ಹುತಾತ್ಮ ರೈತರ ಕುಟುಂಬಕ್ಕೆ ಪರಿಹಾರ ನೀಡಿ
Team Udayavani, Nov 21, 2021, 12:37 PM IST
ಕಲಬುರಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟದಲ್ಲಿ ಹುತಾತ್ಮರಾದ ರೈತರ ಶಾಂತಿ ಕೋರಿ ಮತ್ತು ಕುಟುಂಬದವರಿಗೆ ಪರಿಹಾರ ಧನ ಮತ್ತು ಸರ್ಕಾರಿ ನೌಕರಿ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಶನಿವಾರ ಸಂಜೆ ನಗರದಲ್ಲಿ ಮೇಣದ ಬತ್ತಿ ಜಾಥಾ ನಡೆಸಲಾಯಿತು.
ನಗರದ ಗಾಂಧಿ ಪ್ರತಿಮೆ ಬಳಿ ಪಕ್ಷದ ಮುಖಂಡರು ಮೇಣದ ಬತ್ತಿ ಹಿಡಿದು ಮೃತರ ರೈತರಿಗೆ ಕೋರಿ, ಪ್ರಧಾನಿ ನರೇಂದ್ರ ಮೋದಿಯವರು ರೈತ ವಿರೋಧಿ ಕೃಷಿ ಕಾಯ್ದೆಗನ್ನು ವಾಪಸ್ ಪಡೆಯಬೇಕೆಂದು ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳು ಹೋರಾಟ ನಡೆಸಿದ್ದವು. ಈ ಪ್ರತಿಭಟನೆಗಳಲ್ಲಿ 700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರೂ ಮೋದಿ ಈ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಈ ಮೊದಲೇ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ಹೇಳಿದ್ದರೆ ರೈತರ ಜೀವಗಳು ಉಳಿಯುತ್ತಿದ್ದವು. ಈ ಎಲ್ಲ ರೈತರ ಸಾವಿಗೆ ಮೋದಿ ಅವರ ನಿರ್ಲಕ್ಷéವೇ ಕಾರಣವಾಗಿದೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಸಂತೋಷ ಬಿಲಗುಂದಿ, ಮಹಾಂತಪ್ಪ ಸಂಗಾವಿ, ನಿಲಕಂಠರಾವ ಮೂಲಗೆ, ಲಿಂಗರಾಜ ತಾರಫೈಲ್, ಡಾ| ಕಿರಣ ದೇಖಮುಖ, ಶಿವಾನಂದ ಹೊನಗುಂಟಿ, ಲತಾ ರಾಠೊಡ, ರವಿ ರಾಠೊಡ, ಈರಣ ಝಳಕಿ, ಅಮರ ಶಿರವಾಳ, ಧರ್ಮರಾಜ ಹೇರೂರ, ಶಿವಾನಂದ ತೋರವಿ, ಮಂಜುಳಾ ಪಾಟೀಲ, ಶಕುಂತಲಾ ಹಿರೇಮಠ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ