ಖಾತ್ರಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಒತ್ತಾಯ


Team Udayavani, Apr 21, 2022, 11:40 AM IST

6appeal

ಆಳಂದ: ಬೇಸಿಗೆಯ ವಿಪರೀತ ಬಿಸಿಲಿನಲ್ಲೂ ಉದ್ಯೋಗ ಖಾತ್ರಿ ಕಾಮಗಾರಿ ಕೈಗೊಳ್ಳುವ ಕಾರ್ಮಿಕರಿಗೆ ದಿನದ ಎರಡು ಬಾರಿ ಹಾಜರಿ ಹಾಕುವ ಕ್ರಮ ಕೈಬಿಟ್ಟು ಕಾರ್ಮಿಕರಿಗೆ ಅನುಕೂಲ ಒದಗಿಸಲು ಮಧ್ಯಾಹ್ನದ ಹಾಜರಾತಿ ರದ್ದುಗೊಳಿಸಬೇಕು ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತಾಪಂ ಕಚೇರಿ ಎದುರು ಬುಧವಾರ ಅಖೀಲಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕೃಷಿ ಕೂಲಿಕರಾರರ ಸಂಘ, ದಲಿತ ಸಮನ್ವಯ ಸಮಿತಿಗಳ ತಾಲೂಕು ಘಟಕಗಳು ಜಂಟಿಯಾಗಿ ಉದ್ಯೋಗ ಖಾತ್ರಿ ಕಾರ್ಮಿಕರ ಬೇಡಿಕೆಗೆ ಒತ್ತಾಯಿಸಿ ಕೈಗೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಾರ್ಮಿಕರು ಬೆಳಗಿನಿಂದ 7ಗಂಟೆಯಿಂದ 11ಗಂಟೆ ವರೆಗೆ ಕೆಲಸ ನಿರ್ವಹಿಸಿ ಹಾಜರಿ ಹಾಕಿ ಮನೆಗೆ ಹೋಗುತ್ತಾರೆ. ಆದರೆ ಸರ್ಕಾರ ಸಮಯದ ಮಿತಿ ಹೇರಿ ಎರಡು ಬಾರಿ ಹಾಜರಿಯ ಮಿತಿ ಹೇರಿದ್ದರಿಂದ ಕಾರ್ಮಿಕರು ದಿನವಿಡಿ ಕೆಲಸ ಮಾಡಿದರೂ ಹಾಜರಿ ಹಾಕಲು ಸ್ಥಳದಲ್ಲೇ ಸಂಜೆಯ ವರೆಗೆ ಕುಳಿತುಕೊಳ್ಳುತ್ತಿರುವುದರಿಂದ ಬೇಸಿಗೆ ಧಗೆಗೆ ತೊಂದರೆ ಪಡುವಂತಾಗಿದೆ. ಕೂಡಲೇ ಸರ್ಕಾರ ಸಮಯದ ಮಿತಿ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.

ಹೊಸ ಆ್ಯಫ್‌ ಬಳಸುತ್ತಿರುವುದರಿಂದ (ಎನ್‌ಎಂಎಂಎಸ್‌) ಕೃಷಿ ಕೂಲಿಕಾರರಿಗೆ ತೊಂದರೆ ಆಗುತ್ತಿದೆ. ಬೇಸಿಗೆ ತಾಪ ಮಾನ ಹೆಚ್ಚುತ್ತಿದ್ದು, ಮಧ್ಯಾಹ್ನ 2ಗಂಟೆಗೆ ಆನ್‌ಲೈನ್‌ ಹಾಜರಾತಿ ಕಡ್ಡಾಯಗೊಳಿಸಿದ್ದರಿಂದ ತೊಂದರೆ ಆಗುತ್ತಿದೆ. ಸರ್ಕಾರ ಕೂಡಲೇ ಆನ್‌ ಲೈನ್‌ ಹಾಜರಾತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಪಾಂಡುರಂಗ ಮಾವೀ ನಕರ್‌, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಸುಧಾಮ ಧನ್ನಿ ಮಾತನಾಡಿ, ಉದ್ಯೋಗ ಖಾತ್ರಿ ಕಾಮಗಾರಿಯಡಿ ಒಂದು ವಾರ ಕೆಲಸ ಕೊಟ್ಟು ನಾಲ್ಕು ವಾರ ಬಿಡುವು ಮಾಡದೇ ನಿರಂತರವಾಗಿ ಕೆಲಸ ನೀಡಬೇಕು. ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ 600 ರೂ. ನೀಡಬೇಕು ಎಂದು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ತಾಪಂ ಇಒಗೆ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ಡಾ| ಸಂಜಯ ರೆಡ್ಡಿ ಮಾತನಾಡಿ, ಮನವಿಯನ್ನು ಸರ್ಕಾರಕ್ಕೆ ಕಳುಹಿಸ ಲಾಗುವುದು ಎಂದು ತಿಳಿಸಿದರು. ಬಂಡಾಯ ಸಾಹಿತಿ ಡಾ| ಪ್ರಭು ಖಾನಾಪುರೆ, ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಮಲ್ಲಮ್ಮ ಜಿಡಗಾ, ಕಾರ್ಯದರ್ಶಿ ಸುಮಂಗಲಾ, ಶಶಿಕಲಾ ಪಾಟೀಲ ಕಡಗಂಚಿ, ರೂಪದೇವಿ, ಇಂದುಮತಿ, ಫಯಾಜ್‌ ಪಟೇಲ್‌ ಮತ್ತಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.