ಮಾನವ ಸಂಪನ್ಮೂಲದ ಸಮರ್ಥ ಬಳಕೆ
ಪ್ರತಿಯೊಬ್ಬರು ನಿಮ್ಮಲ್ಲಿರುವ ಕೌಶಲವನ್ನು ಬೆಳಕಿಗೆ ತರಬೇಕು.
Team Udayavani, Apr 6, 2021, 6:39 PM IST
ಕಲಬುರಗಿ: ಪೊಲೀಸ್ ಇಲಾಖೆಗೆ ಉನ್ನತ ಮತ್ತು ಅರ್ಹತೆಗಿಂತ ಹೆಚ್ಚು ಶಿಕ್ಷಣ ಪಡೆದ ಯುವಕ-ಯುವತಿಯರು ಬರುತ್ತಿದ್ದಾರೆ. ಇದರಿಂದ ಇಲಾಖೆಗೆ ಹೊಸ ಮಾನವ ಸಂಪನ್ಮೂಲ ದೊರೆತಂತೆ ಆಗಿದೆ. ಇದು ಇಲಾಖೆಯ ಬೆಳವಣಿಗೆಗೆ ಸಹಕಾರದ ಜತೆಗೆ ಗೌರವ ಸಹ ಹೆಚ್ಚಿಸಿದೆ ಎಂದು ರಾಜ್ಯ ಗುಪ್ತವಾರ್ತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ದಯಾನಂದ ಬಣ್ಣಿಸಿದರು.
ನಗರದ ಹೊರವಲಯದ ನಾಗನಹಳ್ಳಿಯಲ್ಲಿರುವ ರಾಜ್ಯ ಪೊಲೀಸ್ ತರಬೇತಿ ಮಹಾವಿದ್ಯಾಲಯ (ಪಿಟಿಸಿ)ದ ಕವಾಯತು ಮೈದಾನದಲ್ಲಿ ಸೋಮವಾರ 3ನೇ ತಂಡದ ಪಿಎಸ್ಐ (ಗುಪ್ತವಾರ್ತೆ), 5ನೇ ತಂಡದ ಪಿಎಸ್ಐ (ವೈರ್ಲೆಸ್) ಮತ್ತು ವಿಶೇಷ ಆರ್ಎಸ್ಐ, ಆರ್ಎಸ್ಐನ 108 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಪರಿವೀಕ್ಷಣೆ ಮಾಡಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಗೂ ವಿಜ್ಞಾನ, ತಂತ್ರಜ್ಞಾನ, ತಂತ್ರಿಕ, ಪತ್ರಿಕೋದ್ಯಮ ಸೇರಿದಂತೆ ಮತ್ತಿತರ ಪದವೀಧರರು ಸೇರಿಕೊಳ್ಳುವುದು ಸಂತೋಷದಾಯಕ ವಿಷಯ. ಕೌಶಲ ಆಧರಿತವಾಗಿ ಅಂತವರನ್ನು ಇಲಾಖೆ ಸಮರ್ಥವಾಗಿ ಬಳಕೆ ಮಾಡಿಕೊಳ್ಳುತ್ತದೆ. ಅದೇ ರೀತಿ ಸರ್ಕಾರಿ ನೌಕರಿ ಸಿಕ್ಕಿದ್ದೇ ಸಾಕು ಎಂದು ಕುಳಿತುಕೊಳ್ಳಬಾರದು. ಪ್ರತಿಯೊಬ್ಬರು ನಿಮ್ಮಲ್ಲಿರುವ ಕೌಶಲವನ್ನು ಬೆಳಕಿಗೆ ತರಬೇಕು. ಕೌಶಲಯುಳ್ಳವರಿಗೆ ಇಲಾಖೆಯಲ್ಲಿ ಪ್ರೋತ್ಸಾಹ ಹಾಗೂ ಗೌರವವಿದೆ ಎಂದು ಹೇಳಿದರು.
ಪಿಟಿಸಿ ಪ್ರಾಂಶುಪಾಲ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಪ್ರಶಿಕ್ಷಣಾರ್ಥಿಗಳ ಪ್ರತಿಜ್ಞಾವಿಧಿ ಬೋಧಿಸಿ, ವರದಿ ವಾಚಿಸಿದರು. 108 ಪ್ರಶಿಕ್ಷಣಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿ, ರಾಷ್ಟ್ರಧ್ವಜ, ಪೊಲೀಸ್ ಧ್ವಜಗಳಿಗೆ ಗೌರವ ವಂದನೆ ಸಲ್ಲಿಸಿದರು. ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಉಪ ಪ್ರಾಂಶುಪಾಲ ಅರುಣ್ ರಂಗರಾಜನ್ ಹಾಗೂ ಪೊಲೀಸ್ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳ ಪೋಷಕರು, ಕುಟುಂಬದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ