ಎಲ್ಲರಿಗೂ ಕಾನೂನು ಮಾಹಿತಿ ಇರಬೇಕು: ಅಶೋಕ


Team Udayavani, Jan 6, 2022, 10:53 AM IST

7law

ಅಫಜಲಪುರ: ಕಾನೂನು ಕೇವಲ ವಕೀಲರು, ಪೊಲೀಸರಿಗೆ ಗೊತ್ತಿರಬೇಕಾದುದ್ದಲ್ಲ. ದೇಶದ ಜವಾಬ್ದಾರಿಯುತ ಎಲ್ಲ ಪ್ರಜೆಗಳಿಗೆ ಕಾನೂನಿನ ಮಾಹಿತಿ ಇರಬೇಕು ಎಂದು ಸಿವಿಲ್‌ ನ್ಯಾಯಾ ಧೀಶ ಟಿ.ಅಶೋಕ ಹೇಳಿದರು.

ಮಲ್ಲಾಬಾದ ಗ್ರಾಮದ ಶ್ರೀ ಹರ್ಷವರ್ಧನ ಡಿಗ್ರಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಅಫಜಲಪುರ, ತಾಲೂಕು ನ್ಯಾಯವಾದಿಗಳ ಸಂಘ ಅಫಜಲಪುರ ಮತ್ತು ಜ್ಞಾನಭಾರತಿ ಶಿಕ್ಷಣ ಸಂಸ್ಥೆ ಮಲ್ಲಾಬಾದ್‌ ಅವರ ಸಂಯುಕ್ತಾಶ್ರಯದಲ್ಲಿ ನಡೆದ ಜನಸಾಮಾನ್ಯರಿಗಾಗಿ ಕಾನೂನು ಮಾಹಿತಿ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಬಹಳಷ್ಟು ಜನರಿಗೆ ಸರಿಯಾಗಿ ಕಾನೂನಿನ ಮಾಹಿತಿ ಇರುವುದಿಲ್ಲ. ಇದು ನಿಜಕ್ಕೂ ಸರಿಯಾದ ಬೆಳವಣಿಗೆಯಲ್ಲ. ಅಲ್ಲದೇ ವಿದ್ಯಾರ್ಥಿಗಳು ತಮ್ಮ ಓದುವ ವಯಸ್ಸಿನಲ್ಲಿ ಸಿನಿಮಾ, ಹಾಡು, ಮೊಬೈಲ್‌ಗ‌ಳಿಂದ ಪ್ರೇರಣೆಗೊಂಡು ಪ್ರೀತಿ, ಪ್ರಣಯ ಅಂತೆಲ್ಲ ಅಮೂಲ್ಯ ಸಮಯ ವ್ಯರ್ಥ ಮಾಡಿಕೊಳ್ಳುತ್ತಾರೆ. ಆದರೆ ಅಸಲಿಗೆ ಅವರು ತಮ್ಮ ಭವಿಷ್ಯವನ್ನು ಕೂಡ ಹಾಳು ಮಾಡಿಕೊಳ್ಳುತ್ತಿರುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರಾವ ಕಡೆಗೂ ಮನಸ್ಸನ್ನು ಹರಿಬಿಡದೆ ಶ್ರದ್ಧೆಯಿಂದ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿಮ್ಮ ಪಾಲಕರು, ನೀವು ಕಲಿತ ಶಾಲೆ, ಕಾಲೇಜುಗಳಿಗೆ ಹೆಮ್ಮೆ ತರುವಂತ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಹಿರಿಯ ವಕೀಲರಾದ ಎಸ್‌.ಜಿ ಹುಲ್ಲೂರ, ಕೆ.ಜಿ. ಪೂಜಾರಿ ಮಾತನಾಡಿ, ಜನನ ಮರಣ ನೋಂದಣಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಸಂಗಣ್ಣ ಎಂ. ಸಿಂಗೆ ಆನೂರ ಮಾತನಾಡಿ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದವರು ಗ್ರಾಮೀಣ ಭಾಗಗಳಿಗೆ ಬಂದು ಜನರಿಗೆ ಕಾನೂನಿನ ಮಾಹಿತಿಯನ್ನು ಉಚಿತವಾಗಿ ನೀಡುವ ಮೂಲಕ ಜನಸಾಮಾನ್ಯರಲ್ಲಿ ಕಾನೂನಿನ ಪ್ರಜ್ಞೆ ಮೂಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಜನಸಾಮಾನ್ಯರು, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಿ ಕಾನೂನಿನ ಅರಿವು ಮೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವಕೀಲರಾದ ಮಲ್ಲಣಗೌಡ ಪಾಟೀಲ್‌, ಸುರೇಶ ಅವಟೆ, ಸಿದ್ರಾಮಯ್ಯ ಹಿರೇಮಠ, ಗಡಿನಾಡು ಹೋರಾಟಗಾರ ಸದ್ದಾಂಹುಸೇನ್‌ ನಾಕೇದಾರ, ಸಂಸ್ಥೆಯ ಸಿಬ್ಬಂದಿ ಯಲ್ಲಾಲಿಂಗ ಪೂಜಾರಿ, ನಿಂಗಣ್ಣ ಪೂಜಾರಿ, ಸುಧಿಧೀರಕುಮಾರ ಬಿಂಜಗೇರಿ, ನಬಿ ದೇವರಮನಿ, ಶಾಹಿನ್‌ ದೇವರಮನಿ, ಮಲ್ಲಯ್ಯ ಮಠ ಇದ್ದರು. ಯಲ್ಲಾಲಿಂಗ ಮೈಲಾರಿ ನಿರೂಪಿಸಿದರು. ಗುರು ಮಗಿ ವಂದಿಸಿದರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.