ವಿದ್ಯುತ್ ಪರಿವರ್ತಕ ನಿರ್ವಹಣೆ: ಗೋಳಾ
Team Udayavani, May 18, 2022, 2:36 PM IST
ಚಿಂಚೋಳಿ: ತಾಲೂಕಿನಲ್ಲಿ ಗುಣಮಟ್ಟದ ವಿದ್ಯುತ್ಗಾಗಿ ಮತ್ತು ವಿದ್ಯುತ್ಗೆ ಸಂಬಂ ಧಿಸಿದಂತೆ ಅವಘಡಗಳನ್ನು ಸೂಕ್ತವಾಗಿ ನಿರ್ವಹಿಸುವ ದೃಷ್ಟಿಯಿಂದ ವಿದ್ಯುತ್ ಪರಿವರ್ತಕಗಳನ್ನು ಸುರಕ್ಷಿತವಾಗಿ ಇಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಚಿಂಚೋಳಿ ಜೆಸ್ಕಾಂ ಉಪ-ವಿಭಾಗದ ಎಇಇ ಉಮೇಶ ಗೋಳಾ ತಿಳಿಸಿದ್ದಾರೆ.
ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಾರ್ಯ ಮತ್ತು ಪಾಲನಾ ಉಪ-ವಿಭಾಗದಲ್ಲಿ ಬರುವ ವಿದ್ಯುತ್ ಪರಿವರ್ತಕಗಳ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಾರ್ವಜನಿಕರು, ಪಾದಚಾರಿಗಳು ಓಡಾಡುವ ರಸ್ತೆಯಲ್ಲಿ ಇರುವ ಪರಿವರ್ತಕಗಳನ್ನು ಬದಲಾಯಿಸುವುದು, ಗಿಡಗಂಟಿಗಳನ್ನು ಕಿತ್ತು ಶುಚಿಗೊಳಿಸುವುದು. ಹಳೆಯ ಅರ್ಥಿಂಗ್ ನವೀಕರಿಸುವ ಕಾರ್ಯ ಪ್ರಾರಂಭಿಸಲಾಗಿದೆ. ಈಗಾಗಲೇ ಎಲ್ಲ ವಿದ್ಯುತ್ ಪರಿವರ್ತಕಗಳನ್ನು ನಿರ್ವಹಿಸಲಾಗಿದೆ. ವಿದ್ಯುತ್ ಪರಿವರ್ತಕಗಳ ಸುತ್ತ ಕಸ ಎಸೆಯಬಾರದು, ದನಕರು, ಮಕ್ಕಳು ಪರಿವರ್ತಕ ಬಳಿ ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಜೆಸ್ಕಾಂ ಸಿಬ್ಬಂದಿಗಳಾದ ರಾಜಕುಮಾರ ಶೇರಿಕಾರ, ಪ್ರಭಾರ ಶಾಖಾ ಧಿಕಾರಿ ಸೈಯದ್ ಸಿದ್ಧಿಕಿ, ಶರಣಪ್ಪ ಕೊಡದಾಳ, ಮಂಜುನಾಥ, ಚಂದ್ರಶೇಖರ, ಹಣಮಪ್ಪ, ನಾರಾಯಣ, ಶ್ರೀಕಾಂತ, ಸುರೇಶ, ಸೋಮಶೇಖರ, ಶ್ರೀಶೈಲ, ಅಂಕುಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ
ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ
ಕಿಡಿಗೇಡಿಗಳ ಬಂಧನಕ್ಕೆ ಯುವ ವೇದಿಕೆ ಆಗ್ರಹ
ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ