ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ: ಕುಲಕರ್ಣಿ
Team Udayavani, Jan 18, 2022, 11:53 AM IST
ಜೇವರ್ಗಿ: ದೇಶದಲ್ಲಿರುವ ಪ್ರತಿಯೊಬ್ಬ ನಾಗರಿಕನೂ ಸಂವಿಧಾನಾತ್ಮಕ ಹಕ್ಕುಗಳು, ಕರ್ತವ್ಯಗಳು, ವ್ಯಕ್ತಿಯ ದೈನಂದಿನ ಸುಗಮ ಬದುಕಿಗೆ ಬೇಕಾದ ಕನಿಷ್ಠ ಕಾನೂನಿನ ಜ್ಞಾನವನ್ನು ಹೊಂದಿರಬೇಕು. ಇದರಿಂದ ಅಪರಾಧಗಳ ಸಂಖ್ಯೆ ಕಡಿಮೆಯಾಗಿ, ಶಾಂತಿಯುತ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಹಿರಿಯ ನ್ಯಾಯವಾದಿ ಪ್ರಾಣೇಶ ಪಿ.ಕುಲಕರ್ಣಿ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ನೆಸ್ಸೆಸ್ ಘಟಕದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ “ಕಾನೂನು ಅರಿವು ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ರಚನೆಯಾಗಿರುವುದು ವ್ಯಕ್ತಿ ಹಾಗೂ ದೇಶದ ರಕ್ಷಣೆಗಾಗಿ. ಇದರ ಉಲ್ಲಂಘನೆ ಸಲ್ಲದು. ಹಕ್ಕುಗಳ ಜೊತೆಗೆ ಕರ್ತವ್ಯಗಳಿವೆ ಎಂಬುದನ್ನು ಮರೆಯಬಾರದು. ಬಾಲ್ಯವಿವಾಹ ಅಪರಾಧವಾಗಿದ್ದು, ಇದರಿಂದ ಮಗು ಶಿಕ್ಷಣ ವಂಚಿತವಾಗಿ ಜೀವನದಲ್ಲಿ ತೊಂದರೆಗೆ ಒಳಗಾಗುತ್ತದೆ ಎಂದರು.
ಹಿರಿಯರು ಮತ್ತು ಮಹಿಳೆಯರ ರಕ್ಷಣೆ ಮಾಡಬೇಕು. ಬಾಲ್ಯ ದೌರ್ಜನ್ಯ ಸಲ್ಲದು. ವರದಕ್ಷಿಣೆ ಪಡೆಯಬಾರದು. ಬಾಲ ಕಾರ್ಮಿಕ ಪದ್ಧತಿ ಆಚರಿಸಕೂಡದು. ಸಂಚಾರಿ ನಿಯಮ ಪಾಲಿಸಬೇಕು. ಕಡ್ಡಾಯವಾಗಿ ಜನನ ಮತ್ತು ಮರಣದ ನೋಂದಣಿ ಮಾಡಿಸಿ, ಪ್ರಮಾಣಪತ್ರ ಪಡೆದುಕೊಳ್ಳಬೇಕು ಎಂದು ಅನೇಕ ಕಾಯ್ದೆ-ಕಾನೂನುಗಳನ್ನು ವಿವರಿಸಿ, ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.
ನ್ಯಾಯವಾದಿ ಶಿವಾನಂದ ಬಿ.ಕುಂಟೋಜಿಮಠ ಮಾತನಾಡಿ, ಬಸವಾದಿ ಶರಣರ ವಚನಗಳು ಸಂವಿಧಾನ ಮತ್ತು ಕಾನೂನಿಗೆ ಪೂರಕವಾಗಿವೆ. ಕಾನೂನು ಬದುಕಿನ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ನಿರ್ಲಕ್ಷ ವಹಿಸಿ ಬೇಜವಬ್ದಾರಿ ತೋರಿಸಬಾರದು. ವಿದ್ಯಾರ್ಥಿ ದೆಸೆಯಿಂದಲೇ ಸಾಮಾನ್ಯ ಕಾನೂನಿನ ತಿಳಿಕೊಳ್ಳುವುದು ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಾರ್ವಜನಿಕ ಆಸ್ತಿ-ಪಾಸ್ತಿಯನ್ನು ರಕ್ಷಣೆ ಮಾಡುವ ಮೂಲಕ ಆದರ್ಶ ನಾಗರಿಕರಾಗಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಮೊಹಮ್ಮದ್ ಅಲ್ಲಾ ಉದ್ದೀನ್ ಸಾಗರ, ಎನ್ನೆಸ್ಸೆಸ್ ಅಧಿ ಕಾರಿ ಎಚ್.ಬಿ. ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್, ಶರಣಮ್ಮ ಭಾವಿಕಟ್ಟಿ, ರವೀಂದ್ರಕುಮಾರ ಬಟಗೇರಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ನೇಸರ ಬೀಳಗಿ, ರಂಜಿತಾ ಠಾಕೂರ್, ಲಾಡ್ಲೆಮಶಾಕ್, ಕರೀಮ್, ಬಸವರಾಜ, ಹುಲೆಪ್ಪ, ಐಶ್ವರ್ಯ, ಪಾರ್ವತಿ, ಶಿವಲೀಲಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ