ಮಿತಿ ಮೀರಿದೆ ಡಾ| ಜಾಧವ ಸುಳ್ಳು : ರಾಠೊಡ


Team Udayavani, Dec 8, 2021, 12:32 PM IST

1-fff

ಚಿಂಚೋಳಿ: ರಾಜ್ಯದಲ್ಲಿ ಈಗಾಗಲೇ ಪರಿಶಿಷ್ಟ ಜಾತಿಯಲ್ಲಿ ಇರುವ ಬಂಜಾರಾ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಶ್ರೀ ರಾಮರಾವ್‌ ಮಹಾರಾಜರು ಹಾಗೂ ಆಲ್‌ ಇಂಡಿಯಾ ಬಂಜಾರಾ ಸಮಾಜದ ಅಧ್ಯಕ್ಷ ಮಹಾರಾಷ್ಟ್ರದ ಶಂಕರ ಪವಾರ ತಮ್ಮ ಕೈಯಿಂದಲೇ ಪ್ರಧಾನ ಮಂತ್ರಿಗಳಿಗೆ 2020ರ ಮೇ 3ರಂದು ಬರೆದಿರುವ ಪತ್ರಗಳನ್ನು ಕಾಂಗ್ರೆಸ್‌ ಮುಖಂಡ ಸುಭಾಷ ರಾಠೊಡ ಬಹಿರಂಗ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಸಂಸದ ಡಾ| ಉಮೇಶ ಜಾಧವ ಮಿತಿ ಮೀರಿ ಸುಳ್ಳು ಹೇಳುತ್ತಿದ್ದಾರೆ. ಸಮಾಜವನ್ನು ಎಸ್‌ ಟಿಗೆ ಸೇರಿಸಬೇಕು ಎನ್ನುವ ನಿಲುವು ಸಮಾಜ ವಿರೋಧಿಯಾಗಿದೆ ಎಂದರು. “ದೇಶಕೆ ಸಬೀ ಬಂಜಾರೆ (ಲಮಾಣಿ) ಸಮಾಜ ಕೋ ಏಕ್‌ ಸೂಚಿ ಆದಿವಾಸಿ(ಎಸ್‌ಟಿ) ದರ್ಜಾ ಪ್ರಾಪ್ತ ಹೋನಾ’ ಎನ್ನುವ ಬೇಡಿಕೆ ಈ ಪತ್ರಗಳಲ್ಲಿದೆ. ಈ ಕುರಿತು ಬಹಿರಂಗ ಪಡಿಸಿದರೂ ಅರ್ಥವಾಗದ ಹಾಗೆ ನಾಟಕ ಆಡುತ್ತಿದ್ದಾರೆ. ಈಗಾಗಲೇ ರಾಜ್ಯದ ಬಂಜಾರಾ ಸಮಾಜದವರು ತಮ್ಮನ್ನು ಎಸ್‌ಟಿಗೆ ಸೇರಿಸಬಾರದು ಎಂದು 7.50 ಲಕ್ಷ ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದಾರೆ. ಕುಡಚಿ ಶಾಸಕ ಪಿ.ರಾಜೀವ ಅವರು ಸಂಸದ ಡಾ| ಉಮೇಶ ಜಾಧವ ಅವರು ಬಂಜಾರಾ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಪ್ರಯತ್ನ ಮಾಡಿದರೆ ಅವರ ವಿರುದ್ಧ ಸಮಾಜದ ವತಿಯಿಂದ ನೋಟಿಸ್‌ ಜಾರಿ ಮಾಡಲಾಗುವುದು ಎಂದು ಈಗಾಗಲೇ ಎಚ್ಚರಿಸಿರುವುದನ್ನು ತಿಳಿಸಿದರು.

ಕಲಬುರಗಿ ಸಂಸದ ಡಾ| ಉಮೇಶ ಜಾಧವ ಕೇವಲ ಪ್ರಿಯಾಂಕ್‌ ಖರ್ಗೆ ಕುರಿತು ಸುಳ್ಳು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಚಿಂಚೋಳಿ ಮತಕ್ಷೇತ್ರದ ಶಾಸಕರಾಗಿದ್ದಾಗ ಅವರು ತಾಲೂಕಿಗೆ ಮಾಡಿದ ಅಭಿವೃದ್ಧಿ ಸಾಧನೆ ಏನು ಎಂಬುದೇ ಗೊತ್ತಿಲ್ಲ. ಹಿರಿಯರಿಗೆ ಕಾಲು ಬಿದ್ದು ಆಶೀರ್ವಾದ ಪಡೆದುಕೊಳ್ಳುವುದು ಗೌರವದ ಲಕ್ಷಣ. ಅದು ಗುಲಾಮತನ ಲಕ್ಷಣ ಅಲ್ಲ. ಹಿರಿಯರಿಗೆ ಗೌರವ ನೀಡುವುದು ನಮ್ಮ ದೇಶದ ಸಂಸ್ಕೃತಿಯಾಗಿದೆ ಎಂದರು. ಕೇಂದ್ರ ಸರ್ಕಾರಿ ನೌಕರನಾಗಿ ಉತ್ತಮ ಸಾಧನೆ ಮಾಡಿದ್ದರಿಂದ ತಮ್ಮನ್ನು ಕಾಂಗ್ರೆಸ್‌ ಪಕ್ಷ ರಾಜಕೀಯಕ್ಕೆ ಕರೆತಂದಿದೆ. ತಾವು ಯಾರ ಕಾಲು ಬಿದ್ದಿಲ್ಲವೆಂದು ಹೇಳಿದ್ದಾರೆ. ಆತ್ಮ ಮುಟ್ಟಿಕೊಂಡು ಕೇಳಿಕೊಳ್ಳಿ. ನಂತರ ವ್ಯಕ್ತಿತ್ವ ತಿದ್ದುಪಡಿ ಮಾಡಿಕೊಂಡು ಇತರಿಗೆ ಮಾದರಿಯಾಗಿ ಎಂದು ಹೇಳಿದರು. ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಡಿಯಲ್ಲಿ ಕಲಬುರಗಿ ಸಂಸದರು ಚಿಂಚೋಳಿ ಶಾಸಕರಾಗಿದ್ದಾಗ ಕಳಪೆದರ್ಜೆ ಕಾಮಗಾರಿ ನಡೆದಿದೆ ಎಂದು ತನಿಖೆ ನಡೆಸಬೇಕೆಂದು ಪ್ರಿಯಾಂಕ್‌ ಖರ್ಗೆ ವಿಧಾನಸಭೆ ಅ ಧಿವೇಶನದಲ್ಲಿ ಚರ್ಚಿಸಿದ್ದಾರೆ.

ಶಾಸಕ ಡಾ| ಅವಿನಾಶ ಜಾಧವ ತನಿಖೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಆದರೆ ಇನ್ನುವರೆಗೆ ಯಾಕೆ ತನಿಖೆಯಾಗಿಲ್ಲ ಎಂದು ಪ್ರಶ್ನಿಸಿದರು. ಕಲಬುರಗಿ ಸಂಸದರು ತಮ್ಮ ಕ್ಷೇತ್ರದ ವ್ಯಾಪ್ತಿ ಬಿಟ್ಟು ಚಿಂಚೋಳಿ ಮತಕ್ಷೇತ್ರಕ್ಕೆ ಹೆಚ್ಚು ಭೇಟಿ ನೀಡುತ್ತಾರೆ ಯಾಕೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿಲ್ಲ. ಉಳಿದ ಮತಕ್ಷೇತ್ರಗಳಿಗೆ ಎಷ್ಟು ಸಲ ಸಂಸದರು ಭೇಟಿ ನೀಡಿದ್ದಾರೆ ಎಂದು ಅವರೇ ಉತ್ತರಿಸಬೇಕು ಎಂದು ಹೇಳಿದರು. ಕಾಂಗ್ರೆಸ್‌ ಪಕ್ಷದ ಪರವಾಗಿ ಗ್ರಾಪಂ ಸದಸ್ಯರು ಬೆಂಬಲ ನೀಡುತ್ತಿರುವುದರಿಂದ ಶಿವಾನಂದ ಪಾಟೀಲ ಮರತೂರ ಗೆಲುವು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭೀಮರಾವ್‌ ಟಿ.ಟಿ, ಬಸವರಾಜ ಮಲಿ, ಶರಣು ಪಾಟೀಲ ಮೋತಕಪಳ್ಳಿ, ಪುರಸಭೆ ಉಪಾಧ್ಯಕ್ಷ ಶಬ್ಬೀರ್‌ ಅಹೆಮದ್‌, ಗೋಪಾಲರಾವ್‌ ಕಟ್ಟಿಮನಿ, ಗಣಪತರಾವ್‌, ಖಲೀಲ ಪಟೇಲ್‌, ಬಸವರಾಜ ಕಡಬೂರ ಇದ್ದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.