ವಿದ್ಯುತ್ ತಂತಿ ತಗುಲಿ ರೈತ ಸಾವು
Team Udayavani, Jan 23, 2022, 11:52 AM IST
ಕಲಬುರಗಿ: ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಮುಕರಂಬಾ ಗ್ರಾಮದಲ್ಲಿ ಶನಿವಾರ ನಡೆದಿದೆ.
ಶಿವಕುಮಾರ ಬಸಣೋರ (21) ಘಟನೆಯಲ್ಲಿ ಮೃತಪಟ್ಟ ರೈತ.
ತೋಟದಲ್ಲಿ ಕೈಗೆ ತಾಗುವಷ್ಟು ಮೇಲೆ ವಿದ್ಯುತ್ ತಂತಿ ಜೋತು ಬಿದ್ದಿದೆ. ಇದರಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ವಿದ್ಯುತ್ ಸಂಪರ್ಕ ಇರಲಿಲ್ಲ. ಶನಿವಾರ ತಂತಿಯಲ್ಲಿ ವಿದ್ಯುತ್ ಪ್ರಸರಣವಾಗಿದೆ. ರೈತ ತನ್ನ ಬೆಳೆಗಳಿಗೆ ನೀರುಣಿಸುತ್ತಿರುವಾಗ ವಿದ್ಯುತ್ ತಂತಿ ಸ್ಪರ್ಷವಾಗಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬಂದರು. ಆದರೆ, ಜೆಸ್ಕಾಂ ಅಧಿಕಾರಿಗಳು ತುಂಬಾ ಹೊತ್ತಾದರೂ ಸ್ಥಳಕ್ಕೆ ಬರಲಿಲ್ಲ. ವಿದ್ಯುತ್ ತಂತಿ ತೆರವು ಮಾಡುವಂತೆ ಈ ಹಿಂದೆ ಅನೇಕ ಬಾರಿ ಮನವಿ ಮಾಡಲಾಗಿತ್ತು. ಆದರೂ, ಕ್ರಮ ಕೈಗೊಳ್ಳದೇ ಇದ್ದುದರಿಂದ ರೈತ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ