ಭೂ ಸುಧಾರಣೆ ಕಾಯ್ದೆ ಹಿಂಪಡೆಯಲು ಒತ್ತಾಯ
Team Udayavani, Jan 26, 2022, 12:29 PM IST
ಜೇವರ್ಗಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯುವಂತೆ ಹಾಗೂ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ, ಸಿಪಿಐ (ಎಂ), ಸಿಪಿಐ (ಎಂಎಲ್), ಎಐಎಫ್ಬಿ, ಆರ್ ಪಿಐ, ಸ್ವರಾಜ್ ಇಂಡಿಯಾ ಸಂಘಟನೆಗಳ ವತಿಯಿಂದ ತಾಲೂಕಿನ ಕೆಲ್ಲೂರ ಗ್ರಾಮದಲ್ಲಿ ಮನೆ-ಮನೆಯಿಂದ ಎನ್ನುವ ವಿನೂತನ ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು, ಲಾಕ್ಡೌನ್-ವೀಕೆಂಡ್ ಕರ್ಫ್ಯೂ ಸಂತ್ರಸ್ತರಿಗೆ ಪರಿಹಾರ ನೀಡಿ, ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು. ಮನೆ ಆರೈಕೆಯಲ್ಲಿರುವ ಕೋವಿಡ್ ಸೋಂಕಿತರಿಗೆ ನೆರವು ನೀಡಬೇಕು. ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಿ, ಮೃತರಿಗೆ ಪರಿಹಾರ ನೀಡಬೇಕು. ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೇರ ಹಣ ವರ್ಗಾವಣೆ ಮಾಡಬೇಕು. ತಲಾ 10 ಕೆ.ಜಿ ಉಚಿತ ಪಡಿತರ ನೀಡಬೇಕು. ಶಾಲೆ-ಕಾಲೇಜಿನ ಶುಲ್ಕ ಮನ್ನಾ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯಬೇಕು. 200 ದಿನಗಳ ಉದ್ಯೋಗ ಖಾತ್ರಿ ಒದಗಿಸಿ, ನಗರದಲ್ಲೂ ಖಾತ್ರಿ ಯೋಜನೆ ಜಾರಿಗೊಳಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡ ಸುಭಾಷ ಹೊಸಮನಿ ಆಗ್ರಹಿಸಿದರು.
ಕಮ್ಯುನಿಸ್ಟ್ ಪಕ್ಷದ ಮಹಾದೇವ ಕೆಲ್ಲೂರ, ಮಲ್ಲಿಕಾರ್ಜುನ ದೊಡ್ಡಮನಿ, ಶಿವು, ಮಲ್ಲಿಕಾರ್ಜುನ ಕೆಲ್ಲೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ