5ರಂದು ಪ್ರಥಮ ಪ್ರಜೆ ಆಯ್ಕೆಗೆ ಮುಹೂರ್ತ


Team Udayavani, Jan 28, 2022, 10:22 AM IST

2selection

ಕಲಬುರಗಿ: ಕಳೆದ ನವೆಂಬರ್‌ 20ರಂದು ನಿಗದಿಯಾಗಿ ಮುಂದೂಡಲ್ಪಟ್ಟ ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪಮೇಯರ್‌ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಬರುವ ಫೆಬ್ರವರಿ 5ರಂದು ಚುನಾವಣೆಗೆ ದಿನಾಂಕ ಅಂತಿಮಗೊಳಿಸಿ ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.

ಫೆ. 5ರಂದು ಬೆಳಗ್ಗೆ 10:30ಗಂಟೆ ಒಳಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದು ತದನಂತರ ಮಧ್ಯಾಹ್ನ 12:30ಕ್ಕೆ ಅಗತ್ಯಬಿದ್ದಲ್ಲಿ ಚುನಾವಣೆಗೆ ಸಮಯ ಹಾಗೂ ದಿನಾಂಕ ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕಳೆದ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಚುನಾವಣೆ ನಡೆದು ಐದು ತಿಂಗಳ ಬಳಿಕ ಪ್ರಥಮ ಪ್ರಜೆ ಆಯ್ಕೆ ನಡೆಯುತ್ತಿದೆ.

ಮೇಯರ್‌-ಉಪಮೇಯರ್‌ ಚುನಾವಣೆ ಜತೆಗೆ ಸ್ಥಾಯಿ ಸಮಿತಿಗಳ ಚುನಾವಣೆಯೂ ನಡೆಯಲಿದೆ. ಕಳೆದ ಡಿ.10ರಂದು ನಡೆದ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಚುನಾವಣೆಯು ಎಂಎಲ್‌ಸಿ ಚುನಾವಣೆ ಫ‌ಲಿತಾಂಶ ಪ್ರಕಟವಾದ ತಿಂಗಳ ಬಳಿಕ ಈಗ ಚುನಾವಣೆಗೆ ಮುಹೂರ್ತ ನಿಗದಿಪಡಿಸಲಾಗಿದೆ.

ಪಾಲಿಕೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ರಾಜ್ಯದ ಗಮನ ಸೆಳೆದಿದ್ದವು. ಜೆಡಿಎಸ್‌ ಬೆಂಬಲದೊಂದಿಗೆ ಅಧಿಕಾರಕ್ಕೆ ಬರುವುದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ರಾಷ್ಟ್ರ ನಾಯಕರು ಸಹ ಚರ್ಚೆ ನಡೆಸಿದ್ದರ ಹಿನ್ನೆಲೆಯಲ್ಲಿ ಪ್ರಥಮ ಪ್ರಜೆ ಆಯ್ಕೆ ಕುತೂಹಲ ಕೆರಳಿಸಿತ್ತು.

ಐವರು ಸದಸ್ಯರ ಹೆಸರು ಸೇರ್ಪಡೆ

ಮೇಯರ್‌ ಚುನಾವಣೆಯ ಚಟುವಟಿಕೆಗಳು ಆರಂಭವಾದಾಗಿನಿಂದ ಮತದಾರರ ಪಟ್ಟಿಯಲ್ಲಿ ಯಾರ್ಯಾರು ಸೇರಿದ್ದಾರೆಂಬುದೇ ಕುತೂಹಲಕ್ಕೆ ಕಾರಣವಾಗಿದೆ. ಪಾಲಿಕೆಯ 55 ಸದಸ್ಯರ ಜತೆಗೆ ಇಬ್ಬರು ಸಂಸದರು, ಮೂವರು ಶಾಸಕರು, ಮೂವರು ವಿಧಾನಪರಿಷತ್‌ ಸದಸ್ಯರು ಸೇರಿ ಒಟ್ಟು 63 ಸದಸ್ಯ ಬಲಾಬಲದ ಮತದಾರರ ಪಟ್ಟಿ ಹೊಂದಲಾಗಿತ್ತು. ಆದರೆ ಭಾರತೀಯ ಜನತಾ ಪಕ್ಷದ ಏಳು ವಿಧಾನ ಪರಿಷತ್‌ ಸದಸ್ಯರ ಹೆಸರು ಸೇರಿಸಲು ಮುಂದಾಗಿ, ಅದರಲ್ಲಿ ಕೊನೆಗೆ ಐವರ ಹೆಸರು ಮತದಾರರ ಪಟ್ಟಿ ಯಲ್ಲಿ ಸೇರ್ಪಡೆಗೊಂಡು ಅಂತಿಮವಾಗಿ 68ಕ್ಕೇರಿದೆ. ಹೀಗಾಗಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲು 35 ಸದಸ್ಯ ಬಲಾಬಲಬೇಕು. ಬಿಜೆಪಿಯಲ್ಲಿ 23 ಸದಸ್ಯರು ಗೆದ್ದಿದ್ದು, ಓರ್ವ ಪಕ್ಷೇತರ ಸದಸ್ಯ ಡಾ| ಶಂಭುಲಿಂಗ ಬಳಬಟ್ಟಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ 24ಕ್ಕೆ ಏರಿಕೆಯಾಗಿದೆ. ಇದಲ್ಲದೇ ಇಬ್ಬರು ಶಾಸಕರು, ಮೊದಲಿನ ಮೂವರು ವಿಧಾನ ಪರಿಷತ್‌ ಸದಸ್ಯರು ಹಾಗೂ ಹೊಸದಾಗಿ ಸೇರ್ಪಡೆಯಾದ ಐವರು ವಿಧಾನ ಪರಿಷತ್‌ ಸದಸ್ಯರು ಹಾಗೂ ಓರ್ವ ಸಂಸದ ಸೇರಿದರೆ ಬಿಜೆಪಿ ಬಲಾಬಲ 35ಕ್ಕೆ ಏರಿದಂತಾಗುತ್ತದೆ. 68 ಸದಸ್ಯ ಬಲಾಬಲದಲ್ಲಿ ಬಹುಮತಕ್ಕೆ 35 ಸದಸ್ಯರು ಬೇಕು. ಹೀಗಾಗಿ ಬಿಜೆಪಿ ನಿಶ್ಚಿತವಾಗಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಜೆಡಿಎಸ್‌ ಬೆಂಬಲವಿಲ್ಲದೇ ಬಿಜೆಪಿ ಅಧಿಕಾರಕ್ಕೆ ಬರಲಿದೆ.

ಮೀಸಲಾತಿ ಬದಲಾವಣೆಗೆ ಆಕ್ಷೇಪ

ಕಳೆದ ನ. 20ರಂದು ನಿಗದಿಯಾಗಿದ್ದ ಚುನಾವಣೆ ಮುಂದೂಡಲ್ಪಟ್ಟಿದೆ. ಆದರೆ ಮೇಯರ್‌ -ಉಪಮೇಯರ್‌ ಮೀಸಲಾತಿ ಬದಲಾವಣೆ ಆಗುವುದು ಯಾವ ನ್ಯಾಯ ಹಾಗೂ ಅದ್ಹೇಗೆ? ಎಂದು ಪಾಲಿಕೆ ಸದಸ್ಯರು ಪ್ರಶ್ನಿಸುತ್ತಿದ್ದಾರೆ. ಈ ಮೊದಲು ಮೇಯರ್‌ ಸಾಮಾನ್ಯ ಮಹಿಳೆ, ಉಪ ಮೇಯರ್‌ ಸ್ಥಾನ ಹಿಂದುಳಿದ ವರ್ಗ “ಬ’ ಕ್ಕೆ ಮೀಸಲಾಗಿತ್ತು. ಆದರೆ ಈಗ ಮೇಯರ್‌ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.