ಅಗ್ನಿಪಥ ಯೋಜನೆ ವಿರೋಧಿಸಿ ರೈತರ ಪ್ರತಿಭಟನೆ
Team Udayavani, Jun 25, 2022, 11:45 AM IST
ಕಲಬುರಗಿ: ದೇಶದಲ್ಲಿ ಜಾರಿಗೆ ತರುತ್ತಿರುವ ಅಗ್ನಿಪಥ ಯೋಜನೆ ರೈತ ವಿರೋಧಿಯಾಗಿದೆ. ಇದು ರೈತರ ವಿರುದ್ಧ ಕೇಂದ್ರ ಸರಕಾರದ ಸೇಡಿನ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.
ಪ್ರತಿಭಟನೆಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ದೇಶದ ಯೋಧರು ಎಂದರೆ ಸಮವಸ್ತ್ರ ಧರಿಸಿದ ರೈತರು ಇದ್ದಂತೆ. ಬಹುತೇಕ ಸೈನಿಕರು ರೈತಾಪಿ ಕುಟುಂಬದಿಂದ ಬಂದವರು. ಸೈನ್ಯದ ಉದ್ಯೋಗ ಎಂಬುದು ಲಕ್ಷಾಂತರ ರೈತ ಕುಟುಂಬಗಳ ಹೆಮ್ಮೆ ಹಾಗೂ ಆರ್ಥಿಕ ಭದ್ರತೆಯ ಆಧಾರದ ಧ್ಯೋತಕವಾಗಿದೆ. ಆದ್ದರಿಂದ ಅಗ್ನಿಪಥ ಯೋಜನೆ ವಿರೋಧಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಘೋಷಣೆ ಮಾಡಿದರು.
ಯೋಜನೆಯ ಅಖೀಲ ಭಾರತ ಎಲ್ಲ ಶ್ರೇಣಿ ನಿಯಮದ ಅಡಿಯ ನೇಮಕಾತಿಯಲ್ಲಿ ರೈತ ಚಳವಳಿ ತುಂಬಾ ಕ್ರಿಯಾಶೀಲವಾಗಿರುವ ಪ್ರದೇಶಗಳ ನೇಮಕಾತಿ ಪ್ರಮಾಣವನ್ನು ಬಹಳ ದೊಡ್ಡ ರೀತಿಯಲ್ಲಿ ಕಡಿತ ಮಾಡಿರುವುದು ಆಕಸ್ಮಿಕವಾಗಿ ಆಗಿರುವಂತದ್ದಲ್ಲ. ರೈತ ಚಳವಳಿ ಕಾರಣದಿಂದ ಸೋತು ಕಂಗಾಲಾಗಿದ್ದ ಸರ್ಕಾರ ರೈತರ ಮೇಲೆ ಸೇಡು ತೀರಿಸಿಕೊಳ್ಳಲು ಆಡುತ್ತಿರುವ ಮತ್ತೊಂದು ದುರುದ್ದೇಶದ ಆಟ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಅಖೀಲ ಭಾರತ ಕಿಸಾನ್ ಮಹಾಸಭಾ ಜಿಲ್ಲಾಧ್ಯಕ್ಷ ಮೌಲಾ ಮುಲ್ಲಾ, ಆರ್ ಕೆಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್.ಬಿ., ಕರ್ನಾಟಕ ರಾಜ್ಯ ರೈತ ಸಂಘದ ಪುಟ್ಟಣ್ಣಯ್ಯ ಬಣದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ತಾಂಬೆ, ಭೀಮಾಶಂಕರ್ ಮಾಡ್ಯಾಳ್, ಉಮಾಪತಿ ಮಾಲಿ ಪಾಟೀಲ, ಮಲ್ಲಣಗೌಡ, ಎಸ್. ಆರ್. ಕೊಲ್ಲೂರ್, ಎ.ಬಿ. ಹೊಸಮನಿ, ಅರ್ಜುನ್ ಗೊಬ್ಬೂರ್, ಭೀಮರಾಯ್ ಮುದಬಸಪ್ಪಗೋಳ್, ಫರಖಾನ್ ಹೆಬಳಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ