಾರೆ ಎಂದರು.

ಈ ವೇಳೆ ರೈತ ಸಮಾಜದ ಸದಸ್ಯ ರಾಮಯ್ಯ ಪೂಜಾರಿ, ಕೃಷಿ ಅಧಿಕಾರಿಗಳಾದ ಪ್ರಕಾಶ ರಾಠೊಡ, ಬಸವರಾಜ, ಅನಂತರೆಡ್ಡಿ, ಪ್ರಮುಖರಾದ ಪಂಚಾಕ್ಷರಿ ಸ್ವಾಮಿ, ಜಗನ್ನಾಥ ಪಾಟೀಲ ಹಾಗೂ ಇನ್ನಿತರರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.