ವಾಡಿ-ಇಂಗಳಗಿ ರಸ್ತೆ ಅಭಿವೃದ್ಧಿಗೆ ಗ್ರಹಣ
Team Udayavani, Feb 10, 2022, 11:37 AM IST
ವಾಡಿ: ವಾಡಿ-ಇಂಗಳಗಿ ರಸ್ತೆ ಸಂಪೂರ್ಣ ಹದಗೆಟ್ಟು ದಶಕಗಳೇ ಉರುಳಿದರೂ ಕಾಯ ಕಲ್ಪದ ಭಾಗ್ಯ ಕೂಡಿಬಂದಿಲ್ಲ. ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮವು ವಾಡಿ ನಗರ ಕೇಂದ್ರದಿಂದ ಕೇವಲ ಆರು ಕಿ.ಮೀ ಅಂತರದಲ್ಲಿದೆ.
80ರ ದಶಕದಲ್ಲಿ ಗ್ರಾಮಕ್ಕೆ ಸಿಮೆಂಟ್ ರಸ್ತೆ ನಿರ್ಮಿಸಿಕೊಡಲಾಗಿತ್ತು. ಅದೀಗ ಬಿರುಕುಬಿಟ್ಟು ಅಪಘಾತಕ್ಕೆ ಆಹ್ವಾನ ನೀಡುತ್ತಿದೆ. ಪ್ರತಿವರ್ಷ ರಸ್ತೆ ಬಿರುಕಿಗೆ ಡಾಂಬರ್ ತೇಪೆ ಹಚ್ಚಲಾಗುತ್ತಿದೆ.
ಇಂಗಳಗಿ ಗ್ರಾಮಸ್ಥರು ವಾಡಿ ಮಾರುಕಟ್ಟೆಯನ್ನೇ ಅವಲಂಬಿಸಿದ್ದು, ಪ್ರತಿನಿತ್ಯ ನೂರಾರು ಮಂದಿ ಖಾಸಗಿ ವಾಹನಗಳಲ್ಲಿ ಬಂದು ಹೋಗುತ್ತಾರೆ. ರಸ್ತೆ ದುಸ್ಥಿತಿ ಕಾರಣ ಬೈಕ್, ಆಟೋ, ಕಾರು, ಜೀಪುಗಳ ಚಾಲಕರು ತತ್ತರಿಸಿದ್ದಾರೆ.
ಇನ್ನು ಕಲ್ಲು ಪಾಲಿಶ್ ಘಟಕಗಳೂ ರಸ್ತೆ ಬದಿಯಲ್ಲೇ ಇರುವುದರಿಂದ ಕೊಳೆ ನೀರು ರಸ್ತೆಗೆ ಬಿಡಲಾಗುತ್ತಿದೆ. ಜತೆಗೆ ಭಾರವಾದ ವಾಹನಗಳ ಸಂಚಾರವೂ ರಸ್ತೆ ಮತ್ತಷ್ಟು ಹದಗೆಡಲು ಕಾರಣವಾಗಿದೆ. ಸಂಬಂಧಪಟ್ಟವರು ರಸ್ತೆ ಮರುನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಇಂಗಳಗಿ ಗ್ರಾ.ಪಂ. ಸದಸ್ಯ ಗೌಸ್ ದುದ್ದನಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ