ನೀರು ನೀಡಿ ಪಕ್ಷಿ -ಪ್ರಾಣಿ ಉಳಿಸೋಣ
Team Udayavani, Apr 4, 2022, 11:58 AM IST
ಕಲಬುರಗಿ: ರಾಜ್ಯ ಮಾನವ ಹಕ್ಕುಗಳು ಹಾಗೂ ಪರಿಸರ ಸಂರಕ್ಷಣಾ ಸಮಿತಿ ಕಲಬುರಗಿ, ವನಸಿರಿ ಫೌಂಡೇಶನ್ ಸಹಯೋಗದೊಂದಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಏಪ್ರಿಲ್ ಫೂಲ್ ಬದಲು ಏಪ್ರಿಲ್ ಕೂಲ್ ಡೇ ಕಾರ್ಯಕ್ರಮವನ್ನು ಪಕ್ಷಿ ಪ್ರಾಣಿಗಳ ಉಳಿವಿಗಾಗಿ ಅರವಟ್ಟಿಗೆಗಳನ್ನು (ಮಡಿಕೆಗಳನ್ನು) ಮರಗಳಿಗೆ ಕಟ್ಟಿ ನೀರು ಹಾಕುವ ಮುಖಾಂತರ ವಿಭಿನ್ನವಾಗಿ ಆಚರಿಸಲಾಯಿತು.
ವಿಶ್ವವಿದ್ಯಾಲಯದ ಪೋಲಿಸ್ ಠಾಣೆ, ಡಿ. ದೇವರಾಜ ಅರಸು ಸ್ನಾತಕೋತ್ತರ ಬಾಲಕರ ಬಾಲಮಂದಿರ, ಅಂಬೇಡ್ಕರ್ ವಸತಿ ನಿಲಯದ ಮುಂಭಾಗದಲ್ಲಿ ಮರಗಳಿಗೆ ಅರವಟ್ಟಿಗೆಗಳನ್ನು ಕಟ್ಟುವ ಮೂಲಕ ಪಕ್ಷಿ-ಪ್ರಾಣಿಗಳಿಗೆ ನೀರುಣಿಸುವ ಕಾರ್ಯವನ್ನು ಪರಿಸರ ಸಂರಕ್ಷಣಾ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಮಾಡಿದರು.
ಇದೇ ಸಂದರ್ಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಪೋಲಿಸ್ ಠಾಣೆಯ ವೃತ್ತ ಆರಕ್ಷಕ ನೀರಿಕ್ಷರಾದ ಶಿವಾನಂದ ಘಾಣಿಗೇರ್ ಮಾತನಾಡಿ, ಈ ಉರಿ ಬಿಸಿಲಿನ ನಡುವೆ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾದುದು. ಈ ಕುರಿತು ಎಲ್ಲೆಡೆ ಜನಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳು ಹಾಗೂ ಪರಿಸರ ಸಂರಕ್ಷಣಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಶಿವಶರಣ ಪರಪ್ಪಗೋಳ ಜೋಗೂರ ಮಾತನಾಡಿ, 5 ವರ್ಷಗಳಿಂದ ಏಪ್ರಿಲ್ ಫೂಲ್ ಬದಲು ಏಪ್ರಿಲ್ ಕೂಲ್ ಡೇ ಕಾರ್ಯಕ್ರಮವನ್ನು ನಿರಂತರವಾಗಿ ಮಾಡುತ್ತಿದ್ದೇವೆ. ಏಪ್ರಿಲ್ ಫೂಲ್ ಮಾಡಿ ಮತ್ತೂಬ್ಬರನ್ನು ತಪ್ಪು ದಾರಿಗೆ ಕರೆದುಕೊಂಡು ಹೋಗುವ ಬದಲು ಏಪ್ರಿಲ್ ಕೂಲ್ ಡೇ ಮಾಡಿ ಪಕ್ಷಿ ಪ್ರಾಣಿಗಳಿಗೆ ನೀರಿಡುವ ಹಾಗೂ ಆಹಾರ ಧಾನ್ಯಗಳನ್ನು ಇಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕಿದೆ ಎಂದರು.
ವಿಶ್ವವಿದ್ಯಾಲಯದ ಪೋಲಿಸ್ ಠಾಣೆಯ ಪಿಎಸ್ಐ ಯಶೋಧಾ ಕಟಕೆ ಮಾತನಾಡಿದರು. ಗಣೇಶ ಚವ್ಹಾಣ, ಶಾಂತಲಿಂಗ ನಿಗದಿ, ಆಂಜನೇಯ ಪವಾರ, ದೀಪಕ್ ಗಾಯಕವಾಡ, ವಿಜಯಕುಮಾರ ಹಾಬಾನೂರ, ದಿಲೀಪ್ ಚವ್ಹಾಣ, ಮಾಣೀಕ್ ಜಮಾದಾರ,, ವಿಶ್ವನಾಥ, ರೇಣಕರಾಜ, ಜಗನ್ನಾಥ, ಬಸನಗೌಡ, ರಾಮ್, ಹಣಮಂತಗೌಡ, ಶ್ರೀಮಂತ, ಸೋನು, ಪ್ರದೀಪ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?