ಗಡಿಯಲ್ಲಿ ಮತ್ತೆ ಫುಲ್ ಟೈಟ್
Team Udayavani, Nov 29, 2021, 11:30 AM IST
ಆಳಂದ: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೋವಿಡ್-19 ಹೊಸ ರೂಪಾಂತರ ಒಮಿಕ್ರಾನ್ ಜೊತೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಮಹಾರಾಷ್ಟ್ರಕ್ಕೆ ಹೊಂದಿಕೊಂಡ ಖಜೂರಿ ಮತ್ತು ಹಿರೋಳಿ ಗಡಿಯಲ್ಲಿ ಹೊರಗಿನ ಪ್ರವೇಶಕ್ಕೆ ರವಿವಾರದಿಂದ ನಾಕಾಬಂಧಿ ವಿಧಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ಹಿರೋಳಿ, ಖಜೂರಿ ಗಡಿಯಲ್ಲಿ ಕೋವಿಡ್ ವರದಿ ತಪಾಸಣೆಗಾಗಿ ಚೆಕ್ಪೋಸ್ಟ್ ಸ್ಥಾಪಿಸಿ ಕಾರ್ಯಾರಂಭಿಸಿದೆ. ಕಲಬುರಗಿ ಜಿಲ್ಲೆ ಅಥವಾ ತಾಲೂಕುಗಳಿಗೆ ಪ್ರವೇಶ ಬಯಸುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ನ್ನು ನೀಡುವುದು ಕಡ್ಡಾಯವಾಗಿದೆ. ಈ ವರದಿ ಇಲ್ಲದಿದ್ದಲ್ಲಿ ರಾಜ್ಯದೊಳಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗದು ಎಂದು ಮೂಲಗಳು ಹೇಳಿಕೊಂಡಿವೆ. ಆದರೆ ಇದನ್ನು ಎಷ್ಟರ ಮಟ್ಟಿಗೆ ಸ್ಥಳೀಯ ಅಧಿಕಾರಿಗಳು ಜಾರಿಗೆ ತರುತ್ತಾರೆ ಎಂಬುದನ್ನು ಕಾಯ್ದುನೋಡಬೇಕಿದೆ.
ಈ ಹಿಂದೆ ಲಾಕ್ಡೌನ್ ಮುಗಿದ ಕೆಲವು ತಿಂಗಳ ವರೆಗೆ ಜಾರಿಯಲ್ಲಿದ್ದ ತಪಾಸಣೆ ಮತ್ತು ಅದರ ಹೆಸರಿನಲ್ಲಿ ದುರ್ಬಳಕೆಯೇ ಹೆಚ್ಚಾಗಿ ಜನರ ಆಕ್ರೋಶಕ್ಕೆ ಕಾರಣವಾಗಿ, ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವ ಹೊತ್ತಿನಲ್ಲೇ ಮತ್ತೆ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ವಿಧಿಸಿದ ತಪಾಸಣೆ, ಚೆಕ್ಪೋಸ್ಟ್ ಕಾರ್ಯವೈಖರಿ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಸಾಗಲಿ ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಖಜೂರಿ, ಹಿರೋಳಿ ಮತ್ತು ಉಪ ಕೇಂದ್ರಗಳಾದ ಮಾದನಹಿಪ್ಪರಗಾ, ನಿಂಬಾಳದಲ್ಲಿ ಮೊದಲಿನಿಂದಲೇ ಕೋವಿಡ್ ತಪಾಸಣೆಗಾಗಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಈಗ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. -ಯಲ್ಲಪ್ಪ ಸುಬೇದಾರ ತಹಸೀಲ್ದಾರರು ಆಳಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು