ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಗುರುಕರ್‌


Team Udayavani, May 11, 2022, 11:29 AM IST

8flood

ಕಲಬುರಗಿ: ಮುಂಗಾರಿನಲ್ಲಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಸಕಲ ರೀತಿಯಿಂದ ಸಜ್ಜಾಗಬೇಕು. ವಾಡಿಕೆಗಿಂತ ಶೇ.20ರಷ್ಟು ಹೆಚ್ಚು ಮಳೆ ಬೀಳುವ ಮುನ್ಸೂಚನೆ ಇದೆ. ಮುಂದಿನ 20 ದಿನದಲ್ಲಿ ಸನ್ನದ್ಧರಾಗಿ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌ ಸೂಚಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಪ್ರವಾಹದಿಂದ ಅಫಜಲಪುರ, ಜೇವರ್ಗಿ, ಚಿತ್ತಾಪುರ, ಶಹಾಬಾದ ತಾಲೂಕಿನ 150ಕ್ಕೂ ಹೆಚ್ಚಿನ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿ ಜನ ಜೀವನ ಅಸ್ತವ್ಯಸ್ಥವಾಗಿತ್ತು. ಈ ಬಾರಿ ಇದರ ನಿಯಂತ್ರಣಕ್ಕೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.

ಜಿಲ್ಲೆಯಲ್ಲಿ ಮುಂದಿನ 10 ದಿನದಲ್ಲಿ ಬೀಳುವ ಮಳೆ ಕುರಿತು ಪ್ರತಿದಿನ ಮಾಹಿತಿ ಕಲೆ ಹಾಕಿ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಜೊತೆಗೆ ಭೀಮಾ ಜಲಾನಯನ ಪ್ರದೇಶದ ಮೇಲ್ಭಾಗವಾದ ಮಹಾರಾಷ್ಟ್ರದ ಉಜ್ಜಯಿನಿ, ವೀರ್‌ ಡ್ಯಾಂ ಪ್ರದೇಶದಲ್ಲಾಗುವ ಮಳೆ ಕುರಿತು ಮಾಹಿತಿ ಪಡೆದುಕೊಂಡಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬಹುದು. ಮಹಾರಾಷ್ಟ್ರದ ಜಲಾಶಯದ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು ಸಮನ್ವಯ ಸಾಧಿಸಬೇಕು ಎಂದು ಹೇಳಿದರು.

ಜಿಲ್ಲಾಡಳಿತದ ಜತೆ ಸಂಕರ್ಪ

ಪ್ರವಾಹ ಸಂದರ್ಭದಲ್ಲಿ ರಸ್ತೆ ಮುಳಗಡೆಯಾಗಿ ಸಂಪರ್ಕ ಕಡಿತ, ಕೆರೆ-ಕಟ್ಟೆ ಹಾನಿ, ಮಾನವ ಮತ್ತು ಪ್ರಾಣಿ ಹಾನಿ, ಬೆಳೆ ಹಾನಿ ಹೀಗೆ ಪ್ರವಾಹದ ಹಾನಿ ಬಗ್ಗೆ 72 ಗಂಟೆಯಲ್ಲಿ ಜಿಲ್ಲಾಡಳಿತಕ್ಕೆ ಪ್ರತಿಯೊಂದು ಮಾಹಿತಿ ನೀಡಬೇಕು. ಪ್ರವಾಹ ಸಂದರ್ಭದಲ್ಲಿ ಪರಿಹಾರ ನೀಡುವಲ್ಲಿ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ನಿಯಮಾವಳಿ ಕಟ್ಟುನಿಟಾಗಿ ಪಾಲಿಸಬೇಕು. ನಿಯಮಾವಳಿ ಬಿಟ್ಟು ಹೆಚ್ಚಿನ ದರದ ಬಿಲ್ಲು ಸಲ್ಲಿಸಿದಲ್ಲಿ ಅದನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರವಾಹದಿಂದ ಹಾನಿಯಾದ ಮನೆಗಳನ್ನು ಪಾರದರ್ಶಕವಾಗಿ ಜಂಟಿ ಸಮೀಕ್ಷೆ ಕೈಗೊಂಡು ವರದಿ ನೀಡಬೇಕು. ರಸ್ತೆ ದುರಸ್ತಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವುದೇ ಲೋಪದೋಷಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಮುಂಗಾರು ಮಳೆ ಉತ್ತಮವಾದಲ್ಲಿ ಬಿತ್ತನೆಗೆ ಬೇಕಾಗುವ ಬೀಜ, ರಸಗೊಬ್ಬರಗಳ ಅಗತ್ಯ ದಾಸ್ತಾನಿದೆ. ಯೂರಿಯಾಗೂ ಸಮಸ್ಯೆಯಿಲ್ಲ. 500 ಕ್ವಿಂಟಲ್‌ ಸೂರ್ಯಕಾಂತಿ ಬೀಜದ ಅವಶ್ಯಕತೆಯಿದೆ ಎಂದು ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸುಗೂರು ಸಭೆಗೆ ಮಾಹಿತಿ ನೀಡಿದರು. ಅಪರ ಡಿಸಿ ಭೀಮಾಶಂಕರ ತೆಗ್ಗೆಳ್ಳಿ ಹಾಗೂ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.